ಆರೋಗ್ಯವೇ ಭಾಗ್ಯ: ಯಡಿಯೂರಪ್ಪ ಆರೋಗ್ಯ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳು

Published : Mar 08, 2021, 02:46 PM ISTUpdated : Mar 08, 2021, 03:48 PM IST
ಆರೋಗ್ಯವೇ ಭಾಗ್ಯ: ಯಡಿಯೂರಪ್ಪ ಆರೋಗ್ಯ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳು

ಸಾರಾಂಶ

ಈ ಬಾರಿಯ ಕರ್ನಾಟಕ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಯಡಿಯೂಪ್ಪನವರು ಆರೋಗ್ಯ ಇಲಾಖೆಗೆ ಒಟ್ಟು 11,908 ಕೋಟಿ ರೂ. ಅನುದಾನ ನಿಗದಿಪಡಿಸಿದ್ದಾರೆ. 

ಬೆಂಗಳೂರು, (ಮಾ.08): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳನ್ನು ಘೋಷಿಸಿದ್ದಾರೆ. 

ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಿದೆ. ಆರೋಗ್ಯವಿದ್ದರೆ ಏನು ಬೇಕಿದ್ದರೂ ಪಡೆಯಬಹುದು ಎನ್ನುವುದು ಇದರರ್ಥ.ಅದರಂತೆ ಈ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಯಡಿಯೂಪ್ಪನವರು ಆರೋಗ್ಯ ಇಲಾಖೆಗೆ ಒಟ್ಟು 11,908 ಕೋಟಿ ರೂ. ಅನುದಾನ ನಿಗದಿಪಡಿಸಿದ್ದಾರೆ. ಹಾಗಾದ್ರೆ, ಆರೋಗ್ಯ ಇಲಾಖೆಗೆ ಏನೆಲ್ಲಾ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

Live| Karnataka Budget 2021: ಕೃಷಿ ಹಾಗೂ ಅನ್ನದಾತನಿಗೆ ಆತ್ಮ ನಿರ್ಭರದ ಬಲ, ವೈಜ್ಞಾನಿಕ ಮಾರಾಟಕ್ಕೆ ಒತ್ತು

 ಬಜೆಟ್‌ನಲ್ಲಿ ಆರೋಗ್ಯ ಇಲಾಖೆಗೆ ಸಿಕ್ಕಿದ್ದೇನು? 
* ರಾಜ್ಯದ ನಾಲ್ಕು ವಿಭಾಗಗಳಲ್ಲಿ ಒಟ್ಟು 2.5 ಕೋಟಿ ರೂ ವೆಚ್ಚದಲ್ಲಿ 'ತಾಯಂದಿರ ಎದೆಹಾಲಿನ ಬ್ಯಾಂಕ್' ಸ್ಥಾಪನೆ.
* ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡುವುದನ್ನು ಉತ್ತೇಜಿಸಲು 10 ಕೋಟಿ ರೂ. ವೆಚ್ಚದಲ್ಲಿ 'ಚಿಗುರು' ಕಾರ್ಯಕ್ರಮಕ್ಕೆ ಚಾಲನೆ.
* 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಹಾಗೂ 100 ತಾಲ್ಲೂಕು ಆಸ್ಪತ್ರೆಗಳಲ್ಲಿ 6 ಹಾಸಿಗೆ ಸಾಮರ್ಥ್ಯದ ಐಸಿಯು ಘಟಕಗಳನ್ನು 60 ಕೋಟಿ ರೂ ವೆಚ್ಚದಲ್ಲಿ ಸ್ಥಾಪನೆ.
* ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾದರಿ ಮೇಲ್ದರ್ಜೆಗೇರಿಸಲು ಕ್ರಮ
* ಎರಡು ಕೋಟಿ ರೂ ವೆಚ್ಚದಲ್ಲಿ ನಾಲ್ಕು ಪ್ರಾದೇಶಿಕ ಆಹಾರ ಸುರಕ್ಷತಾ ಪ್ರಯೋಗಾಲಯಗಳ ಉನ್ನತೀಕರಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆಂಟಿ-ಮೈಕ್ರೋಬಿಯಲ್ ರೆಸಿಸ್ಟೆನ್ಸ್ ಘಟಕ ಪ್ರಾರಂಭ
* ದಾವಣಗೆರೆಯಲ್ಲಿ 50 ಹಾಸಿಗೆ ಸಾಮರ್ಥ್ಯದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಉಪ ಕೇಂದ್ರವನ್ನು ನಿರ್ಮಿಸಲಾಗುವುದು. ಇದಕ್ಕಾಗಿ 50 ಕೋಟಿ ರೂ.

