
ನವದೆಹಲಿ[ಆ.29]: ತೆರಿಗೆÜದಾರರಿಗೆ ಸಿಹಿ ಸುದ್ದಿಯೊಂದು ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆ ಇದೆ. ವಾರ್ಷಿಕ 5ರಿಂದ 10 ಲಕ್ಷ ರು. ವರೆಗೆ ಆದಾಯ ಗಳಿಸುತ್ತಿರುವವರಿಗೆ ಶೇ.20ರ ಬದಲು ಶೇ.10ರಷ್ಟುತೆರಿಗೆ ವಿಧಿಸುವಂತೆ ಸರ್ಕಾರ ರಚಿಸಿದ ಉನ್ನತ ಮಟ್ಟದ ಸಮಿತಿಯೊಂದು ಶಿಫಾರಸು ಮಾಡಿದೆ.
ಕೇಂದ್ರೀಯ ನೇರ ತೆರಿಗೆ ಮಂಡಳಿಯ ಸದಸ್ಯ ಅಖಿಲೇಶ್ ರಂಜನ್ ನೇತೃತ್ವದ ಕಾರ್ಯ ಪಡೆ ತನ್ನ ವರದಿಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಆ.19ರಂದು ಸಲ್ಲಿಸಿದೆ. 10 ಲಕ್ಷದಿಂದ 20 ಲಕ್ಷ ರು. ಆದಾಯ ಗಳಿಸುತ್ತಿರುವವರಿಗೆ ಶೇ.30ರ ಬದಲು ತೆರಿಗೆಯನ್ನು ಶೇ.20ಕ್ಕೆ ಇಳಿಸುವ ಪ್ರಸ್ತಾಪವೂ ವರದಿಯಲ್ಲಿದೆ.
ಪ್ರಸ್ತುತ 2.5 ಲಕ್ಷ ರು.ವರೆಗೆ ಆದಾಯ ಉಳ್ಳವರಿಗೆ ಶೇ.5ರಷ್ಟುತೆರಿಗೆ ಇದೆ. ಆದರೆ, ಸರ್ಕಾರ ತೆರಿಗೆ ಪಾವತಿಯ ಮೇಲೆ ರಿಯಾಯಿತಿ ಘೋಷಿಸಿರುವುದರಿಂದ 5 ಲಕ್ಷ ರು.ವರೆಗೂ ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. ಆ ಬಳಿಕ 5 ಲಕ್ಷ ರು.ನಿಂದ 10 ಲಕ್ಷ ರು. ವರೆಗೆ ಆದಾಯ ಗಳಿಸುತ್ತಿರುವವರು ಶೇ.20ರಷ್ಟುಹಾಗೂ 10 ಲಕ್ಷಕ್ಕಿಂತಲೂ ಹೆಚ್ಚಿನ ಆದಾಯ ಉಳ್ಳವರು ಶೇ.30ರಷ್ಟಆದಾಯ ತೆರಿಗೆ ಪಾವತಿಸಬೇಕಿದೆ.
ಸಮಿತಿಯ ಶಿಫಾರಸುಗಳನ್ನು ಸರ್ಕಾರ ಇನ್ನೂ ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ. ಅಲ್ಲದೇ ಈ ಶಿಫಾರಸುಗಳನ್ನು ಜಾರಿ ಮಾಡಲು ಸರ್ಕಾರ ಸರ್ಕಾರ ಕಾಲಮಿತಿ ನಿಗದಿಪಡಿಸಿದೆಯೇ ಎನ್ನುವುದೂ ಕೂಡ ತಿಳಿದುಬಂದಿಲ್ಲ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.