ಬೆಂಬಲ ನೀಡಿದ ಮೈತ್ರಿ ಪಕ್ಷಗಳ ರಾಜ್ಯಗಳಿಗೆ ಬಂಪರ್.. ಬಿಹಾರ, ಆಂಧ್ರಕ್ಕೆ ಸಾವಿರಾರು ಕೋಟಿ ಅನುದಾನ 

Published : Jul 23, 2024, 12:11 PM ISTUpdated : Jul 23, 2024, 12:29 PM IST
ಬೆಂಬಲ ನೀಡಿದ ಮೈತ್ರಿ ಪಕ್ಷಗಳ ರಾಜ್ಯಗಳಿಗೆ ಬಂಪರ್.. ಬಿಹಾರ, ಆಂಧ್ರಕ್ಕೆ ಸಾವಿರಾರು ಕೋಟಿ ಅನುದಾನ 

ಸಾರಾಂಶ

ಮಿತ್ರ ಪಕ್ಷಗಳ ರಾಜ್ಯಗಳಿಗೆ ವಿಶೇಷ ಯೋಜನೆಗಳನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದರು. ಬಿಹಾರ, ಪಶ್ಚಿಮ ಬಂಗಾಲ, ಒಡಿಶಾ ಮತ್ತು ಆಂಧ್ರ ಪ್ರದೇಶ ರಾಜ್ಯಗಳಿಗೆ ಮೂಲಭೂತ ಸೌಕರ್ಯಗಳಿಗೆ ವಿಶೇಷ ಸ್ಕೀಂ ಜಾರಿಗೆ ತರಲಾಗುವುದು ಎಂದು ವಿತ್ತ ಸಚಿವರು ಘೋಷಿಸಿದರು.

ನವದೆಹಲಿ: ಎನ್‌ಡಿಎ ಸರ್ಕಾರ ಅಳಿವು-ಉಳಿವು ನಿರ್ಧರಿಸುವ ಜೆಡಿಯು ಮತ್ತು ಟಿಡಿಪಿ ಪ್ರತಿನಿಧಿಸುವ ರಾಜ್ಯಗಳಿಗೆ ಬಂಪರ್ ಅನುದಾನ ಘೋಷಣೆ ಮಾಡಲಾಗಿದೆ. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಇದಾಗಿದ್ದು, ಮಿತ್ರ ಪಕ್ಷಗಳ ರಾಜ್ಯಗಳಿಗೆ ವಿಶೇಷ ಯೋಜನೆಗಳನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದರು. ಬಿಹಾರ, ಪಶ್ಚಿಮ ಬಂಗಾಲ, ಒಡಿಶಾ ಮತ್ತು ಆಂಧ್ರ ಪ್ರದೇಶ ರಾಜ್ಯಗಳಿಗೆ ಮೂಲಭೂತ ಸೌಕರ್ಯಗಳಿಗೆ ವಿಶೇಷ ಸ್ಕೀಂ ಜಾರಿಗೆ ತರಲಾಗುವುದು ಎಂದು ವಿತ್ತ ಸಚಿವರು ಘೋಷಿಸಿದರು.

ಮಿತ್ರ ಪಕ್ಷದ ರಾಜ್ಯ ಬಿಹಾರಕ್ಕೆ ಹಲವು ಕಾರಿಡಾರ್ ನಿರ್ಮಾಣಕ್ಕೆ ಅನುದಾನ ಘೋಷಣೆ ಮಾಡಿದರು. ಪಟನಾ-ಪೂರ್ಣಿಯಾ ಎಕ್ಸ್‌ಪ್ರೆಸ್‌ ವೇ, ಬಕ್ಸರ್-ಭಾಗಲ್ಪೂರ ಎಕ್ಸ್‌ಪ್ರೆಸ್‌ ವೇ, ಬೋದಗಯಾ ರಾಜಗಿರ, ವೈಶಾಲಿ-ದರ್ಬಂಗ್ ಎಕ್ಸ್‌ಪ್ರೆಸ್ ವೇ ಮತ್ತು ಬೋಧಗಯಾದಲ್ಲಿ ಎರಡು ಲೇನ್ ಸೇತುವೆ ನಿರ್ಮಾಣಕ್ಕಾಗಿ 26,000 ಕೋಟಿ ರೂ. ಅನುದಾನದ ಘೋಷಣೆ ಮಾಡಲಾಗಿದೆ. ಗಂಗಾ ನದಿಗೆ ಎರಡು ಸೇತುವೆಗಳ ನಿರ್ಮಾಣವೂ ಈ ಅನುದಾನದಲ್ಲಿ ಒಳಗೊಂಡಿದೆ.

