
ಶ್ರೀನಗರ(ಆ. 23): ಪ್ರವಾಸಿಗರನ್ನು ಸೆಳೆಯಲು ವಿಶಿಷ್ಟಪ್ರಯತ್ನಕ್ಕೆ ಕೈ ಹಾಕಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಶ್ರೀನಗರದ ದಾಲ್ ಸರೋವರದಲ್ಲಿ ‘ತೇಲುವ ಎಟಿಎಂ’ ಯಂತ್ರವನ್ನು ಸ್ಥಾಪಿಸಿದೆ.
ಈ ಎಟಿಎಂಅನ್ನು ಎಸ್ಬಿಐ ಮುಖ್ಯಸ್ಥ ದಿನೇಶ್ ಖರಾ ಅವರು ಆ.16ರಂದು ಉದ್ಘಾಟಿಸಿದರು. ಇದು ಶ್ರೀನಗರದ ಮೋಡಿಯನ್ನು ಇನ್ನೂ ಹೆಚ್ಚಿಸಲಿದೆ ಎಂದು ಎಸ್ಬಿಐ ತಿಳಿಸಿದೆ. ದಾಲ್ ಸರೋವರದಲ್ಲಿ ಈಗಾಗಲೇ ತೇಲುವ ತರಕಾರಿ ಮಾರುಕಟ್ಟೆ, ತೇಲುವ ಅಂಚೆ ಕಚೇರಿ ಕೂಡ ಇದೆ.
ಎಸ್ಬಿಐ ಈ ಮೊದಲು 2004ರಲ್ಲಿ ಕೇರಳದಲ್ಲಿ ತೇಲುವ ಎಟಿಎಂಅನ್ನು ಮೊದಲ ಬಾರಿಗೆ ಸ್ಥಾಪಿಸಿತ್ತು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.