ಏಳನೇ ವೇತನ ಆಯೋಗ: ಸರ್ಕಾರಿ ಉದ್ಯೋಗಿಗಳ ಕನಿಷ್ಠ ವೇತನದಲ್ಲಿ ಎಷ್ಟು ಹೆಚ್ಚಳ? ಇಲ್ಲಿದೆ ಮಾಹಿತಿ

Published : Mar 24, 2023, 03:16 PM ISTUpdated : Mar 24, 2023, 03:26 PM IST
ಏಳನೇ ವೇತನ ಆಯೋಗ: ಸರ್ಕಾರಿ ಉದ್ಯೋಗಿಗಳ ಕನಿಷ್ಠ ವೇತನದಲ್ಲಿ ಎಷ್ಟು ಹೆಚ್ಚಳ? ಇಲ್ಲಿದೆ ಮಾಹಿತಿ

ಸಾರಾಂಶ

ಏಳನೇ ವೇತನ ಆಯೋಗದ ಶಿಫಾರಸ್ಸುಗಳು ಅನುಷ್ಠಾನಗೊಂಡ ಬಳಿಕ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಏನೆಲ್ಲ ಪ್ರಯೋಜನಗಳಾಗಿವೆ ಎಂಬ ಬಗ್ಗೆ ಕೇಂದ್ರ ಹಣಕಾಸು ಸಚಿವಾಲಯದ ರಾಜ್ಯ ಸಚಿವ ಪಂಕಜ್ ಚೌಧರಿ ಇತ್ತೀಚೆಗೆ ಲೋಕಸಭೆಗೆ ನೀಡಿದ ಲಿಖಿತ ಪ್ರತಿಕ್ರಿಯೆಯಲ್ಲಿ ಮಾಹಿತಿ ನೀಡಿದ್ದಾರೆ. ಏಳನೇ ವೇತನ ಆಯೋಗದಡಿಯಲ್ಲಿ ಕೇಂದ್ರ ಸರ್ಕಾರಿ ನೌಕರರ ಕನಿಷ್ಠ ವೇತನ ಹೆಚ್ಚಳ ಆರನೇ ವೇತನ ಆಯೋಗಕ್ಕೆ ಹೋಲಿಸಿದರೆ ಶೇ.14.3ರಷ್ಟಾಗಿದೆ.  

