Davos 2022: ಕರ್ನಾಟಕದಲ್ಲಿ 50,000 ಕೋಟಿ ಹೂಡಿಕೆಗೆ ಸಿಎಂ ಒಪ್ಪಂದ

Published : May 25, 2022, 04:48 AM ISTUpdated : May 25, 2022, 10:43 AM IST
Davos 2022: ಕರ್ನಾಟಕದಲ್ಲಿ 50,000 ಕೋಟಿ ಹೂಡಿಕೆಗೆ ಸಿಎಂ ಒಪ್ಪಂದ

ಸಾರಾಂಶ

*   ಭಾರಿ ಬಂಡವಾಳ ಹೂಡಿಕೆ *  ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ರೆನ್ಯೂ ಪವರ್‌ ಲಿ.ನಿಂದ ಕರ್ನಾಟಕದಲ್ಲಿ ಹೂಡಿಕೆ *  ದಾವೋಸ್‌ನಲ್ಲಿ ಬೊಮ್ಮಾಯಿ ‘ಬಂಡವಾಳ ಬೇಟೆ’ ಅದಾನಿ, ಮಿತ್ತಲ್‌ ಜತೆಗೂ ಚರ್ಚೆ  

ಬೆಂಗಳೂರು(ಮೇ.25): ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯ ವೇಳೆ ರಾಜ್ಯದಲ್ಲಿ ಭರ್ಜರಿ 50000 ಕೋಟಿ ರು. ಬಂಡವಾಳ ಹೂಡುವುದಾಗಿ ನವೀಕರಿಸಬಹುದಾದ ಇಂಧನ ಕ್ಷೇತ್ರದ ಮುಂಚೂಣಿ ಕಂಪನಿಯಾದ ರೆನ್ಯೂ ಪವರ್‌ ಪ್ರೈ.ಲಿ ಘೋಷಿಸಿದೆ. ಅಲ್ಲದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಂಸ್ಥೆ, ರಾಜ್ಯ ಸರ್ಕಾರದೊಂದಿಗೆ 50 ಸಾವಿರ ಕೊಟಿ ರು. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿದೆ.

ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ. ರೆನ್ಯೂ ಪವರ್‌ ಕಂಪೆನಿಯು ಮುಂದಿನ ಏಳು ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್‌, ಗ್ರೀನ್‌ ಹೈಡ್ರೋಜನ್‌ ಘಟಕ ಸ್ಥಾಪಿಸಲು ಉದ್ದೇಶಿಸಿದ್ದು, ಎರಡು ಹಂತಗಳಲ್ಲಿ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ ಎಂದರು.

"

Davos2022: ದಾವೋಸ್‌ನಲ್ಲಿ ಬೊಮ್ಮಾಯಿ, ಸದ್ಗುರು ಭೇಟಿ

ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ 11,900 ಕೋಟಿ ರು. ಬಂಡವಾಳ ಹೂಡಿ, ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ. ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್‌ ಹೈಡ್ರೋಜನ್‌ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರು.ಗಳ ಬಂಡವಾಳವನ್ನು ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ ಎಂದು ತಿಳಿಸಿದರು.

ರೆನ್ಯೂ ಪವರ್‌ ಹಿನ್ನೆಲೆ:

ಭಾರತದಲ್ಲಿ ನವೀಕರಿಸಬಹುದಾದ ಇಂಧನದ ಉತ್ಪಾದನೆಯಲ್ಲಿ ತೊಡಗಿರುವ ಅತ್ಯಂತ ದೊಡ್ಡ ಸಂಸ್ಥೆ. ಭಾರತದ 9 ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ಪವನ, ಸೌರ ಹಾಗೂ ಹೈಡ್ರೋ ಇಂಧನ ಪ್ರಾಜೆಕ್ಟ್ಗಳನ್ನು ಸ್ಥಾಪಿಸಿದೆ. ಕರ್ನಾಟಕದಲ್ಲಿ ಈ ಸಂಸ್ಥೆಯು ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿದೆ. ಸಂಸ್ಥೆಯು ಪ್ರಸ್ತುತ 12 ಗಿಗಾವ್ಯಾಟ್‌ನಷ್ಟುಇಂಧನವನ್ನು ಉತ್ಪಾದಿಸುತ್ತಿದೆ.

