PM KISAN Samman Nidhi:ಮೇ 31ರೊಳಗೆ ಈ ಕೆಲ್ಸ ಮಾಡದಿದ್ರೆ ಕೇಂದ್ರ ಸರ್ಕಾರ ರೈತರ ಖಾತೆಗೆ ಹಣ ಹಾಕಲ್ಲ!

Published : May 19, 2022, 03:31 PM IST
PM KISAN Samman Nidhi:ಮೇ 31ರೊಳಗೆ ಈ ಕೆಲ್ಸ ಮಾಡದಿದ್ರೆ ಕೇಂದ್ರ ಸರ್ಕಾರ ರೈತರ ಖಾತೆಗೆ ಹಣ ಹಾಕಲ್ಲ!

ಸಾರಾಂಶ

*ಪಿಎಂ ಕಿಸಾನ್  ಸಮ್ಮಾನ್ ನಿಧಿ ಯೋಜನೆಯಲ್ಲಿ ನೋಂದಣಿಗೊಂಡಿರೋ ರೈತರಿಗೆ ಇ-ಕೆವೈಸಿ ಕಡ್ಡಾಯ *ಇ-ಕೆವೈಸಿ ಪೂರ್ಣಗೊಳಿಸಲು ಮೇ 31 ಅಂತಿಮ ಗಡುವು *ಇ-ಕೆವೈಸಿ ಪೂರ್ಣಗೊಳ್ಳದ ಖಾತೆಗೆ ಮುಂದಿನ ಕಂತಿನ ಹಣ ಜಮೆ ಆಗದು

ನವದೆಹಲಿ (ಮೇ 19): ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan Samman Nidhi) ಯೋಜನೆ ಅಡಿಯಲ್ಲಿ ಸಹಾಯಧನ ಪಡೆಯುತ್ತಿರುವ ಎಲ್ಲ ರೈತರು ಮೇ 31ರೊಳಗೆ ಅಗತ್ಯವಾಗಿ ಇ-ಕೆವೈಸಿ (eKYC) ಪೂರ್ಣಗೊಳಿಸಬೇಕು. ಇ-ಕೆವೈಸಿ (eKYC) ಪೂರ್ಣಗೊಳಿಸದ ರೈತರಿಗೆ ಯೋಜನೆಯ ಪೂರ್ಣ ಲಾಭ ಸಿಗೋದಿಲ್ಲ. ಅಲ್ಲದೆ,  ಖಾತೆಗೆ  11 ಕಂತಿನ ಹಣ ಜಮೆ ಆಗೋದಿಲ್ಲ ಎಂದು ಹೇಳಲಾಗಿದೆ. ಈ ಹಿಂದೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಮಾರ್ಚ್ 31 ರ ಗಡುವು (Deadline) ನೀಡಲಾಗಿತ್ತು. ಆ ಬಳಿಕ ಅದನ್ನು ಮೇ 22ಕ್ಕೆ ವಿಸ್ತರಿಸಲಾಗಿತ್ತು. 

ಪಿಎಂ ಕಿಸಾನ್  (PM-KISAN) ಸಮ್ಮಾನ್ ನಿಧಿ ಯೋಜನೆಯಲ್ಲಿ ನೋಂದಣಿಗೊಂಡಿರೋ ರೈತರಿಗೆ ಇ-ಕೆವೈಸಿ ಕಡ್ಡಾಯ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 12 ಕೋಟಿ 56 ಲಕ್ಷ ರೈತರು ನೋಂದಣಿಗೊಂಡಿದ್ದಾರೆ. ಸದ್ಯ ರೈತರು ಈ ಯೋಜನೆಯಡಿ ಸರ್ಕಾರ ಈ ತನಕ 10 ಕಂತುಗಳನ್ನು ಬಿಡುಗಡೆ ಮಾಡಿದೆ. 11ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ. 

ಡೆಬಿಟ್ ಕಾರ್ಡ್‌ ಇಲ್ಲದೆಯೇ ಕ್ಯಾಶ್ ತೆಗೆಯಬಹುದು, ಇಲ್ಲಿವೆ ಸಿಂಪಲ್ ಟಿಪ್ಸ್

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು 2019ರಲ್ಲಿ ಜಾರಿಗೊಳಿಸಲಾಗಿತ್ತು. ಈ ಯೋಜನೆ ಕೃಷಿ ಭೂಮಿ ಹೊಂದಿರೋ ದೇಶದ ಎಲ್ಲ ಭೂ ಹಿಡುವಳಿ ರೈತ ಕುಟುಂಬಗಳಿಗೆ ಆದಾಯದ ಬೆಂಬಲ ನೀಡೋ ಗುರಿ ಹೊಂದಿದೆ. ಈ ಯೋಜನೆಯಡಿಯಲ್ಲಿ ಭೂ ಹಿಡುವಳಿ ಹೊಂದಿರೋ ಎಲ್ಲ ರೈತ ಕುಟುಂಬಗಳು ವಾರ್ಷಿಕ 6,000ರೂ. ಆರ್ಥಿಕ ಪ್ರಯೋಜನ ಪಡೆಯಬಹುದಾಗಿದೆ. ಈ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2000 ರೂ.ನಂತೆ ಮೂರು ಕಂತುಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ (Bank account) ನೇರವಾಗಿ ಜಮಾ (Deposit) ಮಾಡಲಾಗುತ್ತದೆ. ಒಂದು ಆರ್ಥಿಕ ಸಾಲಿನಲ್ಲಿ ಪಿಎಂ ಕಿಸಾನ್ ಯೋಜನೆ ಕಂತುಗಳನ್ನು ಮೂರು ಬಾರಿ ಪಾವತಿಸಲಾಗುತ್ತದೆ. ಮೊದಲನೇ ಕಂತಿನ ಅವಧಿ ಏಪ್ರಿಲ್-ಜುಲೈ.ಎರಡನೇ ಕಂತಿನ ಅವಧಿ ಆಗಸ್ಟ್-ನವೆಂಬರ್ ಹಾಗೂ ಮೂರನೇ ಕಂತಿನ ಅವಧಿ ಡಿಸೆಂಬರ್ ನಿಂದ ಮಾರ್ಚ್. 