Business Desk:ಏಳನೇ ವೇತನ ಆಯೋಗದ ಶಿಫಾರಸ್ಸುಗಳ ಅನುಷ್ಠಾನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ಕನಿಷ್ಠ ವೇತನ ಹೆಚ್ಚಳ ಆರನೇ ವೇತನ ಆಯೋಗಕ್ಕೆ ಹೋಲಿಸಿದರೆ ಶೇ.14.3ರಷ್ಟಾಗಿದೆ. ಈ ಏರಿಕೆ ಆರನೇ ವೇತನ ಆಯೋಗದ (ಸಿಪಿಸಿ)ಹೆಚ್ಚಳಕ್ಕೆ ಹೋಲಿಸಿದರೆ ಕಡಿಮೆ. ಆರನೇ ವೇತನ ಆಯೋಗದಡಿಯಲ್ಲಿ ಸರ್ಕಾರಿ ನೌಕರರ ಕನಿಷ್ಠ ವೇತನ ಹೆಚ್ಚಳ ಐದನೇ ವೇತನ ಆಯೋಗಕ್ಕೆ ಹೋಲಿಸಿದರೆ ಶೇ.54ರಷ್ಟಿತ್ತು. ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಏಳನೇ ವೇತನ ಆಯೋಗದ ಪ್ರಯೋಜನಗಳ ಬಗ್ಗೆ ಲೋಕಸಭೆಯಲ್ಲಿ ಇತ್ತೀಚೆಗೆ ಲಿಖಿತ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಹಣಕಾಸು ಸಚಿವಾಲಯದ ರಾಜ್ಯ ಸಚಿವ ಪಂಕಜ್ ಚೌಧರಿ ಈ ಮಾಹಿತಿ ನೀಡಿದ್ದಾರೆ. ಇನ್ನು ಐದನೇ ವೇತನ ಆಯೋಗದಡಿಯಲ್ಲಿ ಕನಿಷ್ಠ ವೇತನ ಹೆಚ್ಚಳ ಅದಕ್ಕಿಂತ ಹಿಂದಿನ ಸಿಪಿಸಿಗೆ ಹೋಲಿಸಿದರೆ ಶೇ.31ರಷ್ಟು ಹೆಚ್ಚಳವಾಗಿತ್ತು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಹಾಗೆಯೇ 2014ರಿಂದ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಘೋಷಣೆ ಮಾಡಿರುವ ವಿವಿಧ ತೆರಿಗೆ ಪ್ರಯೋಜನ ಕ್ರಮಗಳ ಬಗ್ಗೆಯೂ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಏನೆಲ್ಲ ತೆರಿಗೆ ಪ್ರಯೋಜನಗಳಿವೆ?
1.ಹಣಕಾಸು (ನಂ.2) ಕಾಯ್ದೆ  2014ರ ಅನ್ವಯ ವೈಯಕ್ತಿಕ ಮೂಲ ತೆರಿಗೆ ವಿನಾಯ್ತಿ ಮಿತಿಯನ್ನು 2ಲಕ್ಷ ರೂ.ನಿಂದ 2.5ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು ಆದಾಯ ತೆರಿಗೆ ಕಾಯ್ದೆ 1961ರ ಸೆಕ್ಷನ್ 80ಸಿ ಅಡಿಯಲ್ಲಿ ತೆರಿಗೆ ಕಡಿತ ಕ್ಲೇಮ್ ಮಿತಿಯನ್ನು ಕೂಡ 1ಲಕ್ಷ ರೂ.ನಿಂದ 1.5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. 
2. 2.5ಲಕ್ಷ ರೂ.ನಿಂದ 5ಲಕ್ಷ ರೂ. ನಡುವೆ ಆದಾಯ ಹೊಂದಿರುವ ವ್ಯಕ್ತಿಗಳಿಗೆ ವಿಧಿಸುವ ಆದಾಯ ತೆರಿಗೆಯನ್ನು ಹಣಕಾಸು ಕಾಯ್ದೆ-2017ರ ಅನ್ವಯ ಶೇ.10ರಿಂದ ಶೇ.5ಕ್ಕೆ ಇಳಿಕೆ ಮಾಡಲಾಗಿದೆ.
3.ವಿಡ್ ಹಣಕಾಸು ಕಾಯ್ದೆ 2018ರ ಅನ್ವಯ ವೇತನ ಪಡೆಯುವ ತೆರಿಗೆದಾರರು ಹಾಗೂ ಪಿಂಚಣಿದಾರರಿಗೆ 40,000ರೂ. ಸ್ಟ್ಯಾಂಡರ್ಡ್ ತೆರಿಗೆ ಕಡಿತವನ್ನು ಪರಿಚಯಿಸಲಾಗಿದೆ. ವಿಡ್ ಹಣಕಾಸು ಕಾಯ್ದೆ 2019ರಲ್ಲಿ ಇದನ್ನು ಮತ್ತೆ 50,000ರೂ.ಗೆ ಏರಿಕೆ ಮಾಡಲಾಗಿದೆ.