ಬಿಹಾರ ಪ್ರವಾಹ ಪರಿಸ್ಥಿತಿ ನಿಭಾಯಿಸಲು 11,500 ಕೋಟಿ ಮೀಸಲಿಡಲಾಗುವುದು. ಬಿಹಾರದಲ್ಲಿ ಹೆದ್ದಾರಿ ಜೊತೆ ಹೊಸ ಮೆಡಿಕಲ್ ಕಾಲೇಜ್, ಕ್ರೀಡಾ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಸಚಿವರು ಘೋಷಣೆ ಮಾಡಲಾಗುವುದು. ಬಿಹಾರದ ಗಯಾ ಮತ್ತು ಬುದ್ದಗಯಾ ದೇವಸ್ಥಾನಗಳನ್ನು ಕಾಶಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ನಳಂದಾವನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಲು ಉತ್ತೇಜನ. 

ಮತ್ತೊಮ್ಮೆ ತಮ್ಮ ಸೀರೆ ಮೂಲಕ ಗಮನ ಸೆಳೆದ ನಿರ್ಮಲಾ ಸೀತಾರಾಮನ್, ಮೆಜೆಂತಾ ಸಿಲ್ಕ್ ಸೀರೆಯಲ್ಲಿ ಬಂದ ಸಚಿವೆ

ಆಂಧ್ರ ಪ್ರದೇಶಕ್ಕೆ 15 ಸಾವಿರ ಕೋಟಿ

21,400 ಕೋಟಿ ಅನುದಾನದಲ್ಲಿ ಪಿರಪಂತಿಯಲ್ಲಿ 24 ಸಾವಿರ ಮೆಗಾವ್ಯಾಟ್ ಹೊಸ ವಿದ್ಯುತ್ ಸ್ಥಾವರ ಆರಂಭಿಸಲಾಗಿವುದು. ಆಂಧ್ರಪ್ರದೇಶ ಮರುಸಂಘಟನೆ ಕಾಯಿದೆಯಲ್ಲಿನ ಬದ್ಧತೆಗಳನ್ನು ಈಡೇರಿಸಲು ಸರ್ಕಾರ ಪ್ರಯತ್ನಗಳನ್ನು ಮಾಡಿದೆ. ಆಂಧ್ರ ಪ್ರದೇಶಕ್ಕೆ ವಿಶೇಷ ಆರ್ಥಿಕ ಸಹಾಯಯಡಿಯಲ್ಲಿ 15 ಸಾವಿರ ಕೋಟಿ ನೆರವು ಸಿಗಲಿದೆ.

ಸರ್ಕಾರದಿಂದಲೇ ದೇಶದ 500 ಪ್ರಮುಖ ಕಂಪನಿಗಳಲ್ಲಿ ಯುವಕರಿಗೆ ಒಂದು ವರ್ಷದ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಐದು ವರ್ಷದಲ್ಲಿ ಒಂದು ಕೋಟಿ ಯುವಕರಿಗೆ ಲಾಭ ಸಿಗಲಿದೆ. ಈ ತರಬೇತಿ ವೇಳೆ 5,000 ವೇತನ ಹಾಗೂ 6,000 ರೂ. ಹಣಕಾಸಿನ ನೆರವು ನೀಡಲಾಗುವುದು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!