ಲೋಕಸಭೆಯಲ್ಲಿ ಬಜೆಟ್ ಮಂಡನೆ ಆರಂಭ: 5 ವರ್ಷದ ರಿಪೋರ್ಟ್ ಬಿಚ್ಚಿಟ್ಟ FM!

Published : Feb 01, 2019, 11:37 AM IST
ಲೋಕಸಭೆಯಲ್ಲಿ ಬಜೆಟ್ ಮಂಡನೆ ಆರಂಭ: 5 ವರ್ಷದ ರಿಪೋರ್ಟ್ ಬಿಚ್ಚಿಟ್ಟ FM!

ಸಾರಾಂಶ

ಲೋಕಸಭೆಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ ಮಂಡನೆ ಆರಂಭ| ಮಧ್ಯಂತರ ಬಜೆಟ್ ಮಂಡಿಸುತ್ತಿರುವ ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್| ನವಭಾರತದ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧ ಎಂದ ಗೋಯೆಲ್| ‘ಬ್ಯಾಂಕಿಂಗ್ ಕ್ಷೇತ್ರದಲ್ಲಿನ ಸುಧಾರಣೆ ದೇಶದ ಗತಿ ಬದಲಾಯಿಸಿದೆ’| ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ

ನವದೆಹಲಿ(ಫೆ.01):  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ಮಂಡಿಸುತ್ತಿದ್ದಾರೆ.

ಬಜೆಟ್ ಮಂಡನೆ ಆರಂಭವಾಗುತ್ತಿದ್ದಂತೇ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ನೆನೆದ ಗೋಯೆಲ್, ಜೇಟ್ಲಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

ನಂತರ ಕೇಂದ್ರ ಸರ್ಕಾರದ 5 ವರ್ಷಗಳ ಸಾಧನೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಗೋಯೆಲ್, ಕಳೆದ 5 ವರ್ಷಗಳಲ್ಲಿ ಭಾರತದ ಅಭಿವೃದ್ಧಿಯ ನಾಗಾಲೋಟಕ್ಕೆ ಜಗತ್ತು ಬೆರಗಾಗಿದೆ ಎಂದು ಹೇಳಿದರು. ಪ್ರತಿಯೊಂದೂ ಕ್ಷೇತ್ರದಲ್ಲೂ ಭಾರತ ಅಭಿವೃದ್ಧಿ ಹೊಂದುತ್ತಿದ್ದು, ನವ ಭಾರತದ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಎನ್‌ಡಿಎ ಸರ್ಕಾರ ಜಾರಿಗೆ ತಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿನ ಸುಧಾರಣೆಗಳು ದೇಶದ ಅರ್ಥ ವ್ಯವಸ್ಥೆಯ ಗತಿಯನ್ನೇ ಬದಲಾಯಿಸಿದ್ದು, ಅರ್ಥ ವ್ಯವಸ್ಥೆಯ ಬೀಗ ಇದೀಗ ಜನಸಾಮಾನ್ಯರ ಕೈಯಲ್ಲಿದೆ ಎಂದು ಹಂಗಾಮಿ ವಿತ್ತ ಸಚಿವರು ಹೇಳಿದರು.

ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವಲ್ಲಿ ಎನ್‌ಡಿಎ ಸರ್ಕಾರ ಯಶಸ್ವಿಯಾಗಿದ್ದು, ಪೈಸೆ ಪೈಸೆ ಕೂಡ ದೇಶದ ಅಭಿವೃದ್ಧಿಗೆ ವ್ಯಯವಾಗುತ್ತಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

ಹಂಗಾಮಿ ವಿತ್ತ ಸಚಿವರಿಂದ ಬಜೆಟ್ ಮಂಡನೆ ಮುಂದುವರೆದಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಒಂದೇ ತಿಂಗಳಲ್ಲಿ ಲಕ್ಷ ಸಂಬಳದ ಕೆಲಸದಿಂದ ವಜಾಗೊಂಡ ಆಘಾತ, ತಿಂಗಳಲ್ಲಿ 6 ಆ್ಯಪ್ ಮಾಡಿ ಪುಟಿದೆದ್ದ 21ರ ಐಐಟಿ ಯುವಕ!
ಅಡೋಬ್‌ನ ಮುಂದಿನ ಸಿಇಒ ಆಗಲಿರುವ ಬೆಂಗಳೂರಿನ ಬಸವನಗುಡಿಯ ಅನಿಲ್‌