ಜಿಎಸ್‌ಟಿ, ತೈಲ ದರ ಏರಿಕೆ ವಿರೋಧಿಸಿ ದೇಶವ್ಯಾಪಿ ಮಾರುಕಟ್ಟೆ ಬಂದ್‌!

Published : Feb 26, 2021, 08:54 AM IST
ಜಿಎಸ್‌ಟಿ, ತೈಲ ದರ ಏರಿಕೆ ವಿರೋಧಿಸಿ ದೇಶವ್ಯಾಪಿ ಮಾರುಕಟ್ಟೆ ಬಂದ್‌!

ಸಾರಾಂಶ

ಇಂದು ದೇಶವ್ಯಾಪಿ ಮಾರುಕಟ್ಟೆ ಬಂದ್‌| ಜಿಎಸ್‌ಟಿ, ತೈಲ ದರ ಏರಿಕೆ ವಿರೋಧಿಸಿ ಸಿಎಐಟಿಯಿಂದ ಬಂದ್‌ಗೆ ಕರೆ| 8 ಕೋಟಿ ವರ್ತಕರು ಭಾರತ್‌ ಬಂದ್‌ನಲ್ಲಿ ಭಾಗವಹಿಸುವ ಸಾಧ್ಯತೆ

ನವದೆಹಲಿ(ಫೆ.26): ಜಿಎಸ್‌ಟಿಯಲ್ಲಿ ಕೆಲ ವಿವಾದಾತ್ಮಕ ಅಂಶಗಳು ಮತ್ತು ತೈಲ ದರ ಏರಿಕೆ ಖಂಡಿಸಿ ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಶುಕ್ರವಾರ ಭಾರತ್‌ ಬಂದ್‌ಗೆ ಕರೆ ಕೊಟ್ಟಿದೆ.

ಈ ಬಂದ್‌ ವೇಳೆ ದೇಶದ ಕನಿಷ್ಠ 1500 ಸ್ಥಳಗಳಲ್ಲಿ ಧರಣಿ ನಡೆಸಲಾಗುವುದು, ಇದರಲ್ಲಿ ಕನಿಷ್ಠ 8 ಕೋಟಿ ವರ್ತಕರು ಭಾಗಿಯಾಗಲಿದ್ದಾರೆ. ಬಂದ್‌ ಹಿನ್ನೆಲೆಯಲ್ಲಿ ಶುಕ್ರವಾರ ಎಲ್ಲಾ ವಾಣಿಜ್ಯ ವಹಿವಾಟುಗಳು ಬಂದ್‌ ಆಗಿರಲಿವೆ ಎಂದು ಸಂಘಟನೆ ತಿಳಿಸಿದೆ.

ಜಿಎಸ್‌ಟಿ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಬೇಕು, ತೆರಿಗೆ ಸ್ತರವನ್ನು ಇನ್ನಷ್ಟುಸರಳೀಕರಣಗೊಳಿಸಬೇಕು, ಅದನ್ನು ಬಳಕೆದಾರರ ಸ್ನೇಹಿಯಾಗಿ ಮಾಡಬೇಕು, ಇ- ವೇ ಬಿಲ್‌ ಪದ್ಧತಿ ರದ್ದು ಮಾಡಬೇಕು, ಇ- ಇನ್ವಾಯ್‌್ಸಗಳ ಬದಲಾಗಿ ಫಾಸ್ಟ್‌ಟ್ಯಾಗ್‌ ಮೂಲಕವೇ ವಾಹನಗಳ ಮೇಲೆ ಕಣ್ಗಾವಲು ಇಡುವ ವ್ಯವಸ್ಥೆ ಜಾರಿಯಾಗಬೇಕು, ದೇಶವ್ಯಾಪಿ ಒಂದೇ ರೀತಿಯಲ್ಲಿ ಡೀಸೆಲ್‌ ದರ ನಿಗದಿ ಮಾಡಬೆಕು ಎಂಬುದು ನಮ್ಮ ಪ್ರಮುಖ ಬೇಡಿಕೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ಬಂದ್‌ಗೆ ಕರೆ ಕೊಡಲಾಗಿದೆ. ಇದಕ್ಕೆ 40000ಕ್ಕೂ ಹೆಚ್ಚು ಉದ್ಯಮ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಖಂಡೇಲ್‌ವಾಲ್‌ ತಿಳಿಸಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!