ಕರ್ನಾಟಕದ ಕಾಫಿ, ಚಹಾ ತೋಟಗಳಲ್ಲಿ ಟಾಟಾ ಘಮ!

Published : Oct 11, 2024, 08:58 AM IST
ಕರ್ನಾಟಕದ ಕಾಫಿ, ಚಹಾ ತೋಟಗಳಲ್ಲಿ ಟಾಟಾ ಘಮ!

ಸಾರಾಂಶ

ಕೊಡಗು ಜಿಲ್ಲೆಯಲ್ಲಿ ತಮ್ಮದೇ ಆದ ಪಾಲುದಾರ ಟಾಟಾ ಕಾಫಿ ಸಂಸ್ಥೆ ಸಾವಿರಾರು ಎಕರೆ ಕಾಫಿ ತೋಟ ಹೊಂದಿದೆ. ಆದರೂ ಒಂದು ಬಾರಿಯೂ ಕೊಡಗಿನ ತಮ್ಮ ಸಂಸ್ಥೆಗೆ ಯಾವತ್ತೂ ರತನ್‌ ಟಾಟಾ ಭೇಟಿ ನೀಡಿರಲಿಲ್ಲ.

ವಿಘ್ನೇಶ್‌ ಎಂ. ಭೂತನಕಾಡು

ಮಡಿಕೇರಿ(ಅ.11):  ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿ ಹಾಸನ, ಚಿಕ್ಕಮಗಳೂರು, ಪಕ್ಕದ ರಾಜ್ಯ ತಮಿಳುನಾಡು ಹಾಗೂ ಕೇರಳದಲ್ಲಿ ಸುಮಾರು 33 ಸಾವಿರ ಎಕರೆ ಕೃಷಿ ಭೂಮಿ ಹೊಂದಿದ್ದು, ಇಲ್ಲಿ ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ. ಸಾವಿರಾರು ಮಂದಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.

ಟಾಟಾ ಕಾಫಿ ಸಂಸ್ಥೆ ಟಾಟಾ ಸಮೂಹದ ಒಂದು ಭಾಗ. ಟಾಟಾ ಕಾಫಿ ವಿಶ್ವದ ಅತಿದೊಡ್ಡ ಸಮಗ್ರ ಕಾಫಿ ಕೃಷಿ ಮತ್ತು ಸಂಸ್ಕರಣಾ ಕಂಪನಿಗಳಲ್ಲಿ ಒಂದಾಗಿದೆ ಮತ್ತು ಭಾರತೀಯ ಮೂಲದ ಕಾಳುಮೆಣಸು ಉತ್ಪಾದಿಸುವ ಅತಿದೊಡ್ಡ ಸಂಸ್ಥೆಯಾಗಿದೆ. ಕನ್ಸಲ್ಟೆಂಟ್‌ ಕಾಫಿ ಸಂಸ್ಥೆಯೊಂದಿಗೆ 2000 ಇಸವಿಯಲ್ಲಿ ಕೊಡಗು ಸೇರಿ ಹಲವು ಕಡೆ ಟಾಟಾ ಸಂಸ್ಥೆ ಕಾಫಿ ತೋಟ ಖರೀದಿಸಿತು. ಕೊಡಗಿನಲ್ಲಿ ಸುಮಾರು 13 ಕಾಫಿ ತೋಟಗಳು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯಲ್ಲಿ 2 ತೋಟಗಳನ್ನು ಸಂಸ್ಥೆ ಹೊಂದಿದೆ. ಕೊಡಗು ಜಿಲ್ಲೆಯೊಂದರಲ್ಲೇ ಸುಮಾರು 18 ಸಾವಿರ ಎಕರೆ ಜಮೀನನ್ನು ಸಂಸ್ಥೆ ಹೊಂದಿದೆ ಎನ್ನಲಾಗುತ್ತಿದೆ.

ರತನ್ ಟಾಟಾಗೆ ಕುಳ್ಳ ಎಂದು ಕಮೆಂಟ್, ಮಹಿಳೆ ಮೇಲೆ ನೆಟ್ಟಿಗರು ಗರಂ ಆಗುತ್ತಿದ್ದಂತೆ ನೆರವಿಗೆ ಧಾವಿಸಿದ್ದ ಟಾಟಾ!

