ದೇಶಕ್ಕೆ ಸಹಸ್ರಾರು ಕೋಟಿ ಉಳಿಸಿದ ಮಂಗಳೂರು!

Published : Jun 04, 2020, 08:15 AM ISTUpdated : Jun 04, 2020, 08:31 AM IST
ದೇಶಕ್ಕೆ ಸಹಸ್ರಾರು ಕೋಟಿ ಉಳಿಸಿದ ಮಂಗಳೂರು!

ಸಾರಾಂಶ

ದೇಶಕ್ಕೆ ಸಹಸ್ರಾರು ಕೋಟಿ ಉಳಿಸಿದ ಮಂಗಳೂರು| ಉಡುಪಿಯ ಪಾದೂರಿನಿಂದಲೂ ಕೊಡುಗೆ

ನವದೆಹಲಿ(ಜೂ.04): ಕರ್ನಾಟಕದ ಮಂಗಳೂರು, ಉಡುಪಿ ಜಿಲ್ಲೆಯ ಪಾದೂರು ಹಾಗೂ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಕೇಂದ್ರ ಸರ್ಕಾರ ಹೊಂದಿರುವ ಭೂಗತ ತೈಲ ಸಂಗ್ರಾಹಾರಗಳಿಂದ ದೇಶಕ್ಕೆ ಬರೋಬ್ಬರಿ 5000 ಕೋಟಿ ರು. ವಿದೇಶಿ ವಿನಿಮಯ ಉಳಿತಾಯವಾಗಿದೆ.

ಜಗತ್ತಿನಲ್ಲಿ ತೈಲ ಬೆಲೆ ಕುಸಿತ; ಭಾರತಕ್ಕೆ ಲಾಭವಿದೆಯೇ?

53 ಲಕ್ಷ ಟನ್‌ನಷ್ಟುತುರ್ತು ಇಂಧನ ಸಂಗ್ರಹಕ್ಕೆ ಈ ಮೂರೂ ಕಡೆ ಪೆಟ್ರೋಲಿಯಂ ಸಚಿವಾಲಯ ಭೂಗತ ಸಂಗ್ರಹಾಗಾರ ಹೊಂದಿದೆ. ಏಪ್ರಿಲ್‌ನಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 2 ದಶಕಗಳ ಕನಿಷ್ಠ ಮಟ್ಟಕ್ಕೆ ಕುಸಿದಾಗ ಕೇಂದ್ರ ಸರ್ಕಾರ ಅಗ್ಗದ ಬೆಲೆಗೆ ತೈಲ ಖರೀದಿಸಿ ಈ ತೈಲ ಸಂಗ್ರಹಾಗಾರಗಳಿಗೆ ತುಂಬಿದೆ. ಆ ವೇಳೆ ಮಂಗಳೂರು ಹಾಗೂ ಪಾದೂರಿನ ಸಂಗ್ರಾಹಾಗಾರಗಳು ಅರ್ಧದಷ್ಟುಖಾಲಿ ಇದ್ದವು. ವಿಶಾಖಪಟ್ಟಣದಲ್ಲಿ ಕೆಲವೇ ಪ್ರಮಾಣದ ಸಂಗ್ರಹಕ್ಕೆ ಜಾಗವಿತ್ತು. ಕೇಂದ್ರ ಸರ್ಕಾರದ ಆ ನಿರ್ಧಾರದಿಂದಾಗಿ 5000 ಕೋಟಿ ರು. ನಷ್ಟುವಿದೇಶಿ ವಿನಿಮಯ ಉಳಿತಾಯವಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ಟ್ವೀಟ್‌ ಮಾಡಿದೆ.

ಮಂಗಳೂರು, ಪಾದೂರು, ವಿಶಾಖಪಟ್ಟಣ ಪೈಕಿ ಪಾದೂರು ಘಟಕವೇ ದೊಡ್ಡದು. ಈ ಮೂರೂ ಘಟಕಗಳಲ್ಲಿ 53 ದಶಲಕ್ಷ ಟನ್‌ ತೈಲ ಸಂಗ್ರಹಿಸಬಹುದು. 9.5 ದಿನ ದೇಶದ ಬೇಡಿಕೆ ಈಡೇರಿಸಬಲ್ಲದು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

Business Idea: ಕಡಿಮೆ ಬಂಡವಾಳ, ಅಧಿಕ ಆದಾಯ.. ಎಂದಿಗೂ ಲಾಸ್‌ ಆಗದ ವ್ಯವಹಾರಗಳಿವು!
Whatsapp ಮೂಲಕವೂ ಗ್ಯಾಸ್​ ಸಿಲಿಂಡರ್​ ಬುಕಿಂಗ್​ಗೆ ಅವಕಾಶ: ಸಂಪೂರ್ಣ ಡಿಟೇಲ್ಸ್​ ಇಲ್ಲಿದೆ