ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಘೋಷಿಸಿದ ಸಿದ್ದರಾಮಯ್ಯ, 393 ಕೋಟಿ ರೂ ಅನುದಾನ ಮೀಸಲು

By Gowthami KFirst Published Feb 16, 2024, 12:05 PM IST
Highlights

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಅಲ್ಪಸಂಖ್ಯಾತ ಸಮುದಾಯಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. 

ಬೆಂಗಳೂರು (ಫೆ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಅಲ್ಪಸಂಖ್ಯಾತ ಸಮುದಾಯಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.  ಅಲ್ಪಸಂಖ್ಯಾತ ಸಮುದಾಯ  ಅಭಿವೃದ್ಧಿಗಾಗಿ ಘೋಷಣೆ ಮಾಡಿರುವ ಪ್ರಮುಖ  ಹೈಲೈಟ್ಸ್ ಇಲ್ಲಿದೆ.

  • ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ 393 ಕೋಟಿ ರೂ ಅನುದಾನ ಮೀಸಲು
  • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭ
  • 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭ
  • 100 ಮೌಲಾನಾ ಆಜಾದ್ ಶಾಲೆ ಆರಂಭ
  • ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆ ಮತ್ತೆ ಆರಂಭ
  • ಅಲ್ಪಸಂಖ್ಯಾತ ಉದ್ಯಮಶೀಲರು ಕೈಗಾರಿಕೆ ಸ್ಥಾಪನೆಗೆ 10 ಕೋಟಿವರೆಗೂ ಸಾಲ (ಶೇ.6ರಷ್ಟು ಬಡ್ಡಿ ಸಹಾಯಧನ)
  • ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ  ಅನುದಾನ ಮೀಸಲು

ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಘೋಷಣೆ, ಮೆಟ್ರೋ, ಟನಲ್ ರೋಡ್‌, ಬಿಎಂಟಿಸಿಗೆ ಸಿಕ್ಕಿದ್ದೆಷ್ಟು?

  • ರಾಜ್ಯದಲ್ಲಿ ವಕ್ಫ್ ಆಸ್ತಿಗಳ ರಕ್ಷಣೆಗೆ 100 ಕೋಟಿ ಅನುದಾನ
  • ಮಂಗಳೂರಿನ ಹಜ್  ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ
  • ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ಮೀಸಲು
  •  ಧಾರ್ಮಿಕ ಸ್ಥಳದಲ್ಲಿ ಮೂಲಭೂತ ಸೌಕರ್ಯ 20 ಕೋಟಿ ಅನುದಾನ ಮೀಸಲು
  • ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50  ಕೋಟಿ ಅನುದಾನ ಮೀಸಲು
  • ರಾಜ್ಯದಲ್ಲಿರುವ ಸಿಖ್ಖ್ ಲಿಗಾರ್ ಸಮುದಾಯದವರ ಆರ್ಥಿಕ ಸಬಲೀಕರಣಕ್ಕಾಗಿ ಹೊಸ ಯೋಜನೆಗೆ 2 ಕೋಟಿ ಅನುದಾನ.
  • ಬೀದರ್‌ನಲ್ಲಿ ಶ್ರೀ ನಾನಕ್ ಝೀರಾ ಸಾಹೇಬ್‌ ಗುರುದ್ವಾರ ಅಭಿವೃದ್ಧಿಗೆ 1 ಕೋಟಿ ಮೀಸಲು
click me!