'ಭಾರತದ ಹೊಸ ಕೃಷಿ ಕಾಯ್ದೆಗಳು ರೈತರ ಆದಾಯ ಹೆಚ್ಚಿಸುತ್ತವೆ'

Published : Jan 28, 2021, 03:44 PM ISTUpdated : Jan 28, 2021, 03:46 PM IST
'ಭಾರತದ ಹೊಸ ಕೃಷಿ ಕಾಯ್ದೆಗಳು ರೈತರ ಆದಾಯ ಹೆಚ್ಚಿಸುತ್ತವೆ'

ಸಾರಾಂಶ

ಕೃಷಿ ಕಾಯ್ದೆಗಳ ವಿರುದ್ಧ ರೈತರು ಭಾರಿ ಪ್ರತಿಭಟನೆ| ಭಾರತದಲ್ಲಿ ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಕಾಯ್ದೆಗಳು ರೈತರ ಆದಾಯ ಹೆಚ್ಚಿಸುವ ಶಕ್ತಿ ಹೊಂದಿವೆ| ಐಎಂಎಫ್ ಮೆಚ್ಚುಗೆ

ವಾಷಿಂಗ್ಟನ್‌(ಜ.28): ಕೃಷಿ ಕಾಯ್ದೆಗಳ ವಿರುದ್ಧ ರೈತರು ಭಾರಿ ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ‘ಭಾರತದಲ್ಲಿ ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಕಾಯ್ದೆಗಳು ರೈತರ ಆದಾಯ ಹೆಚ್ಚಿಸುವ ಶಕ್ತಿ ಹೊಂದಿವೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.

‘ಭಾರತದ ಕೃಷಿ ಕ್ಷೇತ್ರಕ್ಕೆ ಸುಧಾರಣೆಗಳ ಅಗತ್ಯವಿದೆ. ಈಗ ಜಾರಿಗೊಳಿಸಿರುವ ಸುಧಾರಣೆಗಳು ಮಾರುಕಟ್ಟೆವಿಭಾಗಕ್ಕೆ ಸಂಬಂಧಪಟ್ಟಿವೆ. ಇವು ರೈತರಿಗೆ ಲಭಿಸುವ ಮಾರುಕಟ್ಟೆಗಳ ಆಯ್ಕೆಯನ್ನು ವಿಸ್ತಾರಗೊಳಿಸುತ್ತವೆ. ಅದರಿಂದಾಗಿ ರೈತರಿಗೆ ಕೇವಲ ಮಂಡಿಗಳಲ್ಲಿ ಮಾತ್ರವಲ್ಲದೆ ಎಲ್ಲಿ ಬೇಕಾದರೂ ಉತ್ಪನ್ನಗಳನ್ನು ಮಾರಲು ಅವಕಾಶ ಸಿಗುತ್ತದೆ.

ಹೀಗಾಗಿ ರೈತರ ಆದಾಯ ಹೆಚ್ಚಲು ಸಾಧ್ಯವಿದೆ. ಆದರೆ, ಯಾವುದೇ ಸುಧಾರಣೆ ಜಾರಿಗೆ ತಂದಾಗಲೂ ಅದರಿಂದ ಸಂಕಷ್ಟಕ್ಕೆ ಸಿಲುಕಬಹುದಾದ ಒಂದು ವರ್ಗವಿರುತ್ತದೆ. ಅಂತಹ ರೈತವರ್ಗಕ್ಕೆ ಸಾಮಾಜಿಕ ಭದ್ರತೆ ಒದಗಿಸಬೇಕು’ ಎಂದು ಐಎಂಎಫ್‌ನ ಮೈಸೂರು ಮೂಲದ ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್‌ ಹೇಳಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

YouTube ನಲ್ಲಿ ಗೋಲ್ಡನ್ ಬಟನ್ ಸಿಕ್ಕಿದ್ರೆ ಹಣದ ಹೊಳೆ, ಜಾಸ್ತಿ ಆಗುತ್ತೆ ತೆರಿಗೆ ಭಾರ
ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!