ರಾಜ್ಯ ಸರ್ಕಾರ ಮಾಡಲಿದೆ ಚೀನಾ ಜೊತೆ ಫೈಟ್: ರಾಜ್ಯಪಾಲರ ಉವಾಚ!

Published : Feb 06, 2019, 03:24 PM IST
ರಾಜ್ಯ ಸರ್ಕಾರ ಮಾಡಲಿದೆ ಚೀನಾ ಜೊತೆ ಫೈಟ್: ರಾಜ್ಯಪಾಲರ ಉವಾಚ!

ಸಾರಾಂಶ

ಇಂದಿನಿಂದ ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಅಧಿವೇಶನ| ವಿಧಾನಮಂಡಲದ ಉಭಯ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ| ಸಮ್ಮಿಶ್ರ ಸರ್ಕಾರದ ಕೈಗಾರಿಕಾ ನೀತಿ ಬಿಚ್ಚಿಟ್ಟ ರಾಜ್ಯಪಾಲರು| ಕೈಗಾರಿಕೆ ಅಭಿವೃದ್ಧಿಗಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ಯೋಜನೆ| ಬಂಡವಾಳ ಹೂಡಿಕೆ ಆಕರ್ಷಿಸುವುದರಲ್ಲಿ ರಾಷ್ಟ್ರದಲ್ಲಿಯೇ ಕರ್ನಾಟಕಕ್ಕೆ ಪ್ರಥಮ ಸ್ಥಾನ| 

ಬೆಂಗಳೂರು(ಫೆ.06): ರಾಜ್ಯ ಸಮ್ಮಿಶ್ರ ಸರ್ಕಾರ 2019ರ ಬಜೆಟ್ ಮಂಡನೆಗೆ ಸಿದ್ಧವಾಗಿದ್ದು, ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದೆ.

ಇಂದು ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ, ವಿಧಾನಮಂಡಲದ ಉಭಯ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದರು.

ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಕೈಗಾರಿಕೆ ಅಭಿವೃದ್ಧಿಗಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಿದೆ ಎಂದು ರಾಜ್ಯಪಾಲ ವಜೂ ಭಾಯಿವಾಲಾ ಹೇಳಿದ್ದಾರೆ.

ರಾಜ್ಯದಲ್ಲಿನ ಕೈಗಾರಿಕೆ ಅಭಿವೃದ್ಧಿಗಾಗಿ 9 ಜಿಲ್ಲೆಗಳಲ್ಲಿ ಕೈಗಾರಿಕೆ ಕ್ಲಸ್ಟರ್‌ ಸ್ಥಾಪನೆಗೆ ಮೈತ್ರಿ ಸರ್ಕಾರ ಮುಂದಾಗಿದೆ. ಇದಕ್ಕಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವುದಾಗಿ ರಾಜ್ಯಪಾಲರು ತಿಳಿಸಿದರು.

ಕರ್ನಾಟಕ 2018ನೇ ಸಾಲಿನ ಬಂಡವಾಳ ಹೂಡಿಕೆ ಆಕರ್ಷಿಸುವುದರಲ್ಲಿ ರಾಷ್ಟ್ರದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದು, ಕೈಗಾರಿಕೆ ನೀತಿ 2014-19ರ ಅಡಿಯಲ್ಲಿ 3.49 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹೊಂದಿದೆ.

2.5 ಲಕ್ಷ ಯುವಕರಿಗೆ ತರಬೇತಿ ಯುವಜನತೆಗೆ ಉದ್ಯೋಗಾವಕಾಶ ಸೃಷ್ಟಿಸಲು ಶ್ರಮಿಸುತ್ತಿದ್ದು, 2018-19ರಲ್ಲಿ ತರಬೇತಿ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನಗೊಳಿಸಿದೆ ಎಂದು ರಾಜ್ಯಪಾಲರು ಉಲ್ಲೇಖಿಸಿದರು.

ಬಜೆಟ್ ಅಧಿವೇಶನ: ರಾಜ್ಯಪಾಲ ಬಿಚ್ಚಿಟ್ಟರು ರಾಜ್ಯದ ಆರ್ಥಿಕ ‘ಸತ್ಯ’!

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಬೆಳ್ಳಿ ಬೆಲೆ ಏರಿಕೆಯ ನಾಗಲೋಟ : ಚಿನ್ನದ ಬೆಲೆಯಲ್ಲಿಯೂ ಭಾರಿ ಹೆಚ್ಚಳ
ಭಾರತ - ಇಯು ನಡುವೆ ಶೀಘ್ರವೇ ಮದರ್‌ ಆಫ್‌ ಆಲ್‌ ಡೀಲ್‌