ಉದ್ಯೋಗಿಗಳಿಗೆ ಶುಭ ಸುದ್ದಿ; ಈ ವರ್ಷ ವೇತನದಲ್ಲಿ ಶೇ.10.2ರಷ್ಟು ಏರಿಕೆ ನಿರೀಕ್ಷೆ

4.ಹಣಕಾಸು ಕಾಯ್ದೆ 2019 ಸೆಕ್ಷನ್ 87ಎ ಅಡಿಯಲ್ಲಿ ತೆರಿಗೆಗೊಳಪಡುವ 5ಲಕ್ಷ ರೂ. ತನಕದ ಆದಾಯ ಹೊಂದಿರುವ ವ್ಯಕ್ತಿಗಳಿಗೆ ಪೂರ್ಣ ಪ್ರಮಾಣದಲ್ಲಿ ತೆರಿಗೆ ವಿನಾಯ್ತಿ ನೀಡಲು ಕೂಡ ಅವಕಾಶ ಕಲ್ಪಿಸಿದೆ.
5.ಪಿಂಚಣಿ ಪಡೆಯುತ್ತಿರುವ ಹಿರಿಯ ನಾಗರಿಕರೂ ಸೇರಿದಂತೆ ವೃದ್ಧಾಪ್ಯದಲ್ಲಿರುವ ಹಿರಿಯರಿಗೆ ಹಣಕಾಸು ಕಾಯ್ದೆ 2018 ಅನೇಕ ಉತ್ತೇಜಕ ಸೌಲಭ್ಯಗಳನ್ನು ನೀಡಿದೆ. ಕಾಯ್ದೆಯ ಸೆಕ್ಷನ್ 80ಡಿಡಿಬಿ ಅಡಿಯಲ್ಲಿ ನಿರ್ದಿಷ್ಟ ಗಂಭೀರ ಕಾಯಿಲೆಗಳಿಗೆ ವೈದ್ಯಕೀಯ ವೆಚ್ಚಗಳ ಮೇಲಿನ ತೆರಿಗೆ ಕಡಿತದ ಮಿತಿಯನ್ನು ಹಿರಿಯ ನಾಗರಿಕರಿಗೆ ಹಾಗೂ ಅತೀ ಹಿರಿಯ ನಾಗರಿಕರಿಗೆ ಕ್ರಮವಾಗಿ  60,000 ರೂ.ಹಾಗೂ 80,000ರೂ.ನಿಂದ 1ಲಕ್ಷ ರೂ.ಗೆ  ಏರಿಕೆ ಮಾಡಲಾಗಿದೆ. ಇನ್ನು ಹಿರಿಯ ನಾಗರಿಕರಿಗೆ ಕೋ-ಆಪರೇಟಿವ್ ಬ್ಯಾಂಕ್ ಗಳು, ಅಂಚೆ ಕಚೇರಿಗಳು ಹಾಗೂ ಬ್ಯಾಂಕ್ ಗಳಲ್ಲಿನ ಠೇವಣಿಗಳ ಮೇಲಿನ ಬಡ್ಡಿ ಆದಾಯಕ್ಕೆ 50,000ರೂ. ವಿನಾಯ್ತಿ ನೀಡಲಾಗಿದೆ. ಇನ್ನು ಹಿರಿಯ ನಾಗರಿಕರಿಗೆ ಬಡ್ಡಿ ಆದಾಯಕ್ಕೆ ಮೂಲದಲ್ಲಿ ತೆರಿಗೆ ವಿನಾಯ್ತಿ ಮಿತಿಯನ್ನು 10,000ರೂ. ನಿಂದ 50,000 ರೂ.ಗೆ ಏರಿಕೆ ಮಾಡಲಾಗಿದೆ.

ಇನ್ಮುಂದೆ ಅಂಗೈಯಲ್ಲಿ ತೆರಿಗೆ ಮಾಹಿತಿ; AIS ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಿದ ಆದಾಯ ತೆರಿಗೆ ಇಲಾಖೆ

6.75 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕ ಪಿಂಚಣಿದಾರರ ಮೇಲಿನ ತೆರಿಗೆ ಭಾರ ತಗ್ಗಿಸಲು ಹಣಕಾಸು ಕಾಯ್ದೆ 2021ರ ಅನ್ವಯ ಪೇಯಿಂಗ್ ಬ್ಯಾಂಕ್ (ಪಿಂಚಣಿ ಸಿಗುವ ಬ್ಯಾಂಕ್) ತೆರಿಗೆ ಕಡಿತ ಮಾಡುತ್ತಿದ್ರೆ ಅಂಥ ವ್ಯಕ್ತಿಗಳಿಗೆ ಆದಾಯ ತೆರಿಗೆ ಸಲ್ಲಿಕೆ ಮಾಡುವ ಅಗತ್ಯದಿಂದ ವಿನಾಯ್ತಿ ನೀಡಲಾಗಿದೆ. 

 

 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

Explainer: ವಿಶ್ವದ ಅತಿದೊಡ್ಡ ಏರ್‌ಲೈನ್ಸ್‌ ಸ್ಮಶಾನವಾದ ಭಾರತ, ದೇಶದಲ್ಲಿ ವಿಮಾನ ಕಂಪನಿ ಬದುಕೋದು ಯಾಕೆ ಕಷ್ಟ?
ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!