
ನವದೆಹಲಿ(ಸೆ.24): ಒಂದು ದೇಶವನ್ನು ಮತ್ತೊಂದು ದೇಶ ಅವಲಂಬಿಸಿರುವುದು ಇಂದಿನ ಆಧುನಿಕ ಯುಗದ ಅನಿವಾರ್ಯತೆ. ನಿರ್ದಿಷ್ಟ ದೇಶವೊಂದರಲ್ಲಾಗುವ ಬದಲಾವಣೆಗಳು ಅವಲಂಬಿತ ದೇಶದ ಮೇಲೆ ಪರಿಣಾಮ ಬೀಡುವುದು ಸಹಜ.
ಅದರಂತೆ ಸೌದಿ ಅರೇಬಿಯಾದ ತೈಲಾಗಾರಗಳ ಮೇಲೆ ನಡೆದ ಡ್ರೋಣ್ ದಾಳಿಯ ಪರಿಣಾಮವಾಗಿ, ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಇನ್ನು ಗಾಯದ ಮೇಲೆ ಬರೆ ಎಂಬಂತೆ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಹಾಕುವ ನಿರ್ಧಾರಕ್ಕೆ ಬಂದಿದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ ಎರಡು ರೂ. ಅಬಕಾರಿ ಸುಂಕ ವಿಧಿಸಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.