ಎಲ್ಲಾ ನೌಕರರಿಗೆ ಸಿಹಿ ಸುದ್ದಿ: ನಿಮ್ಮ ಪಿಎಫ್ ಜೊತೆ ಸೇರಲಿದೆ....!

Published : Mar 03, 2019, 02:29 PM IST
ಎಲ್ಲಾ ನೌಕರರಿಗೆ ಸಿಹಿ ಸುದ್ದಿ: ನಿಮ್ಮ ಪಿಎಫ್ ಜೊತೆ ಸೇರಲಿದೆ....!

ಸಾರಾಂಶ

ನೌಕರರಿಗೆ ಭರ್ಜರಿ ಸುದ್ದಿ ನೀಡಿದ ಸುಪ್ರೀಂ ಕೋರ್ಟ್| ‘ನೌಕರರಿಗೆ ನೀಡುವ ವಿಶೇಷ ಭತ್ಯೆಗಳು ಸಂಬಳದ ಭಾಗ'| ವಿಶೇಷ ಭತ್ಯೆಗಳನ್ನು ಮೂಲವೇತನ ಎಂದೇ ಪರಿಗಣಿಸಬೇಕು ಎಂದ ಸುಪ್ರೀಂ| ನೌಕರರ ಸಂತಸ ಹೆಚ್ಚಿಸಿದ ಸುಪ್ರೀಂ ಕೋರ್ಟ್ ಮಹತ್ವದ ಆದೇಶ| ವಿಶೇಷ ಭತ್ಯೆಯನ್ನೂ ಲೆಕ್ಕಹಾಕಿ ಭವಿಷ್ಯ ನಿಧಿಯ ವಂತಿಗೆ ಕಡಿತ|

ನವದೆಹಲಿ(ಮಾ.03): ನೌಕರರಿಗೆ ಸುಪ್ರೀಂ ಕೋರ್ಟ್ ಆದೇಶದ ಮೂಲಕ ಸಿಹಿ ಸುದ್ದಿಯೊಂದನ್ನು ನೀಡಿದ್ದು, ನೌಕರರಿಗೆ ನೀಡುವ ವಿಶೇಷ ಭತ್ಯೆಗಳು ಸಂಬಳದ ಭಾಗವೇ ಆಗಿರುವುದರಿಂದ ಅದನ್ನು ಮೂಲವೇತನ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದೆ.

ಈ ಹಿನ್ನೆಲೆಯಲ್ಲಿ ಮೂಲ ವೇತನದ ಜೊತೆಗೆ ವಿಶೇಷ ಭತ್ಯೆಯನ್ನೂ ಲೆಕ್ಕಹಾಕಿ ಭವಿಷ್ಯ ನಿಧಿಯ ವಂತಿಗೆ ಕಡಿತ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪಿಎಫ್ ವಂತಿಗೆ ಕಡಿತ ಕುರಿತಂತೆ ಸಲ್ಲಿಕೆಯಾಗಿದ್ದ ಅನೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ, ಕಾಯಂ ನೌಕರರಿಗೆ ನೀಡುವ ಎಲ್ಲಾ ವಿಧದ ಭತ್ಯೆಗಳನ್ನು ಸೇರಿಸಿ ಸೆಕ್ಷನ್ 6ರ ಅನ್ವಯ ಪಿಎಫ್ ವಂತಿಗೆ ಕಡಿತ ಮಾಡಬೇಕು ಎಂದು ಹೇಳಿದೆ.

ಪ್ರಸ್ತುತ ಮೂಲ ವೇತನ ಮತ್ತು ತುಟ್ಟಿ ಭತ್ಯೆ ಮೊತ್ತಕ್ಕೆ ಶೇ. 12ರಷ್ಟು ಪಿಎಫ್ ವಂತಿಗೆ ಕಡಿತ ಮಾಡಲಾಗುತ್ತಿದೆ. ಇಷ್ಟೇ ಮೊತ್ತದ ದೇಣಿಗೆಯನ್ನು ನೌಕರ ಕೆಲಸ ಮಾಡುವ ಸಂಸ್ಥೆಯೂ ಭರಿಸುತ್ತದೆ.

ಕಳೆದ ವಾರವಷ್ಟೆ ಕಾರ್ವಿುಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್​ಒ) ಪಿಎಫ್ ಮೇಲಿನ ಬಡ್ಡಿ ದರವನ್ನು ಶೇ. 8.55ರಿಂದ ಶೇ. 8.65ಕ್ಕೆ ಏರಿಸಿದೆ. ಇದರಿಂದ ಇಪಿಎಫ್​ಒನ ಆರು ಕೋಟಿ ಚಂದಾದಾರರಿಗೆ ಅನುಕೂಲವಾಗಲಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಒಂದು ರಷ್ಯನ್‌ ರುಬೆಲ್‌ಗೆ ಭಾರತದಲ್ಲಿ ಬೆಲೆ ಎಷ್ಟು? ರೂಪಾಯಿ ಅಥವಾ ರುಬೆಲ್‌, ಯಾವುದರ ಮೌಲ್ಯ ಜಾಸ್ತಿ?
ನಿಖಿಲ್‌ ಕಾಮತ್‌ ಅವಿವಾಹಿತರಲ್ಲ, ವಿಚ್ಛೇದಿತ; ಅವರ ಮೊದಲ ಪತ್ನಿ ದೇಶದ ಪ್ರತಿಷ್ಠಿತ ರಿಯಲ್‌ ಎಸ್ಟೇಟ್‌ ಕಂಪನಿ ನಿರ್ದೇಶಕಿ!