ದಕ್ಷಿಣ ಭಾರತದ ಮೊದಲ ಅಂಡರ್‌ಗ್ರೌಂಡ್‌ ಎ.ಸಿ. ಮಾರುಕಟ್ಟೆ ಬೆಂಗಳೂರಿನಲ್ಲಿ ಆರಂಭ! ಏನೆಲ್ಲ ಸೌಲಭ್ಯ ಇವೆ ನೋಡಿ!

By Kannadaprabha NewsFirst Published Aug 26, 2024, 7:34 AM IST
Highlights

ದೆಹಲಿಯ ಪಾಲಿಕಾ ಬಜಾರ್‌ ಮಾದರಿಯಲ್ಲಿ ಬೆಂಗಳೂರಿನ ವಿಜಯನಗರ ಮೆಟ್ರೋ ನಿಲ್ದಾಣದ ಬಳಿ ನೆಲದಾಳದಲ್ಲಿ ನಿರ್ಮಿಸಲಾಗಿರುವ ಹವಾನಿಯಂತ್ರಿತ ಮಾರುಕಟ್ಟೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಉದ್ಘಾಟನೆ ಮಾಡಿದರು. ಈ ಮಾರುಕಟ್ಟೆಗೆ ‘ಶ್ರೀ ಕೃಷ್ಣದೇವರಾಯ ಪಾಲಿಕೆ ಬಜಾರ್‌’ ಎಂದು ನಾಮಕರಣ ಮಾಡಲಾಗಿದೆ.

ವಿಜಯನಗರ (ಆ.26) : ಇದು ಅಂಡರ್‌ಗ್ರೌಂಡ್ ಮಾರುಕಟ್ಟೆಯಾಗಿದ್ದು, ಹವಾನಿಯಂತ್ರಿತವನ್ನು ಹೊಂದಿದೆ. ಈ ಹೊಸ ಮಾರುಕಟ್ಟೆ ವಿಜಯನಗರ ಮೆಟ್ರೋ ನಿಲ್ದಾಣಕ್ಕೆ ಸಮೀಪ ಇದ್ದು, ಇದರಲ್ಲಿ ಒಟ್ಟು 79 ಅಂಗಡಿಗಳಿವೆ.‌ ಇಡೀ‌ ಮಾರುಕಟ್ಟೆಯನ್ನು ಸಂಪೂರ್ಣ ಗ್ರಾನೈಟ್ ನಲ್ಲಿ ಪ್ಲೋರಿಂಗ್ ಮಾಡಲಾಗಿದ್ದು, ಸೆನ್ಸರ್‌ ಹೊಂದಿದ 3 ಗ್ಲಾಸ್ ಸ್ಲೈಡಿಂಗ್ ಡೋರ್‌ಗಳು, 2 ಎಸ್ಕಲೇಟರ್‌ಗಳು ಮತ್ತು ಗೂಡ್ಸ್ ಲಿಫ್ಟ್ ಸೌಲಭ್ಯವನ್ನು ಹೊಂದಿದೆ. ಒಟ್ಟು 26 ಒಳಾಂಗಣ ಎಸಿ ಯೂನಿಟ್ಸ್ ಗಳನ್ನೂ ಕಾಣಬಹುದಾಗಿದೆ.

ಅಷ್ಟೇ ಅಲ್ಲದೇ ಒಂದು ಎಲೆಕ್ಟ್ರೀಕಲ್ ರೂಂ, ಒಂದು ಸ್ಟೋರ್ ಹಾಗೂ ಆಫೀಸ್ ರೂಂ, ಒಟ್ಟು 8 ಎಂಟ್ರಿ ಎಕ್ಸಿಟ್ ಪಾಯಿಂಟ್ ಗಳಿದ್ದು ಸುಲಭವಾಗಿ ಪ್ರವೇಶಿಸಬಹುದಾಗಿದೆ. ಪ್ರತಿ ಅಂಗಡಿಗಳಲ್ಲೂ ಅಗ್ನಿ ನಿಯಂತ್ರಕಗಳಿದ್ದು, ಒಳ್ಳೇಯ ಗಾಳಿ, ಬೆಳಕು ಬರುವಂತಿದೆ.‌

Latest Videos

ಗೃಹಲಕ್ಷ್ಮೀ ದುಡ್ಡಿನಲ್ಲಿ ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ ವೃದ್ಧೆ!

ನಗರೋತ್ಥಾನ ಯೋಜನೆಯಡಿ ಮೊದಲ ಹಂತದಲ್ಲಿ 5 ಕೋಟಿ ರೂ. ವೆಚ್ಛದಲ್ಲಿ ಹಾಗೂ ಸಿಎಂ ನವ ನಗರೋತ್ಥಾನ ಯೋಜನೆಯಡಿ ಎರಡನೇ ಹಂತದಲ್ಲಿ 8 ಕೋಟಿ ರೂ. ವೆಚ್ಛದಲ್ಲಿ ಒಟ್ಟು 13 ಕೋಟಿ ರೂ.‌ ವೆಚ್ಛದಲ್ಲಿ ಈ ಸುಸಜ್ಜಿತ, ಅತ್ಯಾಕರ್ಷಕ ಮಾರುಕಟ್ಟೆ ನಿರ್ಮಾಣ ಮಾಡಲಾಗಿದೆ.

ನೂತನ ಅಂಡರ್‌ ಗ್ರೌಂಡ್ ಪಾಲಿಕೆ ಬಜಾರ್‌ 100 ಮೀಟರ್ ಉದ್ದ, 11 ಮೀಟರ್ ಅಗಲ ಇದ್ದು, 3 ಮೀಟರ್ ಅಗಲದ ಪಾದಚಾರಿ ಮಾರ್ಗವನ್ನು ಹೊಂದಿದೆ. ಪಾದಚಾರಿ ಮಾರ್ಗದ ಎರಡೂ ಬದಿಗೆ ಮಳಿಗೆಗಳನ್ನು ಕಾಣಬಹುದಾಗಿದೆ. ಮಾರುಕಟ್ಟೆಗೆ ಮಳೆ‌ನೀರು ನುಗ್ಗದಂತೆ ಅದರ ಸುತ್ತ ಪ್ರತ್ಯೇಕ ಪೈಪ್‌ಲೈನ್‌ ನಿರ್ಮಿಸಿ ಮಳೆ ನೀರನ್ನು ಮುಖ್ಯರಸ್ತೆಯಲ್ಲಿರುವ ಚರಂಡಿಗೆ ಹರಿಯುವಂತೆ ಮಾಡಲಾಗಿದೆ.

click me!