‘ಎಲ್ಲಾ ಹದಗೆಡಸಿದ್ದು ರಾಜನ್, ಮೋದಿ ಅಲ್ವೇ ಅಲ್ಲ’!

Published : Sep 04, 2018, 11:18 AM ISTUpdated : Sep 09, 2018, 10:22 PM IST
‘ಎಲ್ಲಾ ಹದಗೆಡಸಿದ್ದು ರಾಜನ್, ಮೋದಿ ಅಲ್ವೇ ಅಲ್ಲ’!

ಸಾರಾಂಶ

ದೇಶದ ಆರ್ಥಿಕ ಬೆಳವಣಿಗೆ ಕುಂಠಿತಕ್ಕೆ ರಾಜನ್ ಕಾರಣ! ನೋಟು ನಿಷೇಧದಿಂದ ಆರ್ಥಿಕ ಬೆಳವಣಿಗೆ ಕುಂಠಿತವಾಗಿಲ್ಲ! ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅಭಿಮತ! ವಸೂಲಾಗದ ಸಾಲದ ಪ್ರಮಾಣ ಏರಿಕೆಗೆ ರಾಜನ್ ಕಾರಣ 

ನವದೆಹಲಿ(ಸೆ.4): ದೇಶದ ಆರ್ಥಿಕ ಬೆಳವಣಿಗೆ ಇಳಿಮುಖವಾಗುವುದಕ್ಕೆ ಆರ್‌ಬಿಐ ನ ಮಾಜಿ ಗರ್ವನರ್ ರಘುರಾಮ್ ರಾಜನ್ ಅವರ ನೀತಿಗಳೇ ಕಾರಣವೇ ಹೊರತು ನೋಟು ನಿಷೇಧವಲ್ಲ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ. 

ಆರ್ಥಿಕ ಬೆಳವಣಿಗೆ ಇಳಿಕೆಯಾಗುವುದಕ್ಕೆ ಎನ್‌ಪಿಎಗಳು ಹೆಚ್ಚುತ್ತಿರುವುದೂ ಸಹ ಕಾರಣವಾಗಿದೆ. ರಘುರಾಮ್ ರಾಜನ್ ಆರ್‌ಬಿಐ ಗನರ್ನರ್ ಆಗಿದ್ದ ವೇಳೆ ಜಾರಿಗೆ ತರಲಾಗಿದ್ದ ನಿಯಮಗಳಿಂದ ಬ್ಯಾಂಕಿಂಗ್ ಕ್ಷೇತ್ರ ಉದ್ಯಮ ವಲಯಕ್ಕೆ ಸಾಲ ನೀಡುವುದನ್ನು ನಿಲ್ಲಿಸುವಂತೆ ಮಾಡಿತ್ತು ಎಂದು ರಾಜೀವ್ ಕುಮಾರ್ ದೂರಿದ್ದಾರೆ.  

ಒಟ್ಟು ವಸೂಲಾಗದ ಸಾಲ ಪ್ರಮಾಣ (ಜಿಎನ್‌ಪಿಎ) 2018 ರ ಜೂ.30 ವರೆಗೆ ಶೇ.11.52 ರಷ್ಟಿದ್ದು, ಮಾರ್ಚ್ 2019 ವೇಳೆಗೆ ಶೇ.10 ರಷ್ಟಾಗಲಿದೆ.  ಬ್ಯಾಂಕಿಂಗ್ ಕ್ಷೇತ್ರದ ಅನುತ್ಪಾದಕ ಆಸ್ತಿ ಜೂನ್ ಅಂತ್ಯದ ವರೆಗೂ ಶೇ.5.92 ರಷ್ಟಿದ್ದು ವರ್ಷಾಂತ್ಯದ ವೇಳೆ ಶೇ.4.3 ರಷ್ಟಕ್ಕೆ ಇಳಿಯುವ ನಿರೀಕ್ಷೆ ಇದೆ. ವಸೂಲಾಗದೇ ಇರುವ ಸಾಲಕ್ಕೆ ಸಂಬಂಧಿಸಿದಂತೆ ಆರ್‌ಬಿಐ ನ್ನು ಸಂಸತ್ ಸಮಿತಿಯೂ ಪ್ರಶ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಈ ರಾಶಿ ಜನರು ಹೊಸ ವರ್ಷ 2026 ರಲ್ಲಿ ಲಕ್ಷಾಧಿಪತಿಗಳಾಗುತ್ತಾರೆ, ಬಂಪರ್ ಯಶಸ್ಸು, ಸಂತೋಷ ಮತ್ತು ಸಮೃದ್ಧಿ
2026 ರಲ್ಲಿ ಮೇಷ ರಾಶಿಯವರ ಆರ್ಥಿಕ ಸ್ಥಿತಿ ಹೇಗಿರುತ್ತದೆ? AI ಪ್ರಕಾರ ಲಾಭನಾ ಅಥವಾ ನಷ್ಟನಾ?