
ನವದೆಹಲಿ[ಆ.18]: ಸಾಮಾನ್ಯರಂತೆ ತಾನೂ ಸರ್ಕಾರಕ್ಕೆ ತೆರಿಗೆ ಪಾವತಿ ಮಾಡುತ್ತೇನೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತೆ ಮಾದರಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಕ್ಷಿಣ ಕೊರಿಯಾ ಸರ್ಕಾರ 2018ನೇ ಸಾಲಿನ ಸಿಯೋಲ್ ಶಾಂತಿ ಪ್ರಶಸ್ತಿ ನೀಡಿತ್ತು.
ಪ್ರಶಸ್ತಿಯ ಭಾಗವಾಗಿ 1.30 ಕೋಟಿ ರು. ನಗದು ಕೂಡಾ ನೀಡಿತ್ತು. ಈ ಹಣವನ್ನು ನಮಾಮಿ ಗಂಗಾ ಯೋಜನೆಗೆ ನೀಡುವುದಾಗಿ ಮೋದಿ ಘೋಷಿಸಿದ್ದರು. ಈ ನಡುವೆ ಕೇಂದ್ರ ಹಣಕಾಸು ಸಚಿವಾಲಯವು, ಮೋದಿಗೆ ಸಂದಿದ್ದ ಪ್ರಶಸ್ತಿಗೆ ವಿನಾಯ್ತಿ ನೀಡಿತ್ತು. ಈ ವಿಷಯವನ್ನು ತಡವಾಗಿ ಅರಿತ ಮೋದಿ, ವಿನಾಯ್ತಿ ರದ್ದುಪಡಿಸುವಂತೆ ಕೋರಿದ್ದಾರೆ.
ಅಲ್ಲದೆ ಪ್ರಶಸ್ತಿ ಹಣಕ್ಕೆ ತಾವು ತೆರಿಗೆ ಪಾವತಿಸುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಕೇಂದ್ರ ಹಣಕಾಸು ಸಚಿವಾಲಯವು ತಾನು ನೀಡಿದ್ದ ವಿನಾಯ್ತಿ ಹಿಂದಕ್ಕೆ ಪಡೆಯಲು ನಿರ್ಧರಿಸಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.