ಟಾಟಾ ಸಂಸ್ಥೆಯಿಂದ ಜಿಲ್ಲೆಯಲ್ಲಿ ಅರೆಬಿಕಾ ಹಾಗೂ ರೊಬೆಸ್ಟಾ ಕಾಫಿಯನ್ನು ಬೆಳೆಯಲಾಗುತ್ತಿದ್ದು, ಟಾಟಾ ಕಾಫಿಯ ಅರೆಬಿಕಾ ಕಾಫಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಬೇಡಿಕೆಯಿದೆ.

ಕೊಡಗು ಜಿಲ್ಲೆಯ ಐದೂ ತಾಲೂಕಿನಲ್ಲೂ ಟಾಟಾ ಕಾಫಿ ತೋಟಗಳಿವೆ. ಆನಂದಪುರ, ಬಾಲುಮನಿ ದೇವರಕಾಡು, ಕೋಟೆಬೆಟ್ಟ, ಕೋವರ್ ಕೊಲ್ಲಿ, ಕಾನನ್ ಕಾಡು, ಜಂಬೂರು, ಪಾಲಿಬೆಟ್ಟ, ಮಾರ್ಗೊಲಿ, ನಲ್ಲೂರು ಭೂತನಕಾಡು, ಸುಂಟಿಕೊಪ್ಪ, ಎಮ್ಮೆಗುಂಡಿ, ಹೊಸಳ್ಳಿ ಸಾವಿರಾರು ಎಕರೆ ಪ್ರದೇಶದಲ್ಲಿ ಕಾಫಿ ತೋಟವಿದೆ. ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿ ಟೀ ತೋಟಗಳಿದೆ. ಹಾಸನ ಜಿಲ್ಲೆಯ ಅಬ್ಬನ, ಕರಡಿಬೆಟ್ಟ, ಗೂರ್ಗಳ್ಳಿ, ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೈಲ್ ಮನೆ, ಗಬ್ ಗಲ್, ಮೆರ್ತಿಕಾನ್ ನಲ್ಲೂ ಸಂಸ್ಥೆಗೆ ಸೇರಿದ ಕಾಫಿ ಹಾಗೂ ಟೀ ತೋಟಗಳಿವೆ.

ಇಲ್ಲಿನ ಟಾಟಾ ತೋಟಗಳಲ್ಲಿ ಪ್ರಮುಖವಾಗಿ ಕಾಫಿ, ಕಾಳು ಮೆಣಸು, ಟೀ, ಅಡಿಕೆ, ತೆಂಗು, ಬೆಣ್ಣೆಹಣ್ಣನ್ನು ಬೆಳೆಯಲಾಗುತ್ತಿದೆ. ಟಾಟಾ ಕಾಫಿ ಸಂಸ್ಥೆ ಪಾಲಿಬೆಟ್ಟದಲ್ಲಿ ತನ್ನ ಕೇಂದ್ರ ಸ್ಥಾನ ಹೊಂದಿದ್ದು, ವ್ಯವಸ್ಥಾಪಕ ನಿರ್ದೇಶಕರಾಗಿ ಮಂದಣ್ಣ ಕಾರ್ಯನಿರ್ವಹಿಸುತ್ತಿದ್ದಾರೆ.

