
ನವದೆಹಲಿ(ಅ.24): ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳು ಹೊಂದುವ ಈರುಳ್ಳಿ ದಾಸ್ತಾನಿನ ಮೇಲೆ ಮಿತಿ ಹೇರಿದೆ.
ಚಿಲ್ಲರೆ ವ್ಯಾಪಾರಿಗಳು 2 ಟನ್ವರೆಗೆ ಮತ್ತು ಸಗಟು ವ್ಯಾಪಾರಿಗಳು ಗರಿಷ್ಠ 25 ಟನ್ವರೆಗೆ ಮಾತ್ರ ದಾಸ್ತಾನು ಇಟ್ಟುಕೊಳ್ಳಬಹುದು. ಈ ನಿಯಮ ಡಿಸೆಂಬರ್ 31ರವರೆಗೂ ಚಾಲ್ತಿಯಲ್ಲಿರಲಿದೆ ಎಂದು ಗ್ರಾಹಕ ಸಚಿವಾಲಯ ಕಾರ್ಯದರ್ಶಿ ಲೀನಾ ನಂದನ್ ಶುಕ್ರವಾರ ತಿಳಿಸಿದ್ದಾರೆ.
ಬಳಿಕ ಕೇಂದ್ರ ಸಚಿವ ಪೀಯೂಷ್ ಗೋಯಲ್ ಸಹ ಟ್ವೀಟ್ ಮಾಡಿ, ‘ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ನಿಯಂತ್ರಿಸಲು ಮೋದಿ ನೇತೃತ್ವದ ಸರ್ಕಾರ ಈರುಳ್ಳಿ ದಾಸ್ತಾನಿನ ಮೇಲೆ ಮಿತಿ ಹೇರಿದೆ’ ಎಂದು ತಿಳಿಸಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.