5 ವರ್ಷ ನಷ್ಟಭರಿಸಿ ಇಲ್ಲವೇ ಹಂಚಿಕೆ ನೀತಿ ಬದಲಾಯಿಸಿ!

Published : Jun 29, 2022, 08:59 AM IST
5 ವರ್ಷ ನಷ್ಟಭರಿಸಿ ಇಲ್ಲವೇ ಹಂಚಿಕೆ ನೀತಿ ಬದಲಾಯಿಸಿ!

ಸಾರಾಂಶ

* ಕೇಂದ್ರಕ್ಕೆ ವಿಪಕ್ಷಗಳ ಆಡಳಿತದ ರಾಜ್ಯಗಳ ಬೇಡಿಕೆ * ರಾಜ್ಯಗಳ ಬೇಡಿಕೆ ಬಗ್ಗೆ ಇಂದು ಮಂಡಳಿ ನಿರ್ಧಾರ * 5 ವರ್ಷ ನಷ್ಟಭರಿಸಿ ಇಲ್ಲವೇ ಹಂಚಿಕೆ ನೀತಿ ಬದಲಾಯಿಸಿ

ಚಂಡೀಗಢ(ಜೂ.29): ಜಿಎಸ್‌ಟಿ ಜಾರಿಯಾದ ಬಳಿಕ ರಾಜ್ಯಗಳಿಗೆ ಆದ ನಷ್ಟವನ್ನು ಕೇಂದ್ರ ಸರ್ಕಾರ ಭರಿಸುವ ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ, ಈ ಯೋಜನೆಯನ್ನು ಇನ್ನೂ 5 ವರ್ಷ ವಿಸ್ತರಿಸಿ ಇಲ್ಲವೇ ತೆರಿಗೆ ಆದಾಯ ಹಂಚಿಕೆ ನೀತಿಯಲ್ಲಿ ಬದಲಾವಣೆ ಮಾಡಿ ಎಂದು ವಿಪಕ್ಷಗಳ ಆಡಳಿತದ ರಾಜ್ಯಗಳು ಕೇಂದ್ರವನ್ನು ಒತ್ತಾಯಿಸಿವೆ.

ಮಂಗಳವಾರದಿಂದ ಇಲ್ಲಿ ಆರಂಭವಾದ ಎರಡು ದಿನಗಳ ಜಿಎಸ್‌ಟಿ ಮಂಡಳಿ ಸಭೆಗೂ ಮುನ್ನ ವಿಪಕ್ಷಗಳ ಆಡಳಿತದ ರಾಜ್ಯಗಳು ಇಂಥದ್ದೊಂದು ಬೇಡಿಕೆ ಇಟ್ಟಿವೆ. ಈ ಕುರಿತು ಬುಧವಾರದ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ.

ಬೇಡಿಕೆ ಏನು?:

ನಷ್ಟಭರಿಸುವ ಅವಧಿ 2022ರ ಜುಲೈಗೆ ಮುಗಿಯಲಿದೆ. ಆದರೆ ರಾಜ್ಯಗಳಿಗೆ ಇನ್ನೂ ಹೆಚ್ಚಿನ ತೆರಿಗೆ ಹಣ ಹರಿದು ಬರದೇ ಇರುವ ಕಾರಣ ಇನ್ನೂ 5 ವರ್ಷ ಕೇಂದ್ರ ಸರ್ಕಾರವೇ ನಷ್ಟಭರಿಸಬೇಕು ಎಂದು ರಾಜ್ಯಗಳು ಒತ್ತಾಯಿಸಿವೆ. ಒಂದು ವೇಳೆ ಇದಕ್ಕೆ ಒಪ್ಪದೇ ಹೋದಲ್ಲಿ ಹಾಲಿ ಜಿಎಸ್‌ಟಿ ಸಂಗ್ರಹದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಜಾರಿಯಲ್ಲಿರುವ ಶೇ.50-ಶೇ.50 ಹಂಚಿಕೆ ವಿಧಾನ ಬದಲಾಯಿಸಬೇಕು. ರಾಜ್ಯಗಳಿಗೆ ಶೇ.70-80ರಷ್ಟುಪಾಲು ಕೊಡಬೇಕು ಎಂದು ಅವು ಒತ್ತಾಯಿಸಿವೆ.

ಸುಪ್ರೀಂ ತೀರ್ಪು ಉಲ್ಲೇಖಿಸಿ ಎಚ್ಚರಿಕೆ

ಇತ್ತೀಚಿನ ತೀರ್ಪೊಂದರ ವೇಳೆ ಸುಪ್ರೀಂಕೋರ್ಚ್‌, ಜಿಎಸ್‌ಟಿ ಮಂಡಳಿಯ ನಿರ್ಧಾರ ಪಾಲನೆ ರಾಜ್ಯಗಳಿಗೆ ಕಡ್ಡಾಯವಲ್ಲ. ಅದರ ನಿರ್ಧಾರ ರಾಜ್ಯಗಳ ಪಾಲಿಗೆ ಕೇವಲ ಸಲಹೆ ರೂಪದ್ದು ಎಂದು ಹೇಳಿತ್ತು. ಈ ಅಂಶಗಳನ್ನು ತಮ್ಮ ಬೇಡಿಕೆಯಲ್ಲಿ ಪ್ರಸ್ತಾಪಿಸಿರುವ ರಾಜ್ಯಗಳು, ಒಂದು ವೇಳೆ ಕೇಂದ್ರ ಸರ್ಕಾರ ತಮ್ಮ ಬೇಡಿಕೆಗೆ ಒಪ್ಪದೇ ಹೋದಲ್ಲಿ ತಾವೇ ತೆರಿಗೆ ದರ ನಿಗದಿ ಮಾಡಬಹುದು ಎಂಬ ಪರೋಕ್ಷ ಎಚ್ಚರಿಕೆ ಸಂದೇಶವನ್ನು ರಾಜ್ಯಗಳಿಗೆ ರವಾನಿಸಿವೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!
ಡಿಸೆಂಬರ್‌ 31ರ ಒಳಗೆ ಈ ಇಂಪಾರ್ಟೆಂಟ್‌ ಕೆಲಸ ಪೂರ್ತಿ ಮಾಡಿ, ಮತ್ತೆ ಸರ್ಕಾರ ಈ ಅವಕಾಶ ನೀಡಲ್ಲ..!