
ನವದೆಹಲಿ(ಆ.25): ವಿಶ್ವದ ಪ್ರಸಿದ್ಧ ಐಫೋನ್ ತಯಾರಿಕಾ ಕಂಪನಿ ಆ್ಯಪಲ್ ಕೇರಳಕ್ಕೆ 70 ಮಿಲಿಯನ್ ನೆರವು ಘೋಷಿಸಿದೆ. ಕೇರಳದ ಪ್ರವಾಹ ನಮ್ಮನ್ನು ತುಂಬ ದು:ಖಕ್ಕೆ ಈಡು ಮಾಡಿದ್ದು, ಕೇರಳ ಜನರ ಜೊತೆಗೆ ನಾವಿದ್ದೇವೆ ಎಂದು ಆ್ಯಪಲ್ ಸಂಸ್ಥೆ ತಿಳಿಸಿದೆ. ಇದೇ ಕಾರಣಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಂಸ್ಥೆ ವತಿಯಿಂದ 70 ಮಿಲಿಯನ್ ನೆರವು ಕಳುಹಿಸುತ್ತಿರುವುದಾಗಿ ಕಂಪನಿ ಸ್ಪಷ್ಟಪಡಿಸಿದೆ.
ಇನ್ನು ಮೈಕ್ರೋಸಾಫ್ಟ್ ದಿಗ್ಗಜ ಬಿಲ್ ಗೇಟ್ಸ್ ಕೂಡ ಕೇರಳ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದು, ತಮ್ಮ ಬಿಲ್ ಮತ್ತು ಮೆಲಿಂದಾ ಗೇಟ್ಸ್ ಫೌಂಡೇಶನ್ ವತಿಯಿಂದ 4 ಕೋಟಿ ರೂ. ನೆರವಿನ ಘೋಷಣೆ ಮಾಡಿದ್ದಾರೆ. ಕೇರಳಕ್ಕಾಗಿ ಯುನಿಸೆಫ್ ಮೂಲಕ ಬಿಲ್ ಗೇಟ್ಸ್ 4 ಕೋಟಿ ರೂ. ನೆರವು ನೀಡಿದ್ದಾರೆ.
ಒಟ್ಟಿನಲ್ಲಿ ಕೇರಳ ಪ್ರವಾಹ ಮಾನವೀಯತೆಯ ಅನಾವರಣಕ್ಕೂ ಕಾರಣವಾಗಿದ್ದು, ಜಾತಿ, ಧರ್ಮ, ಗಡಿಗಳ ಭೇದವಿಲ್ಲದೇ ವಿಶ್ವದ ಜನರನ್ನು ಒಂದುಗೂಡಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.