ವೀರ ಸಾವರ್ಕರ್‌ಗೆ ಭಾರತ ರತ್ನ: ಮಹಾರಾಷ್ಟ್ರ ಗೆಲ್ಲಲು ಬಿಜೆಪಿ ಪ್ರಯತ್ನ!

Published : Oct 15, 2019, 04:18 PM ISTUpdated : Oct 15, 2019, 05:20 PM IST
ವೀರ ಸಾವರ್ಕರ್‌ಗೆ ಭಾರತ ರತ್ನ: ಮಹಾರಾಷ್ಟ್ರ ಗೆಲ್ಲಲು ಬಿಜೆಪಿ ಪ್ರಯತ್ನ!

ಸಾರಾಂಶ

'ಮಹಾರಾಷ್ಟ್ರ ಗೆದ್ದರೆ ವೀರ್ ಸಾವರ್ಕರ್‌ಗೆ ಭಾರತ ರತ್ನ ಗ್ಯಾರಂಟೀ'| ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ| ಸಾವರ್ಕರ್‌ಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯದ ಭರವಸೆ| ಜ್ಯೋತಿಬಾ ಪುಲೆ ಹಾಗೂ ಸಾವಿತ್ರಿ ಭಾಯಿ ಪುಲೆ ಅವರಿಗೂ ಭಾರತ ರತ್ನ ನೀಡುವಂತೆ ಮನವಿ| ಮತ್ತೆ ಅಧಿಕಾರಕ್ಕೆ ಬರುವ ಭರವಸೆ ವ್ಯಕ್ತಪಡಿಸಿದ ಬಿಜೆಪಿ|

ಮುಂಬೈ(ಅ.15): ವಿಧಾನಸಭೆ ಹೊಸ್ತಿಲಲ್ಲಿರುವ ಮಹಾರಾಷ್ಟ್ರದಲ್ಲಿ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿಯೇ ಇದೆ. ಅದರಲ್ಲೂ ಮತ್ತೆ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿರುವ ಬಿಜೆಪಿ, ಚುನಾವಣಾ ತಂತ್ರಗಾರಿಕೆಯಲ್ಲಿ ಇತರ ಪಕ್ಷಗಳಿಗಿಂತ ಒಂದು ಹೆಜ್ಜೆ ಮುಂದಿದೆ.

ಅದರಂತೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, ಅಧಿಕಾರಕ್ಕೆ ಬಂದರೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದೆ.

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ರಾಜ್ಯ ಬಿಜೆಪಿ ಘಟಕದ ನಾಯಕರು, ನಮಗೆಲ್ಲಾ ಸ್ಪೂರ್ತಿಯ ಚಿಲುಮೆಯಾಗಿರುವ ವಿ.ಡಿ,. ಸಾವರ್ಕರ್ ಅವರಿಗರ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಜನರಲ್ಲಿ ಮನವಿ ಮಾಡಿದರು.

ಇದೇ ವೇಳೆ ಜ್ಯೀತಿಬಾ ಪುಲೆ ಹಾಗೂ ಸಾವಿತ್ರಿ ಭಾಯಿ ಪುಲೆ ಅವರಿಗೂ ಭಾರತ ರ್ತನ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು ಎಂದು ಮಹಾರಾಷ್ಟ್ರ ಬಿಜೆಪಿಒ ಘಟಕ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರಸೆ ನೀಡಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್
ಮದ್ಯ ಮಾರಾಟಕ್ಕೆ ಇಳಿದ ಯುವರಾಜ್‌ ಸಿಂಗ್‌, ಒಂದು ತಿಂಗಳ ಸಂಬಳಕ್ಕೆ ಬರುತ್ತೆ ಒಂದು ಬಾಟಲ್‌!