ಕರ್ನಾಟಕ ಬಜೆಟ್ 2020: ಮಹದಾಯಿ ಯೋಜನೆಗೆ 500 ಕೋಟಿ ಮೀಸಲು

Suvarna News   | Asianet News
Published : Mar 05, 2020, 12:12 PM ISTUpdated : Mar 05, 2020, 01:33 PM IST
ಕರ್ನಾಟಕ ಬಜೆಟ್ 2020: ಮಹದಾಯಿ ಯೋಜನೆಗೆ 500 ಕೋಟಿ ಮೀಸಲು

ಸಾರಾಂಶ

ಮಹದಾಯಿ ಯೋಜನೆ ಅನುಷ್ಠಾನಕ್ಕೆ 500 ಕೋಟಿ ರು. ಮೀಸಲು| ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಘೋಷಣೆ| ಮಹದಾಯಿ ಯೋಜನೆ ಅನುಷ್ಟಾನಕ್ಕೆ ಇದ್ದ ಎಲ್ಲ ಕಾನೂನು ತೊಡಕುಗಳು ನಿವಾರಣೆ| ಇತ್ತೀಚೆಗಷ್ಟೇ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದ್ದ ಕೇಂದ್ರ ಸರ್ಕಾರ| 

ಬೆಂಗಳೂರು(ಮಾ.05): ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾದ ಮಹಾದಾಯಿ ಯೋಜನೆ ಅನುಷ್ಠಾನಕ್ಕೆ 500 ಕೋಟಿ ರು. ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮಹದಾಯಿ ಹೋರಾಟಗಾರರಿಗೆ ಸಿಹಿ ಸುದ್ದಿಯನ್ನ ನೀಡಿದ್ದಾರೆ. 

"

ಕರ್ನಾಟಕ ಬಜೆಟ್ 2020: 'ಮಹದಾಯಿಗೆ ಕನಿಷ್ಠ 1000 ಕೋಟಿ ಮೀಸಲಿಡಲಿ'

ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಇದ್ದ ಎಲ್ಲ ಕಾನೂನು ತೊಡಕುಗಳು ನಿವಾರಣೆಯಾಗಿವೆ. ಹೀಗಾಗಿ ಈ ಯೋಜನೆಯನ್ನ ಅನುಷ್ಟಾನಕ್ಕೆ ತರಲು ಬಜೆಟ್‌ನಲ್ಲಿ 500 ಕೋಟಿ ರು. ಮೀಸಲು ಇಟ್ಟಿರುವುದಾಗಿ ಹೇಳಿದ್ದಾರೆ. 

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಕೇಂದ್ರ ಸರ್ಕಾರ ನಡೆ ಪ್ರಶ್ನಿಸಿ ಗೋವಾ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಈ ವಿಚಾರಣೆಯನ್ನ ಕೈಗೆತ್ತಿಕೊಂಡ ಸುಪ್ರೀಂ ಮಹದಾಯಿ ಯೋಜನೆ ಆರಂಭಿಸಬಹುದು ಎಂದು ತೀರ್ಪು ನೀಡುವ ಮೂಲಕ ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನ ವಜಾ ಗೊಳಿಸಿತ್ತು. ಈ ಮೂಲಕ ಬರೋಬ್ಬರಿ ನಾಲ್ಕು ದಶಕಗಳ ಹೋರಾಟಕ್ಕೆ ಜಯ ಸಿಕ್ಕಿದೆ.

ಮಹದಾಯಿ ಕಾನೂನು ಹೋರಾಟ: ರಾಜ್ಯಕ್ಕೆ ಮತ್ತೊಂದು ಜಯ, ಗೋವಾಗೆ ಮುಖಭಂಗ

ಈ ಮೊದಲು ರೈತಸೇನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಅವರು, ಮಹದಾಯಿ ವಿಷಯವಾಗಿ ಸಬೂಬು ಹೇಳಲು ರಾಜ್ಯ ಸರ್ಕಾರದ ಬಳಿ ವಿಷಯವೇ ಇಲ್ಲ. ಈಗ ಏನೇ ಮಾಡಬೇಕಿದ್ದರೂ ಅದನ್ನು ರಾಜ್ಯ ಸರ್ಕಾರವೇ ಮಾಡಬೇಕು. ಇದಕ್ಕಾಗಿ ಈ ಬಜೆಟ್‌ನಲ್ಲಿ ಕನಿಷ್ಠವೆಂದರೂ 1 ಸಾವಿರ ಕೋಟಿಯನ್ನಾದರೂ ಮೀಸಲಿಡಬೇಕು ಎಂದು  ಹೇಳಿದ್ದರು. 
 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಅಚ್ಚರಿಯ ಇಳಿಕೆ!
ಅಮೆರಿಕ ಇರಾನ್ ದಾಳಿಯಿಂದ ಭಾರತೀಯರಿಗೆ ಮತ್ತೊಂದು ಶಾಕ್, ಮಾ.1ರಿಂದ ಚಿನ್ನ ಬೆಳ್ಳಿ ಬೆಲೆ ದುಬಾರಿ