ಸಿಂಗ್-ರಾಜನ್ ಕಾಲದಲ್ಲೇ ವಿನಾಶ: ನಿರ್ಮಲಾ ಹೇಳಿಕೆಗೆ ನಡುಗಿತು ಆಕಾಶ!

Published : Oct 16, 2019, 08:54 PM IST
ಸಿಂಗ್-ರಾಜನ್ ಕಾಲದಲ್ಲೇ ವಿನಾಶ: ನಿರ್ಮಲಾ ಹೇಳಿಕೆಗೆ ನಡುಗಿತು ಆಕಾಶ!

ಸಾರಾಂಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ರಘುರಾಮ್ ರಾಜನ್ ವಿರುದ್ಧ ನಿರ್ಮಲಾ ಆರೋಪ| ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಅಧೋಗತಿಗೆ ಸಿಂಗ್-ರಾಜನ್ ಕಾರಣ ಎಂದ ನಿರ್ಮಲಾ | ಸಾರ್ವಜನಿಕ ವಲಯದ ದುಸ್ಥಿತಿಗೆ ಸಿಂಗ್-ರಾಜನ್ ನೇರ ಕಾರಣ ಎಂದು ವಿತ್ತ ಸಚಿವೆ| ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ಚೈತನ್ಯ ತುಂಬುವುದು ತಮ್ಮ ಆದ್ಯ ಕರ್ತವ್ಯ ಎಂದ ನಿರ್ಮಲಾ| ಹಿಂದಿನ ಸರ್ಕಾರ ಮಾಡಿದ ತಪ್ಪನ್ನು ಸರಿಪಡಿಸುವ ಜವಾಬ್ದಾರಿ ತಮ್ಮ ಮೇಲಿದೆ ಎಂದ ಸೀತಾರಾಮನ್| 'ರಾಜನ್​ ಕಾಲದಲ್ಲಿ ಪ್ರಭಾವಿಶಾಲಿ ವ್ಯಕ್ತಿಗಳಿಗೆ ಫೋನ್​ ಕರೆ ಮೂಲಕ ಸಾಲ ಸಿಗುತ್ತಿತ್ತು'|

ನವದೆಹಲಿ(ಅ.16): ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಹಾಗೂ ಆರ್​ಬಿಐ ಮಾಜಿ ಗವರ್ನರ್​ ರಘುರಾಮ್​ ರಾಜನ್​ ಅವರ ಆಡಳಿತಾವಧಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್​ಗಳು ದುಸ್ಥಿತಿ ತಲುಪಿದ್ದವು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಮತ್ತು ಸಾರ್ವಜನಿಕ ವ್ಯವಹಾರಗಳ ವಿಭಾಗದ ಸಭೆ ಉದ್ದೇಶಿಸಿ ಮಾತನಾಡಿದ ನಿರ್ಮಲಾ, ದೇಶದ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಅಧೋಗತಿಗೆ ತಲುಪಲು ಸಿಂಗ್-ರಾಜನ್ ಜೋಡಿಯೇ ಕಾರಣ ಎಂದು ನೇರವಾಗಿ ಆರೋಪಿಸಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ಚೈತನ್ಯ ತುಂಬುವುದು ತಮ್ಮ ಆದ್ಯ ಕರ್ತವ್ಯ ಎಂದಿರುವ ವಿತ್ತ ಸಚಿವೆ, ಈ ಹಿಂದಿನ ಸರ್ಕಾರ ಮಾಡಿದ ತಪ್ಪನ್ನು ಸರಿಪಡಿಸುವ ಜವಾಬ್ದಾರಿ ತಮ್ಮ ಮೇಲಿದೆ ಎಂದು ಹೇಳಿದ್ದಾರೆ.

ರಘುರಾಮ್ ರಾಜನ್​ ಆರ್​ಬಿಐ ಗವರ್ನರ್​ ಆಗಿದ್ದ ಸಂದರ್ಭದಲ್ಲಿ ಪ್ರಭಾವಿಶಾಲಿ ವ್ಯಕ್ತಿಗಳಿಗೆ ಒಂದು ಫೋನ್​ ಕರೆ ಮೂಲಕ ಸಾಲ ಸಿಗುತ್ತಿತ್ತು. ಅದರಿಂದ ಉಂಟಾದ ತೊಂದರೆಗಳನ್ನು ನಾವು ಎದುರಿಸುತ್ತಿದ್ದೇವೆ ಎಂದು ನಿರ್ಮಲಾ ನೇರವಾಗಿಯೇ ಆರೋಪಿಸಿದ್ದಾರೆ.

ಕಾರ್ಯಕ್ರಮದಲ್ಲಿ ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್​ ಪನಗರಿಯಾ, ಪ್ರೊ. ಜಗದೀಶ್​ ಭಾಗ್ವತಿ ಮತ್ತು ನ್ಯೂಯಾರ್ಕ್​ನಲ್ಲಿರುವ ಭಾರತದ ಕೌನ್ಸಿಲ್​ ಜನರಲ್​  ಸಂದೀಪ್​ ಚಕ್ರವರ್ತಿ ಭಾಗವಹಿಸಿದ್ದರು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್
ಮದ್ಯ ಮಾರಾಟಕ್ಕೆ ಇಳಿದ ಯುವರಾಜ್‌ ಸಿಂಗ್‌, ಒಂದು ತಿಂಗಳ ಸಂಬಳಕ್ಕೆ ಬರುತ್ತೆ ಒಂದು ಬಾಟಲ್‌!