
ನವದೆಹಲಿ(ಸೆ.10): ತೈಲದರ ಏರಿಕೆ ಖಂಡಿಸಿ ಇಂದು ವಿಪಕ್ಷಗಳು ಯಶಸ್ವಿ ಭಾರತ್ ಬಂದ್ ಪ್ರತಿಭಟನೆ ನಡೆಸಿವೆ. ಅದರಂತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ತರಹೇವಾರಿ ಜೋಕ್ಸ್ ಗಳು ಹರಿದಾಡುತ್ತಿವೆ.
ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗುತ್ತಿದ್ದು, 2014 ರ ಲೋಕಸಭೆ ಚುನಾವಣೆಗೂ ಮೊದಲು ಮೋದಿ ತೈಲದರ ಏರಿಕೆಗೆ ಆಗಿನ ಕೇಂದ್ರ ಸರ್ಕಾರವೇ ಕಾರಣ ಎಂದು ಹೇಳಿಕೆ ನೀಡಿದ್ದ ವಿಡಿಯೋ ಹರಿದಾಡುತ್ತಿದೆ.
ಅಲ್ಲದೇ ರಾವಣನ ದೇಶ(ಶ್ರೀಲಂಕಾ)ದಲ್ಲಿ ಪೆಟ್ರೋಲ್ ಬೆಲೆ 58 ರೂ. ಸೀತಾಮಾತೆ ದೇಶ(ನೇಪಾಳ)ದಲ್ಲಿ ಪೆಟ್ರೋಲ್ ಬೆಲೆ 64 ರೂ. ಆಗಿದ್ದರೆ, ಪ್ರಭು ಶ್ರೀರಾಮನ ದೇಶದಲ್ಲಿ ಪೆಟ್ರೋಲ್ ಬೆಲೆ 80 ರೂ. ಏಕೆ ಎಂದು ಪ್ರಶ್ನಿಸಲಾಗಿದೆ.
ಅಲ್ಲದೇ ಬಿಜೆಪಿ ಇತರ ನಾಯಕರು, ಕೇಂದ್ರ ಸಚಿವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗಿದೆ. ಪ್ರಮುಖವಾಗಿ ರವಿಶಂಕರ್ ಪ್ರಸಾದ್, ಸ್ಮೃತಿ ಇರಾನಿ ವಿರುದ್ದವೂ ತರಹೇವಾರಿ ಜೋಕ್ಸ್ ಗಳೂ ಹರಿದಾಡುತ್ತಿವೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.