ಜಿಎಸ್‌ಟಿ, ತೈಲ ದರ ಏರಿಕೆ ವಿರೋಧಿಸಿ ದೇಶವ್ಯಾಪಿ ಮಾರುಕಟ್ಟೆ ಬಂದ್‌!

Published : Feb 26, 2021, 08:54 AM IST
ಜಿಎಸ್‌ಟಿ, ತೈಲ ದರ ಏರಿಕೆ ವಿರೋಧಿಸಿ ದೇಶವ್ಯಾಪಿ ಮಾರುಕಟ್ಟೆ ಬಂದ್‌!

ಸಾರಾಂಶ

ಇಂದು ದೇಶವ್ಯಾಪಿ ಮಾರುಕಟ್ಟೆ ಬಂದ್‌| ಜಿಎಸ್‌ಟಿ, ತೈಲ ದರ ಏರಿಕೆ ವಿರೋಧಿಸಿ ಸಿಎಐಟಿಯಿಂದ ಬಂದ್‌ಗೆ ಕರೆ| 8 ಕೋಟಿ ವರ್ತಕರು ಭಾರತ್‌ ಬಂದ್‌ನಲ್ಲಿ ಭಾಗವಹಿಸುವ ಸಾಧ್ಯತೆ

ನವದೆಹಲಿ(ಫೆ.26): ಜಿಎಸ್‌ಟಿಯಲ್ಲಿ ಕೆಲ ವಿವಾದಾತ್ಮಕ ಅಂಶಗಳು ಮತ್ತು ತೈಲ ದರ ಏರಿಕೆ ಖಂಡಿಸಿ ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಶುಕ್ರವಾರ ಭಾರತ್‌ ಬಂದ್‌ಗೆ ಕರೆ ಕೊಟ್ಟಿದೆ.

ಈ ಬಂದ್‌ ವೇಳೆ ದೇಶದ ಕನಿಷ್ಠ 1500 ಸ್ಥಳಗಳಲ್ಲಿ ಧರಣಿ ನಡೆಸಲಾಗುವುದು, ಇದರಲ್ಲಿ ಕನಿಷ್ಠ 8 ಕೋಟಿ ವರ್ತಕರು ಭಾಗಿಯಾಗಲಿದ್ದಾರೆ. ಬಂದ್‌ ಹಿನ್ನೆಲೆಯಲ್ಲಿ ಶುಕ್ರವಾರ ಎಲ್ಲಾ ವಾಣಿಜ್ಯ ವಹಿವಾಟುಗಳು ಬಂದ್‌ ಆಗಿರಲಿವೆ ಎಂದು ಸಂಘಟನೆ ತಿಳಿಸಿದೆ.

ಜಿಎಸ್‌ಟಿ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಬೇಕು, ತೆರಿಗೆ ಸ್ತರವನ್ನು ಇನ್ನಷ್ಟುಸರಳೀಕರಣಗೊಳಿಸಬೇಕು, ಅದನ್ನು ಬಳಕೆದಾರರ ಸ್ನೇಹಿಯಾಗಿ ಮಾಡಬೇಕು, ಇ- ವೇ ಬಿಲ್‌ ಪದ್ಧತಿ ರದ್ದು ಮಾಡಬೇಕು, ಇ- ಇನ್ವಾಯ್‌್ಸಗಳ ಬದಲಾಗಿ ಫಾಸ್ಟ್‌ಟ್ಯಾಗ್‌ ಮೂಲಕವೇ ವಾಹನಗಳ ಮೇಲೆ ಕಣ್ಗಾವಲು ಇಡುವ ವ್ಯವಸ್ಥೆ ಜಾರಿಯಾಗಬೇಕು, ದೇಶವ್ಯಾಪಿ ಒಂದೇ ರೀತಿಯಲ್ಲಿ ಡೀಸೆಲ್‌ ದರ ನಿಗದಿ ಮಾಡಬೆಕು ಎಂಬುದು ನಮ್ಮ ಪ್ರಮುಖ ಬೇಡಿಕೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ಬಂದ್‌ಗೆ ಕರೆ ಕೊಡಲಾಗಿದೆ. ಇದಕ್ಕೆ 40000ಕ್ಕೂ ಹೆಚ್ಚು ಉದ್ಯಮ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಖಂಡೇಲ್‌ವಾಲ್‌ ತಿಳಿಸಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ನಾನು ಠಾಕೂರ್ ನನಗೆ ಆ ಬಗ್ಗೆ ಗರ್ವ ಇದೆ: ವಿವಾದದ ಬಳಿಕ ತನ್ನ ಹೇಳಿಕೆಗೆ ಸ್ಪಷ್ಟನೆ ನೀಡಿದ HDFC ಉದ್ಯೋಗಿ
BHEL OFS: ಬಿಎಚ್‌ಇಎಲ್‌ನಿಂದ ಹೊರಬರುತ್ತಿದೆಯಾ ಕೇಂದ್ರ ಸರ್ಕಾರ? 4,500 ಕೋಟಿ ಸಂಗ್ರಹಕ್ಕೆ ಬಿಗ್ ಪ್ಲಾನ್..