ಬೆಂಗಳೂರು (ಏ. 28): ರಾಜ್ಯದ ಆರ್ಥಿಕ ಪುನಶ್ಚೇತಕ್ಕಾಗಿ ಲಾಕ್ಡೌನ್ ನಿಯಮವನ್ನು ಮತ್ತಷ್ಟುಸಡಿಲಗೊಳಿಸಲು ಸರ್ಕಾರವು ಮುಂದಾಗಿದೆ. ಬುಧವಾರದಿಂದ ಕ್ರಷರ್ ವ್ಯವಹಾರ ಮತ್ತು ಸಬ್ ರಿಜಿಸ್ಟ್ರಾರ್ ಕಚೇರಿಗಳ ಆರಂಭಿಸಲು ನಿರ್ಧರಿಸಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಬಂದಿಲ್ಲ. ಮಂಗಳವಾರ ಆದೇಶ ಪ್ರಕಟಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಲಾಕ್ಡೌನ್ ನಡುವೆ ಬೆಂಗಳೂರಿಗರಿಗೆ ಸಿಹಿ ಸುದ್ದಿ!
ಈಗಾಗಲೇ ಅಗತ್ಯ ಸೇವೆಯ ಜತೆಗೆ ಆರ್ಥಿಕ ಚಟುವಟಿಕೆಗಾಗಿ ಕೆಲವು ನಿಯಮಗಳಲ್ಲಿ ಸಡಿಲಗೊಳಿಸಲಾಗಿದೆ. ಸರ್ಕಾರದ ಬೊಕ್ಕಸಕ್ಕೆ ಆದಾಯ ತಂದುಕೊಡುವುದರಲ್ಲಿ ಕ್ರಷರ್ ವ್ಯವಹಾರ ಮತ್ತು ಆಸ್ತಿ ನೋಂದಣಿಯು ಪ್ರಮುಖವಾದ ಮೂಲಗಳು. ಹೀಗಾಗಿ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವ ದಿಸೆಯಲ್ಲಿ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.