ಪಕ್ಕಾ ದುಷ್ಮನಿ: ಮೋದಿ ಬಿಟ್ಟ ‘ಎಣ್ಣೆ’ಗಾಗಿ ನಾನಿದ್ದೇನೆ ಎಂದ ಪಾಕ್ ಪ್ರಧಾನಿ!

Suvarna News   | Asianet News
Published : Feb 04, 2020, 02:02 PM ISTUpdated : Feb 04, 2020, 02:07 PM IST
ಪಕ್ಕಾ ದುಷ್ಮನಿ: ಮೋದಿ ಬಿಟ್ಟ ‘ಎಣ್ಣೆ’ಗಾಗಿ ನಾನಿದ್ದೇನೆ ಎಂದ ಪಾಕ್ ಪ್ರಧಾನಿ!

ಸಾರಾಂಶ

‘ಎಣ್ಣೆ’ಗಾಗಿ ನಾನಿದ್ದೇನೆ ಎಂದ ಪಾಕಿಸ್ತಾನ ಪ್ರಧಾನಿ| ಪ್ರಧಾನಿ ಮೋದಿ ನಿಲ್ಲಿಸಿದ ‘ಎಣ್ಣೆ’ ಖರೀದಿಸುವುದಾಗಿ ಇಮ್ರಾನ್ ಘೋಷಣೆ| ಸಿಎಎ ವಿರೋಧಿಸಿ ಸಂಕಷ್ಟಕ್ಕೆ ಸಿಲುಕಿರುವ ಮಲೇಶಿಯಾಗೆ ನೆರವಿನ ಹಸ್ತ| ಮಲೇಶಿಯಾದಿಂದ ತಾಳೆ ಎಣ್ಣೆ ಆಮದು ನಿಲ್ಲಿಸಿರುವ ಭಾರತ| ಮಲೇಶಿಯಾದಿಂದ ಹೆಚ್ಚಿನ ಪ್ರಮಾಣದಲ್ಲಿ ತಾಳೆ ಎಣ್ಣೆ ಖರೀದಿಸುವುದಾಗಿ ಘೋಷಿಸಿದ ಪಾಕಿಸ್ತಾನ| ಸಿಎಎ ಜಾರಿ ಅನಗತ್ಯ ಎಂದಿದ್ದ ಮಲೇಶಿಯಾ ಪ್ರಧಾನಿ ಮಹತೀರ್ ಮೊಹ್ಮದ್| ಸತ್ಯ ಹೇಳಿದ್ದಕ್ಕೆ ಮಹತೀರ್’ಗೆ  ಭಾರತದ ಶಿಕ್ಷೆ ಎಂದ ಇಮ್ರಾನ್ ಖಾನ್| ಮಲೇಶಿಯಾದಿಂದ 1.1 ಮಿಲಿಯನ್ ಟನ್ ತಾಳೆ ಎಣ್ಣೆ ಖರೀದಿಸುವ ಪಾಕಿಸ್ತಾನ|

ಇಸ್ಲಾಮಾಬಾದ್(ಫೆ.04): ಭಾರತದ ಸಿಎಎ ವಿರೋಧಿಸಿ ಸಂಕಷ್ಟಕ್ಕೆ ಸಿಲಕಿರುವ ಮಲೇಶಿಯಾ ನೆರವಿಗೆ ಬಂದಿರುವ ಪಾಕಿಸ್ತಾನ, ಭಾರತ ನಿಲ್ಲಿಸಿರುವ ತಾಳೆ ಎಣ್ಣೆಯನ್ನು ತಾನು ಖರೀದಿಸುವುದಾಗಿ ಅಭಯ ನೀಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಮಲೇಶಿಯಾದಿಂದ ಹೆಚ್ಚಿನ ಪ್ರಮಾಣದಲ್ಲಿ ತಾಳೆ ಎಣ್ಣೆಯನ್ನು ಖರೀದಿಸುವುದಾಗಿ ಘೋಷಿಸಿದ್ದಾರೆ. ಸಿಎಎ ಕುರಿತು ಮಲೇಶಿಯಾ ಪ್ರಧಾನಿ ಮಹತೀರ್ ಮೊಹ್ಮದ್ ಸತ್ಯವನ್ನೇ ಹೇಳಿದ್ದು, ಅವರ ಬೆಂಬಲಕ್ಕೆ ತಾವಿರುವುದಾಗಿ ಇಮ್ರಾನ್ ಸ್ಪಷ್ಟಪಡಿಸಿದ್ದಾರೆ.

