
ಮುಂಬೈ(ಜ.01): ಬ್ಯಾಂಕ್ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ಜಪ್ತಿ ಮಾಡಿರುವ ಆಸ್ತಿಯನ್ನು ಹರಾಜಿಗೆ ಹಾಕುವಂತೆ ಬ್ಯಾಂಕ್ಗಳಿಗೆ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಮಲ್ಯ ಅವರ ಜಪ್ತಿ ಮಾಡಿರುವ ಆಸ್ತಿಯನ್ನು ಹರಾಜಿಗೆ ಹಾಕಿ ಅದರಿಂದ ಬರುವ ಹಣದಲ್ಲಿ ಸಾಲ ವಸೂಲಿ ಮಾಡಬೇಕು ಎಂದು ಪಿಎಂಎಲ್ಎ ನ್ಯಾಯಾಲಯ ಆದೇಶ ನೀಡಿದೆ.
ಮಲ್ಯ ಸೇರಿ ಟಾಪ್ 30 ದೊಡ್ಡ ಸುಸ್ತಿದಾರರ ಹೆಸರು ಬಹಿರಂಗ!
ಈಗಾಗಲೇ ವಿಜಯ್ ಮಲ್ಯ ಅವರ 13 ಸಾವಿರ ಕೋಟಿ ರೂ. ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಬ್ಯಾಂಕ್ಗಳ ಒಕ್ಕೂಟ ಈ ಆಸ್ತಿಯನ್ನು ಹರಾಜಿಗೆ ಹಾಕಿ ಸಾಲ ವಸೂಲಿ ಮಾಡಿಕೊಳ್ಳಲು ಕೋರ್ಟ್ ಆದೇಶ ಅನುಕೂಲ ಮಾಡಿಕೊಟ್ಟಿದೆ.
ಆದರೆ ಈ ಆದೇಶಕ್ಕೆ ಸಂಬಂಧಿಸಿ ಬಾಂಬೆ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿರುವ ಪಿಎಂಎಲ್ಎ ನ್ಯಾಯಾಲಯ, ಜನವರಿ 18ರ ಬಳಿಕವೇ ಆಸ್ತಿ ಹರಾಜು ಪ್ರಕ್ರಿಯೆ ನಡೆಸುವಂತೆ ಬ್ಯಾಂಕ್ಗಳಿಗೆ ಸೂಚನೆ ನೀಡಿದೆ.
ಓವಲ್ನಲ್ಲಿ ಮಲ್ಯ ಸಾಹೇಬರು: ಇಲ್ಯಾಕೆ ಅಂದ್ರೆ ಏನಂದ್ರು?
ಉದ್ಯಮಿ ವಿಜಯ್ ಮಲ್ಯ ವಿವಿಧ ಬ್ಯಾಂಕ್ಗಳಿಗೆ 9 ಸಾವಿರ ಕೋಟಿ ರೂ. ಸಾಲ ಮರುಪಾವತಿಸದೇ ಲಂಡನ್ಗೆ ಪರಾರಿಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು.
ಜನವರಿ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.