ಸಿದ್ದು ಬಜೆಟ್: ನದಿ ತಿರುವು ಯೋಜನೆ ಆಯ್ತು, ಈಗ ಕರಾವಳಿಯ ನೇತ್ರಾವತಿ, ಗುರುಪುರ ನದಿಗಳಲ್ಲಿ ಜಲಮೆಟ್ರೋ ಸೇವೆ

By Suvarna NewsFirst Published Feb 16, 2024, 1:26 PM IST
Highlights

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಲವು ಕೊಡುಗೆಗಳನ್ನು  ಘೋಷಣೆ ಮಾಡಿದ್ದಾರೆ.    ಪ್ರಮುಖ  ಹೈಲೈಟ್ಸ್ ಗಳ ಪಟ್ಟಿ ಇಲ್ಲಿದೆ.

ಬೆಂಗಳೂರು (ಫೆ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಲವು ಕೊಡುಗೆಗಳನ್ನು  ಘೋಷಣೆ ಮಾಡಿದ್ದಾರೆ.    ಪ್ರಮುಖ  ಹೈಲೈಟ್ಸ್ ಗಳ ಪಟ್ಟಿ ಇಲ್ಲಿದೆ.

  • ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಆರ್ಥಿಕ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ 
  • ಅಂದಾಜು 20,000 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಗಣನೀಯ ಅಭಿವೃದ್ಧಿ ಸಾಧಿಸುವ ಗುರಿ
  • ಸಾಗರಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಅಂದಾಜು 1,017 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 26 ಕಾಮಗಾರಿ
  • ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸಾಮರ್ಥ್ಯದ . ಮತ್ತು 4,200 ಕೋಟಿ ರೂ. ಅಂದಾಜು ಯೋಜನಾ ವೆಚ್ಚದ ಹೊಸ ಅಳಸಮುದ್ರ ಸರ್ವಋತು ಬಂದರು ಅಭಿವೃದ್ಧಿ
  • ಉತ್ತರ ಕನ್ನಡದ ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಅಂದಾಜು 3048 ಕೋಟಿ ರೂ.ಗಳ  ವೆಚ್ಚದಲ್ಲಿ ಎರಡನೇ ಬೃಹತ್ ಬಂದರಿನ ಅಭಿವೃದ್ಧಿಗೆ ಅಂತರಾಷ್ಟ್ರೀಯ ಟೆಂಡ‌ರ್‌ಗೆ ಕರೆ
  • ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿಕೆ

ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಘೋಷಣೆ, ಮೆಟ್ರೋ, ಟನಲ್ ರೋಡ್‌, ಬಿಎಂಟಿಸಿಗೆ ಸಿಕ್ಕಿದ್ದೆಷ್ಟು?

  • ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಸಂಪರ್ಕ ಸಾಧಿಸುವ ದೃಷ್ಟಿಯಿಂದ 1600 ಕೋಟಿ ರೂ. ವೆಚ್ಚದಲ್ಲಿ ವಿವಿಧ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ
  • ಮೈಸೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಸ್ವಾಧೀನಕ್ಕೆ 126 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಬಾಕಿ 43 ಕೋಟಿ ರೂ. ಬಿಡುಗಡೆಗೊಳಿಸಿ, ಕಾಮಗಾರಿ ಪ್ರಾರಂಭಕ್ಕೆ ಕ್ರಮ ವಹಿಸಲಾಗುವುದು  ಎಂದ ಸಿಎಂ 
  • ವಿಜಯಪುರದಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯು ಮುಕ್ತಾಯ. ಕಾಂಗ್ರೆಸ್‌ ಸರ್ಕಾರದಿಂದ ಯೋಜನೆಗೆ 94 ಕೋಟಿ ರೂ.ಗಳನ್ನು ಬಿಡುಗಡೆ 
  • ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ 2023-24ನೇ ಸಾಲಿನಲ್ಲಿ 55 ಕೋಟಿ ರೂ.ಗಳನ್ನು ಬಿಡುಗಡೆ. ಬಾಕಿ ಇರುವ 30 ಕೋಟಿ ರೂ. ಶೀಘ್ರ ಬಿಡುಗಡೆ
  • 220 ಕೋಟಿ ರೂ. ವೆಚ್ಚದ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯ ಅನುದಾನ

ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಘೋಷಿಸಿದ ಸಿದ್ದರಾಮಯ್ಯ, 393 ಕೋಟಿ ರೂ ಅನುದಾನ ಮೀಸಲು

  • ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯ ತೊಡಕು ನಿವಾರಿಸಿ ಶೀಘ್ರ ಕಾಮಗಾರಿ
  • ಬೆಂಗಳೂರು ಏರ್ಪೋರ್ಟ್ ಸಮೀಪದಲ್ಲಿ  817 ಕೋಟಿ ರೂ. ಯೋಜನಾ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಿಗ್ನಚಿರ್ ಬಿಸಿನೆಸ್ ಪಾರ್ಕ್ ಮುಂದಿನ ದಿನಗಳಲ್ಲಿ 5,000 ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸುವ ನಿರೀಕ್ಷೆ
  • ರೈಲ್ವೆ ಇಲಾಖೆಯೊಂದಿಗೆ ಸೇರಿ ವೆಚ್ಚ ಹಂಚಿಕೆ ಆಧಾರದಲ್ಲಿ 12,147 ಕೋಟಿ ರೂ.ಗಳ 9 ರೈಲ್ವೆ ಕಾಮಗಾರಿ ನಡೆಯುತ್ತಿದೆ. 
  • 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ರೈಲ್ವೆ ಯೋಜನೆಗಳಿಗಾಗಿ ಬಿಡುಗಡೆ
click me!