
ಮುಂಬೈ(ಜ.08): ಆಧಾರ್ ಯೋಜನೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನಂದನ್ ನಿಲೇಕಣಿ ಅವರನ್ನು ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಡಿಜಿಟಲ್ ಪಾವತಿ ವಿಶೇಷ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ನೂತನ ಯೋಜನೆಗಳು, ಡಿಜಿಟಲ್ ಪಾವತಿಯ ಸಾಧಕ-ಬಾಧಕಗಳು, ಡಿಜಿಟಲ್ ಪಾವತಿಯ ಭದ್ರತೆ ಬಗ್ಗೆ ಈ ವಿಶೇಷ ಸಮಿತಿ ಆಳವಾಗಿ ಅಧ್ಯಯನ ಮಾಡಲಿದೆ. ಡಿಜಿಟಲ್ ಪಾವತಿ ಕುರಿತಂತೆ ಸಲಹೆ ಸೂಚನೆಗಳನ್ನು ಈ ಸಮಿತಿ ನೀಡಲಿದೆ.
ಈ ವಿಶೇಷ ಸಮಿತಿಯಲ್ಲಿ ನಾಲ್ವರು ಸದಸ್ಯರಿರಲಿದ್ದಾರೆ. ಸಮಿತಿಯ ಸದಸ್ಯರಾಗಿ ಎಚ್ ಆರ್ ಖಾನ್, ಕಿಶೋರ್ ಸಾಂಸಿ, ಅರುಣಾ ಶರ್ಮಾ, ಸಂಜಯ್ ಜೈನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಆರ್ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.