ಟ್ಯಾಕ್ಸ್ ಕಟ್ಟಲು ಆಧಾರ್ ಸಾಕು: ವಿತ್ತ ಸಚಿವರೇ ಥ್ಯಾಂಕ್ಯೂ!

Published : Jul 05, 2019, 04:18 PM IST
ಟ್ಯಾಕ್ಸ್ ಕಟ್ಟಲು ಆಧಾರ್ ಸಾಕು: ವಿತ್ತ ಸಚಿವರೇ ಥ್ಯಾಂಕ್ಯೂ!

ಸಾರಾಂಶ

ಲೋಕಸಭೆಯಲ್ಲಿ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆ| ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ ಕೇಂದ್ರ ಹಣಕಾಸು ಸಚಿವೆ| ಅರ್ಥ ಪಥದ ನೀಲನಕ್ಷೆ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್| ತೆರಿಗೆ ಪಾವತಿಗೆ ಆಧಾರ್ ಕಾರ್ಡ್ ಇದ್ದರೆ ಸಾಕು ಎಂದ ಕೇಂದ್ರ| ಪ್ಯಾನ್ ಕಾರ್ಡ್ ಬದಲಾಗಿ ಆಧಾರ್ ಕಾರ್ಡ್ ಇದ್ದರೂ ತೆರಿಗೆ ಪಾವತಿ|

ನವದೆಹಲಿ(ಜು.05): ಮೋದಿ 2.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಬುತ್ತಿ ಬಿಚ್ಚಿಟ್ಟಿದ್ದಾರೆ. ಬಜೆಟ್ ಭಾಷಣ ಪೂರ್ಣಗೊಳಿಸಿರುವ ನಿರ್ಮಲಾ ಸೀತಾರಾಮನ್, ದೇಶದ ಆರ್ಥಿಕ ಅಭಿವೃದ್ಧಿಯ ನೀಲನಕ್ಷೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಈ ವೇಳೆ ಆದಾಯ ತೆರಿಗೆ ಪಾವತಿಗೆ ಪಾನ್ ಕಾರ್ಡ್ ಕಡ್ಡಾಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ತೆರಿಗೆ ಪಾವತಿಗೆ ಪ್ಯಾನ್ ಕಾರ್ಡ್ ಜೋಡಣೆಗೆ ವಿನಾಯಿತಿ ನೀಡಲಾಗಿದ್ದು, ಒಂದು ವೇಳೆ ತೆರಿಗೆ ಪಾವತಿದಾರರು ಪ್ಯಾನ್ ಕಾರ್ಡ್ ಹೊಂದಿಲ್ಲದಿದ್ದರೆ ಆಧಾರ್ ಸಂಖ್ಯೆ ನಮೂದಿಸಿ ತೆರಿಗೆ ಪಾವತಿಸಬಹುದಾಗಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಜನಸಾಮಾನ್ಯರಿಗೆ ಇಂಧನ ಬೆಲೆ ಏರಿಕೆಯ ಬರೆ: 10 ದಿನಗಳಲ್ಲಿ 3ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ
ಮೇ 25 ಮತ್ತು 26ರಂದು ಎಸ್‌ಬಿಐ ರಾಷ್ಟ್ರವ್ಯಾಪಿ ಮುಷ್ಕರ, 2 ದಿನದ ಮುಷ್ಕರಕ್ಕೆ ಮೇ 27ರವರೆಗೆ ಸಂಕಷ್ಟ