ಇ-ಕೆವೈಸಿ ಪೂರ್ಣಗೊಳಿಸುವುದು ಎಲ್ಲಿ?
ಮೊಬೈಲ್ ನಲ್ಲಿ ಕೂಡ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಆದರೆ, ಬಹುತೇಕ ರೈತರು ಆಂಡ್ರಾಯ್ಡ್ ಮೊಬೈಲ್ ಹೊಂದಿರದ ಕಾರಣ ಈ ಪ್ರಕ್ರಿಯೆ ಪೂರ್ಣಗೊಳಿಸಲು ಕಷ್ಟವಾಗುತ್ತಿದೆ. ಇಂಥ ರೈತರಿಗೆ ನೆರವಾಗಲೆಂದು 'ಗ್ರಾಮ್ ಒನ್ ಸೇವಾ ಕೇಂದ್ರಗಳ' ಮೂಲಕ ಇ-ಕೆವೈಸಿ ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ಸಂಖ್ಯೆ ನಮೂದಿಸದಿರುವುದು ಅಥವಾ ತಪ್ಪು ಮೊಬೈಲ್ ಸಂಖ್ಯೆ ನಮೂದಾಗಿದ್ದರೆ ಅಂಥವರು ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಪೂರ್ಣಗೊಳಿಸಲು ಗ್ರಾಮ್ ಒನ್ ಸೇವಾ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಇನ್ನು ಸೈಬರ್ ಗಳಲ್ಲಿ ಕೂಡ ಇ-ಕೆವೈಸಿ ಪೂರ್ಣಗೊಳಿಸಬಹುದು.

LPG Price Hike:ಗ್ಯಾಸ್ ಸಿಲಿಂಡರ್ ದರ ಮತ್ತೆ ಹೆಚ್ಚಳ; ಜನಸಾಮಾನ್ಯರ ಜೇಬಿನ ಮೇಲೆ ಹೆಚ್ಚಿದ ಹೊರೆ

ಪಿಎಂ ಕಿಸಾನ್ ಇ-ಕೆವೈಸಿ ಪೂರ್ಣಗೊಳಿಸೋದು ಹೇಗೆ?
-ಮೊದಲಿಗೆ ಪಿಎಂ ಕಿಸಾನ್ ಅಧಿಕೃತ ವೆಬ್ ಸೈಟ್ https://pmkisan.gov.in ಭೇಟಿ ನೀಡಿ.
-ಈಗ ಬಲ ಭಾಗದಲ್ಲಿ ಹೋಮ್ ಪೇಜ್ ಕೆಳಗೆ ನಿಮಗೆ ಫಾರ್ಮರ್ಸ್ ಕಾರ್ನರ್ ಕಾಣಿಸುತ್ತದೆ.
-ಫಾರ್ಮರ್ಸ್ ಕಾರ್ನರ್ ಕೆಳಗೆ ಒಂದು ಬಾಕ್ಸ್ ಇದ್ದು, ಅದ್ರಲ್ಲಿ ಇ-ಕೆವೈಸಿ ಎಂದಿದೆ.
-ಈಗ ಇ-ಕೆವೈಸಿ ಮೇಲೆ ಕ್ಲಿಕ್ ಮಾಡಿ.
-ಒಂದು ಪುಟ ತೆರೆದುಕೊಳ್ಳುತ್ತದೆ. ಅದ್ರಲ್ಲಿ ಆಧಾರ್ ಇ-ಕೆವೈಸಿ ಭರ್ತಿ ಮಾಡಬಹುದು.
-ಈಗ ನೀವು ಆಧಾರ್ ಸಂಖ್ಯೆ ಹಾಗೂ ಕಾಪ್ಚ ಕೋಡ್ ನಮೂದಿಸಬೇಕು. ಆ ಬಳಿಕ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.
-ಆ ಬಳಿಕ ನೀವು ಆಧಾರ್ ಸಂಖ್ಯೆಗೆ ಲಿಂಕ್ ಆಗಿರೋ ನಿಮ್ಮ ಮೊಬೈಲ್ ಸಂಖ್ಯೆ ನಮೂದಿಸಬೇಕು. ಆ ಬಳಿಕ OTP ಬಟನ್ ಮೇಲೆ ಕ್ಲಿಕ್ ಮಾಡಬೇಕು.
-ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ.
-OTP ನೋಂದಾಯಿಸಿ ಸಬ್ಮಿಟ್ ಮಾಡಲು  Authentication button ಮೇಲೆ ಕ್ಲಿಕ್ ಮಾಡಿ.
- Submit ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ e-KYC ಪೂರ್ಣಗೊಳ್ಳುತ್ತದೆ. 
 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!