
ನವದೆಹಲಿ(ಆ.28): ಕೇರಳದ ಜಲಪ್ರಳಯದ ಹಿನ್ನೆಲೆಯಲ್ಲಿ ಅಲ್ಲಿನ ಆದಾಯ ತೆರಿಗೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಆದಾಯ ತೆರಿಗೆ ಸಲ್ಲಿಸಲು ನಿಗದಿ ಮಾಡಿದ್ದ ದಿನಾಂಕವನ್ನು ಕೇರಳ ಜನರಿಗಾಗಿ 15 ದಿನಗಳ ಕಾಲ ಮುಂದೂಡಲಾಗಿದೆ. ಐಟಿಆರ್ ಸಲ್ಲಿಸಲು ಇದೇ ಆಗಸ್ಟ್ 31 ಕೊನೆ ದಿನಾಂಕವಾಗಿತ್ತು. ಆದರೆ ಪ್ರವಾಹದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಈ ಅವಧಿಯನ್ನು ಸೆಪ್ಟೆಂಬರ್ 15 ರ ವರೆಗೆ ವಿಸ್ತರಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್, ವಿವಿಧ ವಿಭಾಗಗಳ ಆದಾಯ ತೆರಿಗೆ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಹೇಳಿದೆ. ಪ್ರಸಕ್ತ ಸಾಲಿನಿಂದ ಆದಾಯ ತೆರಿಗೆ ಸಲ್ಲಿಕೆ ಗಡುವು ಮೀರಿದರೆ ತೆರಿಗೆದಾರರು ದಂಡ ಪಾವತಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರವಾಹದಿಂದ ನಲುಗಿರುವ ಕೇರಳ ಜನರಿಗೆ ಆಗಸ್ಟ್ 31ರ ಅವಧಿ ಸಾಕಾಗದು ಎಂದು ಅಭಿಪ್ರಾಯಪಡಲಾಗಿದೆ.
ತೆರಿಗೆದಾರರ ಮನವಿ ಪುರಸ್ಕರಿಸಿರುವ ಕೇಂದ್ರ ಹಣಕಾಸು ಇಲಾಖೆ, ಆದಾಯ ತೆರಿಗೆ ಸಲ್ಲಿಕೆಯ ಅವಧಿಯನ್ನು ಸೆಪ್ಟೆಂಬರ್ 15 ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಹಣಕಾಸು ಇಲಾಖೆ, ತೆರಿಗೆದಾರರ ಮನವಿ ಪುರಸ್ಕರಿಸಿದ್ದು, ಆದಾಯ ತೆರಿಗೆ ಸಲ್ಲಿಕೆಯ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.