
ಬೆಂಗಳೂರು(ಡಿ. 06) ಸಿಸಿಬಿ ಪೊಲೀಸರು ಕುದುರೆ ಬೆಟ್ಟಿಂಗ್ ಮೇಲೆ ದಾಳಿ ಮಾಡಿದ್ದರು. ಇದಾದ ಮೇಲೆ ಇದೀಗ ಬೆಂಗಳೂರಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಚಿನ್ನದಂಗಡಿಗಳ ಕಮರ್ಷಿಯಲ್ ಟ್ಯಾಕ್ಸ್ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ದೊಡ್ಡಪೇಟೆ ಸರ್ಕಲ್ ನಲ್ಲಿರೊ ರಾಜಾ ಮಾರ್ಕೆಟ್ ಮೇಲೆ ದಾಳಿ ಶುಕ್ರವಾರ ಸಂಜೆ ದಾಳಿ ಮಾಡಿದ್ದಾರೆ.
ಸುಮಾರು 15ಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀನೆ ನಡೆಸಿದ್ದಾರೆ. ತೆರಿಗೆ ವಂಚನೆ ದೂರು ಬಂದ ಹಿನ್ನೆಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಅಪಾರ ಪ್ರಮಾಣದ ಟ್ಯಾಕ್ಸ್ ವಂಚನೆ ಬೆಳಕಿಗೆ ಬಂದಿದೆ. ಗ್ರಾಹಕರಿಗೆ ಒಂದು ರೇಟು, ಸರ್ಕಾರಕ್ಕೆ ತೋರಿಸೋದೆ ಒಂದು ರೇಟು ಎಂಬ ದೂರು ಬಂದ ಕಾರಣಕ್ಕೆ ಲೆಕ್ಕಪತ್ರಗಳ ಪರಿಶೀಲನೆ ನಡೆಸಲಾಗುತ್ತಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.