ಕೊರೋನಾ ತಾಂಡವ: ಇಂದಿನಿಂದ ಚಿನ್ನದಂಗಡಿ ಬಂದ್‌!

Published : Mar 21, 2020, 07:59 AM IST
ಕೊರೋನಾ ತಾಂಡವ: ಇಂದಿನಿಂದ ಚಿನ್ನದಂಗಡಿ ಬಂದ್‌!

ಸಾರಾಂಶ

ಚಿನ್ನದಂಗಡಿಗಳಿಗೂ ತಟ್ಟಿದ ಕೊರೋನಾ ವೈರಸ್ ಭೀತಿ| ರಾಜ್ಯದ ಚಿನ್ನಾಭರಣ ಮಾರಾಟ ಮಳಿಗೆಗಳು ಬಂದ್

ಬೆಂಗಳೂರು(ಮಾ.21): ಕೊರೋನಾ ವೈರಸ್‌ ಭೀತಿ ಇದೀಗ ರಾಜ್ಯದ ಚಿನ್ನಾಭರಣ ಮಾರಾಟ ಮಳಿಗೆಗಳಿಗೂ ತಟ್ಟಿದೆ.

ಮುನ್ನಚ್ಚರಿಕಾ ಕ್ರಮವಾಗಿ ಮಾ.21ರಿಂದ 28ರ ವರೆಗೆ ಚಿನ್ನಾಭರಣ ಮಳಿಗೆ ಬಂದ್‌ ಮಾಡಿ ವ್ಯಾಪಾರ ಸ್ಥಗಿತಗೊಳಿಸಲು ದಿ ಜ್ಯೂವೆಲರಿ ಅಸೋಸಿಯೇಷನ್‌ ತೀರ್ಮಾನಿಸಿದೆ.

ಚಿನ್ನಾಭರಣ ಅಂಗಡಿಗಳಲ್ಲಿ ಹೆಚ್ಚಿನ ಜನ ಸೇರುವುದರಿಂದ ಸೋಂಕು ಹರಡುವ ಭೀತಿ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಎಂಟು ದಿನಗಳ ಕಾಲ ಚಿನ್ನಾಭರಣ ವ್ಯಾಪಾರ ಸ್ಥಗಿತಗೊಳಿಸಲು ವ್ಯಾಪಾರಿಗಳು ಮುಂದಾಗಿದ್ದಾರೆ.

ಕೊರೋನಾ ವೈರಸ್‌ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ಸರ್ಕಾರ ಹೋರಾಡುತ್ತಿರುವ ಹಿನ್ನೆಲೆಯಲ್ಲಿ ಇಡೀ ದೇಶವೇ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಚಿನ್ನಾಭರಣ ಮಳಿಗೆ ಬಂದ್‌ ಮಾಡುವುದಾಗಿ ಅಸೋಸಿಯೇಷನ್‌ ತಿಳಿಸಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಮಂಡ್ಯದಲ್ಲಿ ಅಮೆರಿಕದ ಸೆಮಿಕಂಡಕ್ಟರ್ ಘಟಕಕ್ಕೆ 100 ಎಕರೆ ಭೂಮಿ ಗುರುತು: ಕೆಐಎಡಿಬಿಗೆ ಸೂಚನೆ
ಒಂದೇ ವರ್ಷದಲ್ಲಿ ಎಂಆರ್‌ಪಿಎಲ್‌ ಆದಾಯ 4,119 ಕೋಟಿ ಏರಿಕೆ: ದಾಖಲಿಸಿದ ಒಟ್ಟು ಹಣ ಎಷ್ಟು?