ದೀಪಾವಳಿಗೆ ಆದಾಯ ತೆರಿಗೆ ಕಡಿತ ಘೋಷಣೆ ಬಂಪರ್‌?

Published : Oct 02, 2019, 08:46 AM ISTUpdated : Oct 02, 2019, 05:20 PM IST
ದೀಪಾವಳಿಗೆ ಆದಾಯ ತೆರಿಗೆ ಕಡಿತ ಘೋಷಣೆ ಬಂಪರ್‌?

ಸಾರಾಂಶ

ದೀಪಾವಳಿಗೆ ಆದಾಯ ತೆರಿಗೆ ಕಡಿತ ಘೋಷಣೆ ಬಂಪರ್‌?| ಆರ್ಥಿಕತೆ ಮೇಲೆತ್ತಲು ಕೇಂದ್ರ ಸರ್ಕಾರದ ಗಂಭೀರ ಚಿಂತನೆ| 10 ಲಕ್ಷದವರೆಗಿನ ಆದಾಯಕ್ಕೆ ಶೇ.20 ಬದಲು ಶೇ.10 ತೆರಿಗೆ ಸಂಭವ

ನವದೆಹಲಿ[ಅ.02]: ಹಿಂಜರಿತಕ್ಕೆ ಒಳಗಾಗಿರುವ ದೇಶದ ಆರ್ಥಿಕತೆಯನ್ನು ಮೇಲೆತ್ತಲು ಹತ್ತು ದಿನಗಳ ಹಿಂದೆ ಕಾರ್ಪೋರೆಟ್‌ ತೆರಿಗೆಯನ್ನು ಶೇ.10ರಷ್ಟುಇಳಿಕೆ ಮಾಡಿದ್ದ ಕೇಂದ್ರ ಸರ್ಕಾರ, ಆದಾಯ ತೆರಿಗೆ ಪಾವತಿಸುವವರಿಗೆ ಬಂಪರ್‌ ಕೊಡುಗೆಯೊಂದನ್ನು ಘೋಷಿಸಲು ತಯಾರಿ ನಡೆಸುತ್ತಿದೆ. ಆದಾಯ ತೆರಿಗೆ ಸ್ಲಾ್ಯಬ್‌ಗಳನ್ನು ಕಡಿತಗೊಳಿಸುವ ಮೂಲಕ ಜನರು ಹೆಚ್ಚು ಹೆಚ್ಚು ಖರ್ಚು ಮಾಡುವಂತೆ, ತನ್ಮೂಲಕ ಆರ್ಥಿಕತೆ ಸರಿದಾರಿಗೆ ಬರುವಂತೆ ಮಾಡಲು ಚಿಂತನೆ ನಡೆಸುತ್ತಿದೆ. ದೀಪಾವಳಿಗೂ ಮುನ್ನವೇ ಆದಾಯ ತೆರಿಗೆ ಕಡಿತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ವಾರ್ಷಿಕ 3ರಿಂದ 5 ಲಕ್ಷ ರು.ವರೆಗೆ ಆದಾಯ ಹೊಂದಿರುವವರಿಗೆ ಹಾಲಿ ಶೇ.5ರಷ್ಟುತೆರಿಗೆ ಇದೆ. 5ರಿಂದ 10 ಲಕ್ಷ ರು.ವರೆಗಿನ ಆದಾಯದಾರರಿಗೆ ಶೇ.20 ಹಾಗೂ 10 ಲಕ್ಷ ರು. ಮೇಲ್ಪಟ್ಟಆದಾಯ ಹೊಂದಿದವರಿಗೆ ಶೇ.30ರಷ್ಟುತೆರಿಗೆ ವಿಧಿಸಲಾಗುತ್ತಿದೆ. 2.5 ಲಕ್ಷ ರು.ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ಇದೆ. ಇದೀಗ ಕೇಂದ್ರ ಸರ್ಕಾರ 5ರಿಂದ 10 ಲಕ್ಷ ರು.ವರೆಗಿನ ಆದಾಯ ತೆರಿಗೆ ದರವನ್ನು ಶೇ.20ರಿಂದ ಶೇ.10ಕ್ಕೆ ಕಡಿತಗೊಳಿಸಲು ಚಿಂತನೆ ನಡೆಸಿದೆ. ಹಾಲಿ ಶೇ.30ರಷ್ಟುತೆರಿಗೆ ಪಾವತಿಸುತ್ತಿರುವವರಿಗೆ ಸೆಸ್‌, ಸರ್ಚಾಜ್‌ರ್‍ ಕಡಿತಗೊಳಿಸುವ ಮೂಲಕ ತೆರಿಗೆ ದರವನ್ನು ಶೇ.25ಕ್ಕೆ ಇಳಿಸುವ ಉದ್ದೇಶ ಇದೆ ಎಂದು ಹೇಳಲಾಗಿದೆ.

ಆದಾಯ ತೆರಿಗೆ ಕಡಿತದಿಂದ ಸರ್ಕಾರದ ಬೊಕ್ಕಸದ ಮೇಲಾಗುವ ಪರಿಣಾಮವನ್ನು ಆಧರಿಸಿ ವಿವಿಧ ಲೆಕ್ಕಾಚಾರಗಳನ್ನು ನಡೆಸಲಾಗುತ್ತಿದೆ. ಪ್ರತಿಯೊಬ್ಬ ತೆರಿಗೆದಾರನಿಗೆ ಕನಿಷ್ಠ ಶೇ.5ರಷ್ಟಾದರೂ ತೆರಿಗೆ ವಿನಾಯಿತಿ ನೀಡಬೇಕು ಎಂಬ ಉದ್ದೇಶ ಸರ್ಕಾರದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ದೀಪಾವಳಿಗೂ ಮುನ್ನ ಸರ್ಕಾರದಿಂದ ಘೋಷಣೆ ಹೊರಬೀಳುವ ಸಾಧ್ಯತೆ ಇದೆ. ಇದರಿಂದಾಗಿ ತಕ್ಷಣವೇ ಮಾರುಕಟ್ಟೆಯಲ್ಲಿ ಬೇಡಿಕೆ ಕಂಡುಬರಲಿದ್ದು, ಬಳಕೆ ಹೆಚ್ಚಲಿದೆ. ಹೀಗಾಗಿ ಆರ್ಥಿಕತೆಗೆ ಚೈತನ್ಯ ಸಿಗಲಿದೆ ಎಂಬ ವಿಶ್ಲೇಷಣೆ ಇದೆ.

ಅ.02ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ನಾನು ಠಾಕೂರ್ ನನಗೆ ಆ ಬಗ್ಗೆ ಗರ್ವ ಇದೆ: ವಿವಾದದ ಬಳಿಕ ತನ್ನ ಹೇಳಿಕೆಗೆ ಸ್ಪಷ್ಟನೆ ನೀಡಿದ HDFC ಉದ್ಯೋಗಿ
BHEL OFS: ಬಿಎಚ್‌ಇಎಲ್‌ನಿಂದ ಹೊರಬರುತ್ತಿದೆಯಾ ಕೇಂದ್ರ ಸರ್ಕಾರ? 4,500 ಕೋಟಿ ಸಂಗ್ರಹಕ್ಕೆ ಬಿಗ್ ಪ್ಲಾನ್..