ಏರ್‌ಟೆಲ್‌ನಿಂದ ಡಾಟಾ ಸೆಂಟರ್‌:

ಇದಕ್ಕೂ ಮುನ್ನ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಭಾರ್ತಿ ಎಂಟರ್‌ ಪ್ರೈಸಸ್‌ನ ಅಧ್ಯಕ್ಷ ಹಾಗೂ ಸಿಇಓ ಸುನಿಲ್‌ ಭಾರ್ತಿ ಮಿತ್ತಲ, ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್‌ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಅದಾನಿ ಜೊತೆ ಸಿಎಂ ಚರ್ಚೆ:

ಇದಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್‌ ಅದಾನಿ ಅವರೊಂದಿಗೆ ಹಾಗೂ ಜಾನ್ಸ್‌ನ್‌ ಕಂಟ್ರೋಲ್ಸ್‌ ನ ಸಿಇಓ ಜಾಜ್‌ರ್‍ ಒಲಿವರ್‌ ಅವರೊಂದಿಗೆ ಕರ್ನಾಟಕದಲ್ಲಿನ ಹೂಡಿಕೆಗಳ ಅವಕಾಶಗಳ ಬಗ್ಗೆ ಮಾತುಕತೆ ನಡೆಸಿದರು.

ದಾವೋಸ್‌ನಲ್ಲಿ ಉದ್ಯಮಿಗಳ ಸೆಳೆದ ಕರ್ನಾಟಕ: ಉದ್ಯಮಿಗಳ ಜತೆ ಸಿಎಂ ಬೊಮ್ಮಾಯಿ ನೇರ ಮಾತುಕತೆ

ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ಐಟಿ ಬಿಟಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್‌, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್‌ ಕೃಷ್ಣ ಉಪಸ್ಥಿತರಿದ್ದರು.

1ನೇ ಹಂತ

ರಾಜ್ಯದಲ್ಲಿ ಹಾಲಿ ಜಾರಿಯಲ್ಲಿರುವ ಯೋಜನೆಗಳಿಗೆ 2 ವರ್ಷದಲ್ಲಿ 11900 ಕೋಟಿ ರು. ಹೂಡಿಕೆ

2ನೇ ಹಂತ

ಮುಂದಿನ 5 ವರ್ಷಗಳಲ್ಲಿ ಹೊಸತಾಗಿ 37,500 ಕೋಟಿ ರು. ಬಂಡವಾಳ ಹೂಡಿಕೆಗೆ ಒಪ್ಪಂದ

30000 ಉದ್ಯೋಗ

ರೆನ್ಯೂ ಪವರ್‌ ಕಂಪನಿಯು ಮುಂದಿನ ಏಳು ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್‌, ಗ್ರೀನ್‌ ಹೈಡ್ರೋಜನ್‌ ಘಟಕಗಳನ್ನು ಕರ್ನಾಟಕದಲ್ಲಿ ಸ್ಥಾಪಿಸಲಿದೆ. ಒಟ್ಟಾರೆ 5 ವರ್ಷಗಳಲ್ಲಿ 30,000 ಉದ್ಯೋಗ ಸೃಷ್ಟಿಸುವ ಯೋಜನೆಗಳಿಗೆ ಬಂಡವಾಳ ಹೂಡಲು ದಾವೋಸ್‌ನಲ್ಲಿ ಒಪ್ಪಂದವಾಗಿದೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯ ವೇಳೆ ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್‌ ಅದಾನಿ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದರು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್
ಮದ್ಯ ಮಾರಾಟಕ್ಕೆ ಇಳಿದ ಯುವರಾಜ್‌ ಸಿಂಗ್‌, ಒಂದು ತಿಂಗಳ ಸಂಬಳಕ್ಕೆ ಬರುತ್ತೆ ಒಂದು ಬಾಟಲ್‌!