
ನವದೆಹಲಿ(ಆ.19): ಮುಂದಿನ ವರ್ಷದಿಂದ ನಗರ ಪ್ರದೇಶಗಳಲ್ಲಿ ರಾತ್ರಿ 9 ಗಂಟೆ ನಂತರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಜೆ 6 ಗಂಟೆಯ ನಂತರ ಎಟಿಎಂಗೆ ಹಣ ಭರ್ತಿ ಮಾಡುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೊಸ ಅಧಿಸೂಚನೆ ಹೊರಡಿಸಿದೆ.
ಇತ್ತೀಚಿಗೆ ಎಟಿಎಂಗೆ ಹಣಗೆ ಸಾಗಿಸುವ ವಾಹನಗಳ ಮೇಲೆ ದಾಳಿ, ಎಟಿಎಂ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಹಣ ಸಾಗಿಸುವ ವಾಹನಕ್ಕೆ ಇಬ್ಬರು ಸಶಸ್ತ್ರ ಗಾರ್ಡ್ಗಳು ಕಡ್ಡಾಯವಾಗಿ ಇರಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊಸ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
ಹೊಸ ಅಧಿಸೂಚನೆ ಪ್ರಕಾರ, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮಧ್ಯಾಹ್ನ 4 ಗಂಟೆಯೊಳಗೆ ಎಟಿಎಂಗೆ ಹಣ ತುಂಬಬೇಕು. ಎಟಿಎಂ ಹಣ ನಿರ್ವಹಣೆ ಮಾಡುವ ಖಾಸಗಿ ಕಂಪನಿಗಳು ಮಧ್ಯಾಹ್ನದೊಳಗಾಗಿ ಬ್ಯಾಂಕ್ ನಿಂದ ಹಣ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ.
ದೇಶಾದ್ಯಂತ ಖಾಸಗಿ ಕಂಪನಿಗಳ ಸುಮಾರು 8 ಸಾವಿರ ವಾಹನಗಳು ನಿತ್ಯ ಸುಮಾರು 15 ಸಾವಿರ ಕೋಟಿ ರುಪಾಯಿ ಹಣವನ್ನು ಬ್ಯಾಂಕ್ ಪರವಾಗಿ ಎಟಿಎಂಗೆ ತುಂಬುತ್ತವೆ. ಕೇಂದ್ರ ಗೃಹ ಸಚಿವಾಲಯದ ಈ ಹೊಸ ಅಧಿಸೂಚನೆ ಫೆಬ್ರವರಿ 8, 2019ರಿಂದ ಜಾರಿಗೆ ಬರಲಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.