ಕಚ್ಚಾತೈಲ ಪುನಃ ಏರಿದರೆ ಮತ್ತೊಮ್ಮೆ ಅಬಕಾರಿ ಸುಂಕ ಕಡಿತ:ಹಣದುಬ್ಬರ ತಡೆಗೆ ಕ್ರಮ!

Published : May 23, 2022, 06:15 AM IST
ಕಚ್ಚಾತೈಲ ಪುನಃ ಏರಿದರೆ ಮತ್ತೊಮ್ಮೆ ಅಬಕಾರಿ ಸುಂಕ ಕಡಿತ:ಹಣದುಬ್ಬರ ತಡೆಗೆ ಕ್ರಮ!

ಸಾರಾಂಶ

* ಕಚ್ಚಾತೈಲ ಪುನಃ ಏರಿದರೆ ಮತ್ತೊಮ್ಮೆ ಅಬಕಾರಿ ಸುಂಕ ಕಡಿತ * ಹಣದುಬ್ಬರ ತಡೆಗೆ ಸರ್ಕಾರದ ಮತ್ತಷ್ಟುಕ್ರಮದ ಸುಳಿವು * ಹೆಚ್ಚುವರಿ 2 ಲಕ್ಷ ಕೋಟಿ ರು. ವೆಚ್ಚಕ್ಕೆ ಸರ್ಕಾರ ಸಿದ್ಧ

ನವದೆಹಲಿ(ಮೇ.23): ಬೆಲೆ ಏರಿಕೆ ಮತ್ತು ಹಲವು ವರ್ಷಗಳ ಅಧಿಕವಾದ ಹಣದುಬ್ಬರವನ್ನು ತಡೆಗಟ್ಟಲು ಈ ಹಣಕಾಸು ವರ್ಷದಲ್ಲಿ ಸರ್ಕಾರ ಹೆಚ್ಚುವರಿಯಾಗಿ 2 ಲಕ್ಷ ಕೋಟಿ ರು. ವೆಚ್ಚ ಮಾಡಲು ಸಿದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೈಲ ಅಬಕಾರಿ ಸುಂಕ ಕಡಿತದ ಕ್ರಮದಿಂದಾಗಿ ಸರ್ಕಾರಕ್ಕೆ ಈಗಾಗಲೇ 1 ಲಕ್ಷ ಕೋಟಿ ರು. ಹೊರೆ ಬೀಳಲಿದೆ. ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಿಂದಾಗಿ ಮತ್ತೊಮ್ಮೆ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾದರೆ, ಸರ್ಕಾರ ಅಬಕಾರಿ ಮತ್ತೊಮ್ಮೆ ಅಬಕಾರಿ ಸುಂಕ ಕಡಿತ ಮಾಡಲು ಸಿದ್ಧವಿದೆ ಎಂದು ಅವರು ತಿಳಿಸಿದ್ದಾರೆ. ಹೀಗಾಗಿ ಆಗ ಇನ್ನೂ 2 ಲಕ್ಷ ಕೋಟಿ ರು. ಹೆಚ್ಚುವರಿ ವೆಚ್ಚಕ್ಕೆ ಸರ್ಕಾರ ಸಿದ್ಧವಿದೆ ಎಂದಿದ್ದಾರೆ.

ಪ್ರಸ್ತುತ ಭಾರತದ ಚಿಲ್ಲರೆ ಹಣದುಬ್ಬರ 8 ವರ್ಷದ ಗರಿಷ್ಠಕ್ಕೆ ಮತ್ತು ಸಗಟು ಹಣದುಬ್ಬರ 17 ವರ್ಷದ ಗರಿಷ್ಠಕ್ಕೆ ಏರಿಕೆಯಾಗಿದೆ. ಇದು ಮುಂದಿನ ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಚುನಾವಣೆ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಹಾಗಾಗಿ ಹಣದುಬ್ಬರವನ್ನು ನಿಯಂತ್ರಣಕ್ಕೆ ತರಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ಉಕ್ರೇನ್‌ ರಷ್ಯಾ ನಡುವಿನ ಯುದ್ಧದ ಪರಿಣಾಮ ಹಣದುಬ್ಬರದ ಮೇಲೆ ಊಹಿಸಲಾಗದ ಪರಿಣಾಮ ಬೀರಿದೆ ಎಂದು ಅವರು ಹೇಳಿದ್ದಾರೆ.

ರಸಗೊಬ್ಬರಕ್ಕೆ ಈಗಾಗಲೇ ನೀಡಿರುವ 2.15 ಲಕ್ಷ ಕೋಟಿ ರು. ಸಹಾಯಧನದ ಮೇಲೆ ಹೆಚ್ಚುವರಿಯಾಗಿ 50 ಸಾವಿರ ಕೋಟಿ ರು. ಸಹಾಯಧನ ನೀಡಬೇಕಾಗಬಹುದು ಎಂದು ಸರ್ಕಾರ ಅಂದಾಜಿಸಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