ಮುಸ್ಲಿಮರ ದಮನಕ್ಕೆ ಅಲ್‌ ಫಲಾ ಮುಖ್ಯಸ್ಥನ ಸೆರೆ : ಮದನಿ ಆಕ್ಷೇಪ

Kannadaprabha News   | Kannada Prabha
Published : Nov 24, 2025, 05:35 AM IST
Al Falah University

ಸಾರಾಂಶ

ಮುಸ್ಲಿಮರು ತಲೆಯೆತ್ತದಂತೆ ಸರ್ಕಾರ ಕೆಲಸ ಮಾಡುತ್ತಿದೆ. ಅಂಥ ಸಾಧನೆ ಮಾಡಿದರೆ ದೆಹಲಿ ಸ್ಫೋಟದ ರೂವಾರಿಗಳು ಕೆಲಸ ಮಾಡುತ್ತಿದ್ದ ಅಲ್‌ ಫಲಾ ವಿವಿಯ ಸ್ಥಾಪಕ ಅಜಂ ಖಾನ್‌ರನ್ನು ಜೈಲಿಗೆ ಕಳಿಸಿದಂತೆ ಅವರನ್ನೂ ಕಳಿಸುತ್ತದೆ ಎಂದು ಜಮೀಯತ್ ಉಲಮಾ-ಇ-ಹಿಂದ್ ಮುಖ್ಯಸ್ಥ ಮೌಲಾನಾ ಅರ್ಷದ್ ಮದನಿ ವಿವಾದಿತ ಹೇಳಿಕೆ

ವದೆಹಲಿ: ಮುಸ್ಲಿಮರು ತಲೆಯೆತ್ತದಂತೆ ಸರ್ಕಾರ ಅವಿರತವಾಗಿ ಕೆಲಸ ಮಾಡುತ್ತಿದೆ. ಯಾರಾದರೂ ಅಂಥ ಸಾಧನೆ ಮಾಡಿದರೆ ದೆಹಲಿ ಸ್ಫೋಟದ ರೂವಾರಿಗಳು ಕೆಲಸ ಮಾಡುತ್ತಿದ್ದ ಅಲ್‌ ಫಲಾ ವಿವಿಯ ಸ್ಥಾಪಕ ಅಜಂ ಖಾನ್‌ರನ್ನು ಜೈಲಿಗೆ ಕಳಿಸಿದಂತೆ ಅವರನ್ನೂ ಕಳಿಸುತ್ತದೆ ಎಂದು ಜಮೀಯತ್ ಉಲಮಾ-ಇ-ಹಿಂದ್ ಮುಖ್ಯಸ್ಥ ಮೌಲಾನಾ ಅರ್ಷದ್ ಮದನಿ ವಿವಾದಿತ ಹೇಳಿಕೆ ನೀಡಿದ್ದಾರೆ.

ಭಾರತದಲ್ಲಿ ಯಾವ ಮುಸ್ಲಿಮನೂ ವಿವಿ ಮುಖ್ಯಸ್ಥನಾಗುವುದೂ ಸಾಧ್ಯವಿಲ್ಲ

ಇಲ್ಲಿ ಮಾತನಾಡಿದ ಅವರು, ‘ಇಂದು ಮುಸ್ಲಿಮರಾದ ಮಮ್ದಾನಿ ಹಾಗೂ ಖಾನ್‌, ನ್ಯೂಯಾರ್ಕ್‌ ಮತ್ತು ಲಂಡನ್‌ನ ಮೇಯರ್‌ ಆಗಿದ್ದಾರೆ. ಆದರೆ ಭಾರತದಲ್ಲಿ ಯಾವ ಮುಸ್ಲಿಮನೂ ವಿವಿ ಮುಖ್ಯಸ್ಥನಾಗುವುದೂ ಸಾಧ್ಯವಿಲ್ಲ. ಯಾರಾದರೂ ಹಾಗೆ ಅದರೂ, ಅವರನ್ನು ಅಜಂ ಖಾನ್‌ರಂತೆ ಜೈಲಿಗೆ ಕಳುಹಿಸಲಾಗುತ್ತದೆ. ಮುಸ್ಲಿಮರು ಎಂದಿಗೂ ತಲೆ ಎತ್ತದಂತೆ ನೋಡಿಕೊಳ್ಳಲು ಸರ್ಕಾರ ಅವಿರತವಾಗಿ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ.

ಬಿಜೆಪಿ ಆಕ್ರೋಶ :

ಮೌಲಾನಾ ಹೇಳಿಕೆಗೆ ಬಿಜೆಪಿ ವಕ್ತಾರ ಶೆಹಜಾದ್‌ ಪೂನವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಇಂದು ಆತಂಕಿ ಬಚಾವೋ ಜಮಾತ್ (ಉಗ್ರ ರಕ್ಷಕ ಜಮಾತ್‌) ಸಕ್ರಿಯವಾಗಿದೆ. ಅವರು ಉಗ್ರರು ಸಿಕ್ಕಿಬಿದ್ದಾಗ ರಕ್ಷಣೆಗೆ ಓಡಿಬರುತ್ತಾರೆ’ ಎಂದು ಕಿಡಿ ಕಾರಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ಭಾರತೀಯರ ಕ್ರೇಜ್, ದುಬೈನ ಶಾರುಖ್ ಖಾನ್ ಆಫೀಸ್ ಟವರ್ ಬರೋಬ್ಬರಿ 5000 ಕೋಟಿ ರೂ ಗೆ ಮಾರಾಟ!
ಹೊಸ ವರ್ಷದ ಆಫರ್‌ ನಲ್ಲಿ ಟಿವಿ, ಮೊಬೈಲ್ ಖರೀದಿಸಲು ಫ್ಲಾನ್ ಮಾಡಿದ್ರೆ ನಿಮಗಿದು ಶಾಕಿಂಗ್ ಸುದ್ದಿ!