
ಮುಂಬೈ(ಏ.18): ಮಹತ್ವದ ಬೆಳವಣಿಗೆಯೊಂದರಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ, ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದಿಯೋರಾ ಪರ ಬೆಂಬಲದ ಮಾತುಗಳನ್ನಾಡಿದ್ದಾರೆ.
ಮಿಲಿಂದ್ ದಿಯೋರಾ ಅವರಲ್ಲಿ ಅಪಾರ ರಾಜಕೀಯ ಜ್ಞಾನವಿದ್ದು, ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದ ಸಮಸ್ಯೆಗಳ ಕುರಿತು ಅರಿವಿದೆ ಎಂದು ಮುಖೇಶ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಮಿಲಿಂದ್ ದಿಯೋರಾ, ಮುಖೇಶ್ ಬೆಂಬಲದಿಂದಾಗಿ ಗೆಲುವಿನ ವಿಶ್ವಾಸ ಮತ್ತಷ್ಟು ಹೆಚ್ಚಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮಿಲಿಂದ್ ದಿಯೋರಾ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಇತರ ಸಣ್ಣಪುಟ್ಟ ವ್ಯಾಪಾರಿಗಳೂ ಕೂಡ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ಕುರಿತು ಹೇಳಿಕೆ ನೀಡಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.