
ನವದೆಹಲಿ[ಡಿ21]: ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳು ಹಾಗೂ ಬ್ಯಾಂಕಿಂಗ್ ವಲಯದಲ್ಲಿನ ಸುಧಾರಣೆಗಳನ್ನು ಖಂಡಿಸಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ನೌಕರರ ಐದು ಸಂಘಟನೆಗಳು ಜ.8ರಂದು ಸಾರ್ವತ್ರಿಕ ಮುಷ್ಕರಕ್ಕೆ ಕರೆ ಕೊಟ್ಟಿವೆ.
ದೇಶದಲ್ಲಿನ ನಿರುದ್ಯೋಗಿಗಳಿಗೆ ಉದ್ಯೋಗ, ಶಾಶ್ವತ ಉದ್ಯೋಗಗಳ ಹೊರಗುತ್ತಿಗೆ ತಡೆ, ಕಾರ್ಮಿಕರಿಗೆ 21 ಸಾವಿರ ರು. ಕನಿಷ್ಠ ವೇತನ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಹಲವು ಸಂಘಟನೆಗಳು ಈಗಾಗಲೇ ಜನವರಿಯಲ್ಲಿ ಮುಷ್ಕರಕ್ಕೆ ಕರೆ ಕೊಟ್ಟಿವೆ.
ಇದೀಗ, ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ಬಲವರ್ಧನೆ, ಬ್ಯಾಂಕ್ಗಳ ಖಾಸಗೀಕರಣ ಮತ್ತು ಬ್ಯಾಂಕ್ ಶಾಖೆಗಳ ಬಂದ್ ಮಾಡದಂತೆ ಬ್ಯಾಂಕ್ ನೌಕರರ ಸಂಘಟನೆಗಳು ಬಂದ್ಗೆ ಕರೆ ನೀಡಿವೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.