
ಮುಂಬೈ(ಆ.12): ಭಾರತೀಯ ರೈಲ್ವೆ ಸೆಪ್ಟೆಂಬರ್ 1ರಿಂದ ಗ್ರಾಹಕರ ಪ್ರಯಾಣಕ್ಕೆ ಉಚಿತ ವಿಮೆಯನ್ನು ನೀಡುವುದಿಲ್ಲ ಎಂದು ಘೋಷಿಸಿದೆ.
ಸೆಪ್ಟೆಂಬರ್ 1ರಿಂದ ಪ್ರಯಾಣಕ್ಕೆ ಉಚಿತ ವಿಮೆ ಸ್ಥಗಿತಗೊಳಿಸಲಾಗುವುದು ಎಂದು ಐಆರ್ಸಿಟಿಸಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಉಚಿತ ವಿಮೆಯು ಐಚ್ಛಿಕ ಆಗಿರಲಿದೆ ಎಂದು ಇಲಖೆ ಸ್ಪಷ್ಟಪಡಿಸಿದೆ.
ಪ್ರಯಾಣಿಕರು ಐಆರ್ಸಿಟಿಸಿ ವೆಬ್ಸೈಟ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ಟಿಕೆಟ್ ಬುಕ್ ಮಾಡುವ ಸಂದರ್ಭ ಉಚಿತ ಪ್ರಯಾಣ ವಿಮೆಯನ್ನು ಪಡೆದುಕೊಳ್ಳಬಹುದು ಅಥವಾ ಪಡೆಯದಿರಲು ಆಯ್ಕೆ ಮಾಡಿಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈಲು ಪ್ರಯಾಣದ ವೇಳೆ ಪ್ರಯಾಣಿಕ ಮೃತಪಟ್ಟರೆ 10 ಲಕ್ಷ ರೂ. ಗರಿಷ್ಠ ಪರಿಹಾರ ಹಾಗೂ ಅಪಘಾತದಿಂದ ವಿಕಲ ಚೇತನರಾದರೆ 7.5 ಲಕ್ಷ ರೂ, ಗಾಯವಾದರೆ 2 ಲಕ್ಷ ರೂ. ವಿಮೆ ಪರಿಹಾರ ಸಿಗುತ್ತದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.