ಸಿಎಎ ವಿರೋಧಿಸಿದ ದೇಶದಿಂದ 'ಎಣ್ಣೆ' ಆಮದು ನಿಲ್ಲಿಸಿದ ಭಾರತ: ಸತ್ಯ ಹೇಳಿದ್ದಕ್ಕೆ 'ಶಿಕ್ಷೆ'?

ಮಲೇಶಿಯಾದಿಂದ ತಾಳೆ ಎಣ್ಣೆ ಆಮದುನ್ನು ನಿಲ್ಲಿಸಿ ಭಾರತ ಕ್ರೂರತೆಯನ್ನು ಮೆರೆದಿದೆ. ಸತ್ಯ ನುಡಿದಿದ್ದಕ್ಕೆ ಭಾರತದ ಪ್ರಧಾನಿ ಮೋದಿ ಈ ಶಿಕ್ಷೆ ನೀಡಿದ್ದು, ಮಲೇಶಿಯಾಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಪಾಕಿಸ್ತಾನದ ಜವಾಬ್ದಾರಿ ಎಂದು ಇಮ್ರಾನ್ ನುಡಿದಿದ್ದಾರೆ.

ಸಿಎಎ ಜಾರಿ ಅನಗತ್ಯ ಎಂದಿದ್ದ ಮಲೇಶಿಯಾ ಪ್ರಧಾನಿ ಮಹತೀರ್ ಮೊಹ್ಮದ್ ಮೇಲೆ ಗರಂ ಆಗಿದ್ದ ಭಾರತ, ಮಲೇಶಿಯಾದಿಂದ ತಾಳೆ ಎಣ್ಣೆ ಆಮದನ್ನು ನಿಲ್ಲಿಸುವ ನಿರ್ಧಾರ ಕೈಗೊಂಡಿತ್ತು.

ವಿಶ್ವದಲ್ಲೇ ಅತೀ ಹೆಚ್ಚು ತಾಳೆ ಎಣ್ಣೆ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿರುವ ಮಲೇಶಿಯಾದಿಂದ ಭಾರತ 2018ರಲ್ಲಿ ಬರೋಬ್ಬರಿ 1.3 ಬಿಲಿಯನ್  ಯುಎಸ್ ಡಾಲರ್ ಮೊತ್ತದ ತಾಳೆ ಎಣ್ಣೆಯನ್ನು ಖರೀದಿಸಿತ್ತು.

ಭಾರತ 'ಎಣ್ಣೆ' ಆಮದು ನಿಲ್ಲಿಸಿದ ರಾಷ್ಟ್ರದ ಪ್ರಧಾನಿಯ ಪ್ರತಿಕ್ರಿಯೆ:ಅವ್ರು ದೊಡ್ಡವರೆಂದ ಮಹತೀರ್!

ಅದರಂತೆ ಪಾಕಿಸ್ತಾನ ಕೂಡ ಕಳೆದ ವರ್ಷ ಮಲೇಶಿಯಾದಿಂದ 1.1 ಮಿಲಿಯನ್ ಟನ್ ತಾಳೆ ಎಣ್ಣೆಯನ್ನು ಖರೀದಿಸಿದ್ದು, ಈ ಬಾರಿ ಆಮದನ್ನು ಹೆಚ್ಚಿಸುವ ಮೂಲಕ ಮಲೇಶಿಯಾ ನೆರವಿಗೆ ಬರುವ ನಿರ್ಣಯ ಕೈಗೊಂಡಿದೆ.

ಅದಾಗ್ಯೂ ತಾಳೆ ಎಣ್ಣೆ ರಫ್ತಿಗೆ ಭಾರತವೇ ಸೂಕ್ತ ಎಂದು ಅರಿತಿರುವ ಮಲೇಶಿಯಾ, ಬಿಕ್ಕಟ್ಟು ಶಮನಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದು, ಇಮ್ರಾನ್ ಖಾನ್ ನೆರವಿನ ಘೋಷಣೆಯನ್ನು ಅಷ್ಟೊಂದು ಗಂಭೀರವಾಗಿ ಪರಿಗಣಿಸದಿರುವುದು ಸತ್ಯ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!
ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್