ಬಿಎಸ್‌ಎನ್‌ಎಲ್‌ ನೆರವಿಗೆ ಮೋದಿ ದೌಡು!

Published : Apr 05, 2019, 07:45 AM ISTUpdated : Apr 05, 2019, 07:46 AM IST
ಬಿಎಸ್‌ಎನ್‌ಎಲ್‌ ನೆರವಿಗೆ ಮೋದಿ ದೌಡು!

ಸಾರಾಂಶ

ಬಿಎಸ್‌ಎನ್‌ಎಲ್‌ ನೆರವಿಗೆ ಮೋದಿ ದೌಡು| ನಷ್ಟದಲ್ಲಿರುವ ಕಂಪನಿ ತ್ವರಿತ ಪುನರುಜ್ಜೀವನಕ್ಕೆ ಸೂಚನೆ| ಪುನರುಜ್ಜೀವನಕ್ಕೆ ಏನೇನು ಕ್ರಮ| ಎರಡೂ ಸಂಸ್ಥೆಗಳಿಗೆ 4ಜಿ ಸ್ಪೆಕ್ಟ್ರಂ ಹಂಚಿಕೆ| ಸಿಬ್ಬಂದಿಗೆ ವಿಆರ್‌ಎಸ್‌ ಯೋಜನೆ ಜಾರಿ| ತಕ್ಷಣವೇ ಎರಡೂ ಸಂಸ್ಥೆಗಳಿಗೆ ಬಂಡವಾಳ

ನವದೆಹಲಿ[ಏ.05]: ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಮತ್ತು ಎಂಟಿಎನ್‌ಎಲ್‌ನಲ್ಲಿ 54000ದಷ್ಟುಉದ್ಯೋಗ ಕಡಿತಕ್ಕೆ ದೂರ ಸಂಪರ್ಕ ಸಚಿವಾಲಯ ನಿರ್ಧರಿಸಿದೆ ಎಂಬ ವರದಿಗಳ ಬೆನ್ನಲ್ಲೇ, ಈ ಎರಡೂ ಸಂಸ್ಥೆಗಳ ತ್ವರಿತ ಪುನರುಜ್ಜೀವನಕ್ಕೆ ಪ್ರಧಾನಿ ಕಾರ್ಯಾಲಯ ಆದೇಶಿಸಿದೆ ಎಂಬ ಸುದ್ದಿ ಹೊರಬಿದ್ದಿದೆ.

ಹೀಗಾಗಿ ಕಡ್ಡಾಯ ನಿವೃತ್ತಿ ಭೀತಿಯಲ್ಲಿದ್ದ ಸಾವಿರಾರು ನೌಕರರು ನಿರಾಳರಾಗುವಂತಾಗಿದೆ.

ಕೆಲ ದಿನಗಳ ಹಿಂದೆ ದೂರಸಂಪರ್ಕ ಸಚಿವಾಲಯ, ನೀತಿ ಆಯೋಗ, ಹಣಕಾಸು ಆಯೋಗದ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರಧಾನಿ ಕಾರ್ಯಾಲಯದ ಹಿರಿಯ ಅಧಿಕಾರಿಗಳು, ಪುನರುಜ್ಜೀವನದ ಭಾಗವಾಗಿ ಬಿಎಸ್‌ಎನ್‌ಎಲ್‌ ಮತ್ತು ಎಂಟಿಎನ್‌ಎಲ್‌ ಮುಂದಿಟ್ಟಿದ್ದ ಮೂರು ಪ್ರಸ್ತಾವನೆಗಳ ಜಾರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಎಸ್ಸೆನ್ನೆಲ್‌ನ 54 ಸಾವಿರ ನೌಕರರಿಗೆ ಕೊಕ್‌?

ತಕ್ಷಣವೇ ಈ ಎರಡೂ ಟೆಲಿಕಾಂ ಕಂಪನಿಗಳಿಗೆ 4ಜಿ ಸ್ಪೆಕ್ಟ್ರಂ ಹಂಚಿಕೆ ಮಾಡಬೇಕು, ಸಿಬ್ಬಂದಿಗಳಿಗೆ ಸ್ವಯಂ ನಿವೃತ್ತಿ ಯೋಜನೆ ಜಾರಿಗೆ ತರಬೇಕು ಮತ್ತು ತಕ್ಷಣವೇ ಬಂಡವಾಳ ಹೂಡಿಕೆ ಮಾಡಬೇಕು. ಈ ಮೂರು ಪ್ರಸ್ತಾವನೆಗಳ ಜಾರಿಗೆ ಶೀಘ್ರವೇ ಮಾರ್ಗಸೂಚಿ ನೀಡಿ ಎಂದು ಪ್ರಧಾನಿ ಕಾರ್ಯಾಲಯ ಸೂಚಿಸಿದೆ ಎನ್ನಲಾಗಿದೆ.

ಸದ್ಯ ಬಿಎಸ್‌ಎನ್‌ಎಲ್‌ನಲ್ಲಿ 1.76 ಲಕ್ಷ ಮತ್ತು ಎಂಟಿಎನ್‌ಎಲ್‌ನಲ್ಲಿ 22000 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಪೈಕಿ ನಿವೃತ್ತಿ ವಯಸ್ಸನ್ನು 60ರಿಂದ 50 ಇಳಿಸುವ ಮೂಲಕ ಸುಮಾರು 35000 ಸಿಬ್ಬಂದಿ ಮತ್ತು 50 ವರ್ಷ ಮೇಲ್ಪಟ್ಟವರಿಗೆ ವಿಆರ್‌ಎಸ್‌ ನೀಡುವ ಮೂಲಕ 20000 ಸಿಬ್ಬಂದಿ ಕೈಬಿಡುವ ಯೋಜನೆಯೊಂದನ್ನು ದೂರ ಸಂಪರ್ಕ ಸಚಿವಾಲಯ ಅನುಮೋದಿಸಿತ್ತು ಎಂದು ಇತ್ತೀಚೆಗೆ ವರದಿಯಾಗಿತ್ತು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!
ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್