ವಿವಿಧ ಜಾತಿ ಸಮುದಾಯಗಳಿಗೆ ಬಜೆಟ್ಟಿನಲ್ಲಿ ಇಷ್ಟಿಷ್ಟು ಕೋಟಿ ಅನುದಾನ

Published : Mar 08, 2021, 01:25 PM ISTUpdated : Mar 08, 2021, 01:48 PM IST
ವಿವಿಧ ಜಾತಿ ಸಮುದಾಯಗಳಿಗೆ ಬಜೆಟ್ಟಿನಲ್ಲಿ ಇಷ್ಟಿಷ್ಟು ಕೋಟಿ ಅನುದಾನ

ಸಾರಾಂಶ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವರ್ಷದ ಬಜೆಟ್‌ನಲ್ಲಿ ವಿಧ ಜಾತಿ ಸಮುದಾಯಗಳಿಗೆ, ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ ಘೋಷಿಸಿದ್ದಾರೆ

ಬೆಂಗಳೂರು, (ಮಾ.08): 2021ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವರ್ಷವೂ ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ ಘೋಷಿಸಿದ್ದಾರೆ.

ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದು, ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಸಮುದಾಯಗಳಿಗೆ ಮಣೆ ಹಾಕಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಗಳಿಗಾಗಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು  1,500 ಕೋಟಿ ಮೊತ್ತವನ್ನು ಈ ಬಾರಿಯ ಬಜೆಟ್​ನಲ್ಲಿ ಮೀಸಲಿಟ್ಟಿದ್ದಾರೆ.

Live| Karnataka Budget 2021: ಕ್ಷಣ-ಕ್ಷಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿವಿಧ ಜಾತಿ ಸಮುದಾಯಗಳಿಗೆ ಅನುದಾನ
* ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ ಇಡಲಾಗಿದೆ. 
* ವೀರಶೈವ ಲಿಂಗಾಯತ ಅಭಿವೃದ್ಧಿ 500 ಕೋಟಿ ರೂ ಅನುದಾನ ಘೋಷಿಸಲಾಗಿದೆ. 
* ಒಕ್ಕಲಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು, ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ 500 ಕೋಟಿ ರೂ ಅನುದಾನ.
* ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ, ಆದಿಚುಂಚನಗಿರಿ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ ಪ್ರಕಟಿಸಲಾಗಿದೆ.
* ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ.
* ಅಲ್ಪಸಂಖ್ಯಾತ ಸಮುದಾಯಗಳಿಗಾಗಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು  1,500 ಕೋಟಿ ಮೊತ್ತವನ್ನು ಈ ಬಾರಿಯ ಬಜೆಟ್​ನಲ್ಲಿ ಮೀಸಲಿಡಲಾಗಿದೆ.

ಧಾರ್ಮಿಕ ಹಾಗೂ ಮಠಗಳಿಗೂ ಅನುದಾನ
* ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ  50 ಕೋಟಿ ರೂ.
* ವಿಜಯಪುರ ಜಿಲ್ಲೆ ಬಸನವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿರುವ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗೆ  5 ಕೋಟಿ, 
* ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ. ಅನುದಾನ ಘೋಷಿಸಲಾಗಿದೆ. 
* ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗೂ ಕರ್ನಾಟಕ ಸರ್ಕಾರ  10 ಕೋಟಿ ಅನುದಾನ ಘೋಷಿಸಿದೆ ಎಂದು ಯಡಿಯೂರಪ್ಪ ತಿಳಿಸಿದರು.
* ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್.ಬೈರಪ್ಪ ಅವರ ಪರ್ವ ನಾಟಕ ಪ್ರದರ್ಶನಕ್ಕೆ 1 ಕೋಟಿ ರೂ. ಅನುದಾನ ಘೋಷಿಸಲಾಗಿದೆ. * ರಾಜ್ಯಾದ್ಯಂತ ರಂಗಾಯಣಗಳ ಮೂಲಕ ಪರ್ವ ನಾಟಕವನ್ನು ಪ್ರದರ್ಶಿಸಲಾಗುವುದು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

Gold Rate Today: ಗಗನದಿಂದ ಭೂಮಿಗೆ ಇಳಿದ ಚಿನ್ನದ ದರ: ಬೆಲೆ ಏರಿಕೆಗೆ ಬಿತ್ತು ಬ್ರೇಕ್!
Minimum Balance: ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದಕ್ಕೆ 8,000 ಕೋಟಿ ರೂ. ದಂಡ ವಸೂಲಿ ಮಾಡಿದ ಬ್ಯಾಂಕುಗಳು!