ಜಿಲ್ಲೆಯ ಕುಶಾಲನಗರದಲ್ಲಿ ಕಾಫಿ ಕ್ಯೂರಿಂಗ್ ವರ್ಕ್ ಇದ್ದು, ಜಿಲ್ಲೆಯ ವಿವಿಧೆಡೆ ಕೊಯ್ಲು ಮಾಡಿದ ಕಾಫಿಯನ್ನು ಇಲ್ಲಿ ಕ್ಯೂರಿಂಗ್ ಮಾಡಲಾಗುತ್ತದೆ. ಟಾಟಾ ಕಾಫಿ ತೋಟದಲ್ಲಿ ಗೆಸ್ಟ್ ಹೌಸ್ ಕೂಡ ಇದ್ದು, ಇಲ್ಲಿಗೆ ಅತಿ ಹೆಚ್ಚು ವಿಐಪಿಗಳು ಆಗಮಿಸುತ್ತಾರೆ. ತಣ್ಣೀರುಹಳ್ಳ, ಕೋಟೆಬೆಟ್ಟ , ಹೊಸಳ್ಳಿ, ಪಾಲಿಬೆಟ್ಟ, ಹುದಿಕೇರಿಯಲ್ಲಿದೆ ಗೆಸ್ಟ್ ಹೌಸ್ ಹೊಂದಿದೆ.

ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿರುವ ಟೀ ಎಸ್ಟೇಟ್ ಸರ್ಕಾರದಿಂದ ಲೀಸ್ ಗೆ ಪಡೆಯಲಾಗಿದೆ. ಟಾಟಾ ಕಾಫಿಯಲ್ಲಿ ಕೂರ್ಗ್ ಫೌಂಡೇಷನ್ ಸ್ಥಾಪನೆ ಮಾಡಲಾಗಿದ್ದು, ಸಿಆರ್‌ಎಸ್ ಫಂಡ್ ಮೂಲಕ ಆರೋಗ್ಯ ಶಿಬಿರ ಸೇರಿ ಹಲವು ಚಟುವಟಿಕೆ ನಡೆಸಲಾಗುತ್ತಿದೆ.

ರತನ್ ಟಾಟಾ ಕೊನೆಯ ಹುಟ್ಟು ಹಬ್ಬದ ವಿಡಿಯೋ, ಆಚರಣೆಯಲ್ಲಿ ಸರಳತೆ ಮೆರೆದಿದ್ದ ಉದ್ಯಮಿ!

ನೆರವಿನ ಹಸ್ತ:

ಸುಂಟಿಕೊಪ್ಪದ ಪಾಲಿಬೆಟ್ಟದಲ್ಲಿ ಸ್ವಸ್ಥ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ವಿಶೇಷ ಚೇತನರ ಏಳಿಗೆಗೆ ಸಂಸ್ಥೆ ಕೆಲಸ ಮಾಡುತ್ತಿದೆ. ರೂರಲ್ ಇಂಡಿಯಾ ಪ್ರಾಜೆಕ್ಟ್ ಮೂಲಕ ಅಮ್ಮತ್ತಿಯಲ್ಲಿ ಆಸ್ಪತ್ರೆಯಿದ್ದು, ಟಾಟಾ ಕಾಫಿಯ ಸಹಯೋಗದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ. ಕಾರ್ಮಿಕರಿಗೆ ಉತ್ತಮ ಚಿಕಿತ್ಸೆಯನ್ನು ಅಲ್ಲಿ ನೀಡಲಾಗುತ್ತಿದೆ.

ಎಸ್ಟೇಟ್‌ನಿಂದ ದೂರ:

ಕೊಡಗು ಜಿಲ್ಲೆಯಲ್ಲಿ ತಮ್ಮದೇ ಆದ ಪಾಲುದಾರ ಟಾಟಾ ಕಾಫಿ ಸಂಸ್ಥೆ ಸಾವಿರಾರು ಎಕರೆ ಕಾಫಿ ತೋಟ ಹೊಂದಿದೆ. ಆದರೂ ಒಂದು ಬಾರಿಯೂ ಕೊಡಗಿನ ತಮ್ಮ ಸಂಸ್ಥೆಗೆ ಯಾವತ್ತೂ ರತನ್‌ ಟಾಟಾ ಭೇಟಿ ನೀಡಿರಲಿಲ್ಲ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್
ಮದ್ಯ ಮಾರಾಟಕ್ಕೆ ಇಳಿದ ಯುವರಾಜ್‌ ಸಿಂಗ್‌, ಒಂದು ತಿಂಗಳ ಸಂಬಳಕ್ಕೆ ಬರುತ್ತೆ ಒಂದು ಬಾಟಲ್‌!