* ಶಿವಮೊಗ್ಗದಲ್ಲಿನ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವಾಗಿ ಉನ್ನತೀಕರಿಸುವುದಾಗಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಎರಡು ಕೋಟಿ ರೂ ವೆಚ್ಚದಲ್ಲಿ ನಾಲ್ಕು ಪ್ರಾದೇಶಿಕ ಆಹಾರ ಸುರಕ್ಷತಾ ಪ್ರಯೋಗಾಲಯಗಳ ಉನ್ನತೀಕರಣ.
* 2 ಕೋಟಿ ರೂ ವೆಚ್ಚದಲ್ಲಿ ನಾಲ್ಕು ಪ್ರಾದೇಶಿಕ ಆಹಾರ ಸುರಕ್ಷತಾ ಪ್ರಯೋಗಾಲಯಗಳ ಉನ್ನತೀಕರಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆಂಟಿ-ಮೈಕ್ರೋಬಿಯಲ್ ರೆಸಿಸ್ಟೆನ್ಸ್ ಘಟಕ ಪ್ರಾರಂಭಿಸುವುದನ್ನು ಪ್ರಕಟಿಸಲಾಗಿದೆ.
* ಅಪೌಷ್ಟಿಕತೆಯಿಂದ ತಾಯಿ ಮತ್ತು ಮಗುವನ್ನು ರಕ್ಷಿಸಲು 5 ಕೋಟಿ ರೂ ವೆಚ್ಚದಲ್ಲಿ ಭಾರತೀಯ ವೈದ್ಯ ಪದ್ಧತಿ ಆಧರಿಸಿದ 'ಪೋಷಣೆ ಮತ್ತು ಜೀವನೋಪಾಯ' ಕಾರ್ಯಕ್ರಮ ಜಾರಿ
* ಬೆಂಗಳೂರು, ಮೈಸೂರು, ಬಳ್ಳಾರಿ ಮತ್ತು ಹುಬ್ಬಳ್ಳಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಒಟ್ಟು ಐದು ಕೋಟಿ ರೂ ವೆಚ್ಚದಲ್ಲಿ ತುರ್ತು ವಿಭಾಗ ಪ್ರಾರಂಭ.

* ಮೈಸೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಟ್ರಾಮಾ ಕೇರ್ ಕೇಂದ್ರ ಪ್ರಾರಂಭಿಸಲಾಗುವುದು.
* ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುಟ್ಟಗಾಯಗಳ ಚಿಕಿತ್ಸಾ ಕೇಂದ್ರ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗ.
* ಮಹಿಳೆಯರಲ್ಲಿ ಕ್ಯಾನ್ಸರ್ ರೋಗ ಪತ್ತೆ ಹಚ್ಚಲು 11 ಕೋಟಿ ರೂ ಗಳ ವೆಚ್ಚದಲ್ಲಿ ಹೊಸ ಸುಸಜ್ಜಿತ ಸಂಚಾರಿ ಪ್ರಯೋಗಾಲಯ 
* ಶಿವಮೊಗ್ಗ ಮತ್ತು ಮೈಸೂರಿನಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ.
* ಚಿತ್ರದುರ್ಗ ಜಿಲ್ಲೆಯಲ್ಲಿ ಸಾರ್ವಜನಿಕ ವಿಜ್ಞಾನಗಳ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದ 100 ಸ್ನಾತಕೋತ್ತರ ಸೀಟುಗಳ ಹೆಚ್ಚಳ.
* ಚಿತ್ರದುರ್ಗ ಜಿಲ್ಲೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭ. 
* ಧಾರವಾಡದ ಡಿಮ್ಹಾನ್ಸ್ ಸಂಸ್ಥೆಯನ್ನು 75 ಕೋಟಿ ರೂ ವೆಚ್ಚದಲ್ಲಿ ಮಾನಸಿಕ ನರರೋಗಿಗಳ ಸುಸಜ್ಜಿತ ಚಿಕಿತ್ಸಾ ಸಂಸ್ಥೆಯನ್ನಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.
* ಹಾಸನ ಮತ್ತು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದ 100 ಸ್ನಾತಕೋತ್ತರ ಸೀಟುಗಳ ಹೆಚ್ಚಳ.
* ಬುದ್ಧಿಮಾಂದ್ಯರ ಆರೈಕೆ ಮಾಡಲು ಅನುಕೂಲವಾಗುವಂತೆ ಶೇ.75 ಕ್ಕಿಂತ ಹೆಚ್ಚಿನ ಮನೋವೈಕಲ್ಯತೆ ಹೊಂದಿದವರಿಗೆ ನೀಡುವ  ಮಾಸಾಶನ 200 ರೂ.ಗಳಿಗೆ ಹೆಚ್ಚಳ. ಹುಟ್ಟಿನಿಂದಲೇ ಶ್ರವಣದೋಷವುಳ್ಳ ನಾಲ್ಕು ವರ್ಷದೊಳಗಿನ ಮಕ್ಕಳಿಗೆ ಅವರ ತಾಯಂದಿರ ಸಹಿತ ವಾಕ್ ತರಬೇತಿ ನೀಡಲು ಕ್ರಮ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

YouTube ನಲ್ಲಿ ಗೋಲ್ಡನ್ ಬಟನ್ ಸಿಕ್ಕಿದ್ರೆ ಹಣದ ಹೊಳೆ, ಜಾಸ್ತಿ ಆಗುತ್ತೆ ತೆರಿಗೆ ಭಾರ
ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!