
ನವದೆಹಲಿ(ಆ.20): ಪಿಎನ್ಬಿ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐಗೆ ಮೊದಲ ಯಶಸ್ಸು ಸಿಕ್ಕಂತೆ ಗೋಚರಿಸುತ್ತಿದೆ. ಹಗರಣದ ಪ್ರಮುಖ ಆರೋಪಿ ನೀರವ್ ಮೋದಿ ಇಂಗ್ಲೆಂಡ್ನಲ್ಲಿರುವುದನ್ನು ಅಲ್ಲಿನ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಈ ಸಂಬಂಧ ಸಿಬಿಐ ಅಧಿಕಾರಿಗಳು ನೀರವ್ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಇಂಗ್ಲೆಂಡ್ ಗೆ ಮನವಿ ಮಾಡಿದ್ದಾರೆ.
ಇಂಗ್ಲೆಂಡ್ ಅಧಿಕಾರಿಗಳಿಂದ ನೀರವ್ ಮೋದಿ ಇರುವಿಕೆಯ ಸಂಬಂಧ ಮಾಹಿತಿ ಬಂದ ತಕ್ಷಣ, ಸಿಬಿಐ ಅಧಿಕಾರಿಗಳು ಭಾರತೀಯ ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸಿ, ನೀರವ್ ಮೋದಿ ಹಸ್ತಾಂತರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ನೀರವ್ ಮೋದಿ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿರುವುದರಿಂದ ಅವರನ್ನು ತಕ್ಷಣ ವಶಕ್ಕೆ ಪಡೆದುಕೊಳ್ಳುವಂತೆ ಇಂಗ್ಲೆಂಡ್ ಸರಕಾರಕ್ಕೆ ಮನವಿ ಮಾಡಲಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.