ಎಲ್ಲ ಮುಗಿದ ಮೇಲೆ: ರಿಲಯನ್ಸ್ ಕಮ್ಯುನಿಕೇಷನ್ಸ್‌ಗೆ ಅಂಬಾನಿ ರಾಜೀನಾಮೆ!

Published : Nov 16, 2019, 05:11 PM ISTUpdated : Mar 17, 2020, 04:07 PM IST
ಎಲ್ಲ ಮುಗಿದ ಮೇಲೆ: ರಿಲಯನ್ಸ್ ಕಮ್ಯುನಿಕೇಷನ್ಸ್‌ಗೆ ಅಂಬಾನಿ ರಾಜೀನಾಮೆ!

ಸಾರಾಂಶ

ರಿಲಯನ್ಸ್‌ ಕಮ್ಯುನಿಕೇಷನ್ಸ್ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅನಿಲ್ ಅಂಬಾನಿ|   ಛಾಯಾ ವಿರಾನಿ, ರ್‍ಯಾನಾ ಕರಾನಿ, ಮಂಜರಿ ಕಾಕೆರ್, ಸುರೇಶ್ ರಂಗಾಚಾರ್ ರಾಜೀನಾಮೆ| ಮುಖ್ಯ ಹಣಕಾಸು ಅಧಿಕಾರಿ ಸ್ಥಾನಕ್ಕೆ ವಿ. ಮಣಿಕಂಠನ್ ರಾಜೀನಾಮೆ| ದಿವಾಳಿ ಪ್ರಕ್ರಿಯೆ ಎದುರಿಸುತ್ತಿರುವ ರಿಲಯನ್ಸ್ ಕಮ್ಯುನಿಕೇಷನ್ಸ್| 

ಮುಂಬೈ(ನ.16): ಮಹತ್ವದ ಬೆಳವಣಿಗೆಯೊಂದರಲ್ಲಿ ರಿಲಯನ್ಸ್‌ ಕಮ್ಯುನಿಕೇಷನ್ಸ್ ಅಧ್ಯಕ್ಷ ಅನಿಲ್ ಅಂಬಾನಿ, ಕಂಪನಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

"

ಸೋದರ ಅನಿಲ್‌ರ ಆರ್‌ಕಾಂ ಮುಕೇಶ್‌ ಅಂಬಾನಿ ತೆಕ್ಕೆಗೆ?

ಅಲ್ಲದೇ ಛಾಯಾ ವಿರಾನಿ, ರ್‍ಯಾನಾ ಕರಾನಿ, ಮಂಜರಿ ಕಾಕೆರ್ ಮತ್ತು ಸುರೇಶ್ ರಂಗಾಚಾರ್ ಕೂಡ ಏಕಕಾಲದಲ್ಲಿ ಕಂಪನಿಯ ನಿರ್ದೇಶಕ ಹುದ್ದಗೆ ರಾಜೀನಾಮೆ ಸಲ್ಲಿಸಿದ್ದಾರೆ. 

ಕಳೆದ ಅಕ್ಟೋಬರ್ 4ರಂದು ವಿ. ಮಣಿಕಂಠನ್ ಕೂಡ  ಕಂಪನಿಯ ನಿರ್ದೇಶಕ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸಾಲ ತೀರಿಸಲು ಮುಂಬೈನ ಕೇಂದ್ರ ಕಚೇರಿಯನ್ನೇ ಮಾರಲು ಅನಿಲ್‌ ಅಂಬಾನಿ ನಿರ್ಧಾರ?

ದಿವಾಳಿ ಪ್ರಕ್ರಿಯೆ ಎದುರಿಸುತ್ತಿರುವ ರಿಲಯನ್ಸ್ ಕಮ್ಯುನಿಕೇಷನ್ಸ್, ಕಳೆದ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ 30,142 ರೂ. ನಷ್ಟ ಅನುಭವಿಸಿದೆ.
 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

Business Idea: ಕಡಿಮೆ ಬಂಡವಾಳ, ಅಧಿಕ ಆದಾಯ.. ಎಂದಿಗೂ ಲಾಸ್‌ ಆಗದ ವ್ಯವಹಾರಗಳಿವು!
Whatsapp ಮೂಲಕವೂ ಗ್ಯಾಸ್​ ಸಿಲಿಂಡರ್​ ಬುಕಿಂಗ್​ಗೆ ಅವಕಾಶ: ಸಂಪೂರ್ಣ ಡಿಟೇಲ್ಸ್​ ಇಲ್ಲಿದೆ