ನ.01ರವೆರೆಗೆ ಕಾಯಿರಿ: ಎಸ್‌ಬಿಐ ಕೊಡುವ ಕಹಿ ಸುದ್ದಿ ಏನೆಂದು ನೋಡಿರಿ!

Published : Oct 29, 2019, 04:27 PM ISTUpdated : Oct 29, 2019, 04:50 PM IST
ನ.01ರವೆರೆಗೆ ಕಾಯಿರಿ: ಎಸ್‌ಬಿಐ ಕೊಡುವ ಕಹಿ ಸುದ್ದಿ ಏನೆಂದು ನೋಡಿರಿ!

ಸಾರಾಂಶ

ನ.01ಕ್ಕೆ ಕಹಿ ಸುದ್ದಿ ಕೊಡಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ| ಸಾರ್ವಜನಿಕ ವಲಯದ ಮುಂಚೂಣಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ| ಉಳಿತಾಯ ಖಾತೆ ಠೇವಣಿ ಮತ್ತು ಸ್ಥಿರ ಠೇವಣಿ ಮೇಲಿನ ಬಡ್ಡಿ ದರ ಕಡಿತ| ಚಿಲ್ಲರೆ ದೀರ್ಘಾವಧಿ ಠೇವಣಿ ಮೇಲಿನ ಬಡ್ಡಿ ದರ 10 ಬಿಪಿಎಸ್ ಕಡಿಮೆ| ಬೃಹತ್ ಠೇವಣಿಗಳ ಮೇಲಿನ ಬಡ್ಡಿ ದರ 30 ಬಿಪಿಎಸ್' ನಷ್ಟು ಕಡಿತ|

ಮುಂಬೈ(ಅ.29): ಮಹತ್ವದ ಬೆಳವಣಿಗೆಯೊಂದರಲ್ಲಿ ಸಾರ್ವಜನಿಕ ವಲಯದ ಮುಂಚೂಣಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಇದೇ ನವೆಂಬರ್ 1ರಿಂದ ಉಳಿತಾಯ ಖಾತೆಯ ಠೇವಣಿ ಮತ್ತು ಸ್ಥಿರ ಠೇವಣಿ ಮೇಲಿನ ಬಡ್ಡಿ ದರವನ್ನು ಮತ್ತೆ ಕಡಿತ ಮಾಡಲಿದೆ.

ಕಳೆದ ಆಗಸ್ಟ್‌ನಲ್ಲಷ್ಟೇ ಚಿಲ್ಲರೆ ದೀರ್ಘಾವಧಿಯ ಠೇವಣಿಗಳು, ಅಲ್ಪಾವಧಿ ಮತ್ತು ಬೃಹತ್ ಠೇವಣಿಗಳ ಮೇಲಿನ ಬಡ್ಡಿ ದರ ಕಡಿತಗೊಳಿಸಿದ್ದ ಎಸ್‌ಬಿಐ, ಇದೀಗ ಮತ್ತೆ ತನ್ನ ಬಡ್ಡಿದರ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ.

SBI ಕ್ಯಾಶ್ ವಿತ್ ಡ್ರಾ ಲಿಮಿಟ್: ಒಂದೊಂದು ಕಾರ್ಡ್‌ಗೆ ಒಂದೊಂದು ಮೆರಿಟ್!

ಬ್ಯಾಂಕ್‌ಗೆ ಬರುವ ಹಣದ ಪ್ರಮಾಣ ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರ ಇಳಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ. 1 ಲಕ್ಷ ರೂ.ವರೆಗಿನ ಉಳಿತಾಯ ಖಾತೆಯ ಹಣದ ಮೇಲಿನ ಬಡ್ಡಿ ದರವನ್ನು ಶೇ.3.50ರಿಂದ ಶೇ.3.25ಕ್ಕೆ ಇಳಿಸಲಾಗಿದೆ. ಅದರಂತೆ ಉಳಿತಾಯ ಖಾತೆಯ 1 ಲಕ್ಷ ರೂಪಾಯಿ ಮೇಲಿನ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಇನ್ನು ಚಿಲ್ಲರೆ ದೀರ್ಘಾವಧಿ ಠೇವಣಿ ಮೇಲಿನ ಬಡ್ಡಿ ದರ 10 ಬಿಪಿಎಸ್ ಕಡಿಮೆಯಾಗಲಿದ್ದು, ಬೃಹತ್ ಠೇವಣಿಗಳ ಮೇಲಿನ ಬಡ್ಡಿ ದರ 30 ಬಿಪಿಎಸ್' ನಷ್ಟು ಕಡಿತವಾಗಲಿದೆ ಎಂದು ಎಸ್‌ಬಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಬಿಐ ಸಾಲ, ಠೇವಣಿ ಬಡ್ಡಿ ದರ ಮತ್ತೆ ಇಳಿಕೆ!

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಸಾಲ ಮರುಪಾವತಿಯಲ್ಲಿ ದೇಶದಲ್ಲಿಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನ, ಇದು ಕರಾವಳಿಗರ ಪ್ರಾಮಾಣಿಕತೆ
ಸೌದಿ ಅರೇಬಿಯಾದ ತೈಲ ಸಂಸ್ಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ: ಬ್ರೆಂಟ್ ಕಚ್ಚಾ ತೈಲ ಬ್ಯಾರೆಲ್‌ಗೆ 80 ಡಾಲರ್‌ಗೆ ಏರಿಕೆ