ದೇಶಕ್ಕೆ ಸಹಸ್ರಾರು ಕೋಟಿ ಉಳಿಸಿದ ಮಂಗಳೂರು!

Published : Jun 04, 2020, 08:15 AM ISTUpdated : Jun 04, 2020, 08:31 AM IST
ದೇಶಕ್ಕೆ ಸಹಸ್ರಾರು ಕೋಟಿ ಉಳಿಸಿದ ಮಂಗಳೂರು!

ಸಾರಾಂಶ

ದೇಶಕ್ಕೆ ಸಹಸ್ರಾರು ಕೋಟಿ ಉಳಿಸಿದ ಮಂಗಳೂರು| ಉಡುಪಿಯ ಪಾದೂರಿನಿಂದಲೂ ಕೊಡುಗೆ

ನವದೆಹಲಿ(ಜೂ.04): ಕರ್ನಾಟಕದ ಮಂಗಳೂರು, ಉಡುಪಿ ಜಿಲ್ಲೆಯ ಪಾದೂರು ಹಾಗೂ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಕೇಂದ್ರ ಸರ್ಕಾರ ಹೊಂದಿರುವ ಭೂಗತ ತೈಲ ಸಂಗ್ರಾಹಾರಗಳಿಂದ ದೇಶಕ್ಕೆ ಬರೋಬ್ಬರಿ 5000 ಕೋಟಿ ರು. ವಿದೇಶಿ ವಿನಿಮಯ ಉಳಿತಾಯವಾಗಿದೆ.

ಜಗತ್ತಿನಲ್ಲಿ ತೈಲ ಬೆಲೆ ಕುಸಿತ; ಭಾರತಕ್ಕೆ ಲಾಭವಿದೆಯೇ?

53 ಲಕ್ಷ ಟನ್‌ನಷ್ಟುತುರ್ತು ಇಂಧನ ಸಂಗ್ರಹಕ್ಕೆ ಈ ಮೂರೂ ಕಡೆ ಪೆಟ್ರೋಲಿಯಂ ಸಚಿವಾಲಯ ಭೂಗತ ಸಂಗ್ರಹಾಗಾರ ಹೊಂದಿದೆ. ಏಪ್ರಿಲ್‌ನಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 2 ದಶಕಗಳ ಕನಿಷ್ಠ ಮಟ್ಟಕ್ಕೆ ಕುಸಿದಾಗ ಕೇಂದ್ರ ಸರ್ಕಾರ ಅಗ್ಗದ ಬೆಲೆಗೆ ತೈಲ ಖರೀದಿಸಿ ಈ ತೈಲ ಸಂಗ್ರಹಾಗಾರಗಳಿಗೆ ತುಂಬಿದೆ. ಆ ವೇಳೆ ಮಂಗಳೂರು ಹಾಗೂ ಪಾದೂರಿನ ಸಂಗ್ರಾಹಾಗಾರಗಳು ಅರ್ಧದಷ್ಟುಖಾಲಿ ಇದ್ದವು. ವಿಶಾಖಪಟ್ಟಣದಲ್ಲಿ ಕೆಲವೇ ಪ್ರಮಾಣದ ಸಂಗ್ರಹಕ್ಕೆ ಜಾಗವಿತ್ತು. ಕೇಂದ್ರ ಸರ್ಕಾರದ ಆ ನಿರ್ಧಾರದಿಂದಾಗಿ 5000 ಕೋಟಿ ರು. ನಷ್ಟುವಿದೇಶಿ ವಿನಿಮಯ ಉಳಿತಾಯವಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ಟ್ವೀಟ್‌ ಮಾಡಿದೆ.

ಮಂಗಳೂರು, ಪಾದೂರು, ವಿಶಾಖಪಟ್ಟಣ ಪೈಕಿ ಪಾದೂರು ಘಟಕವೇ ದೊಡ್ಡದು. ಈ ಮೂರೂ ಘಟಕಗಳಲ್ಲಿ 53 ದಶಲಕ್ಷ ಟನ್‌ ತೈಲ ಸಂಗ್ರಹಿಸಬಹುದು. 9.5 ದಿನ ದೇಶದ ಬೇಡಿಕೆ ಈಡೇರಿಸಬಲ್ಲದು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್
ಮದ್ಯ ಮಾರಾಟಕ್ಕೆ ಇಳಿದ ಯುವರಾಜ್‌ ಸಿಂಗ್‌, ಒಂದು ತಿಂಗಳ ಸಂಬಳಕ್ಕೆ ಬರುತ್ತೆ ಒಂದು ಬಾಟಲ್‌!