ಕೊಯಮತ್ತೂರು ರ್‍ಯಾಲಿಯಲ್ಲಿ 50ಕ್ಕೂ ಹೆಚ್ಚು ಕನ್ನಡಿಗರು ಭಾಗಿ, ದಾಖಲೆ ಬರೆದ ರೇಸ್!

Published : Jul 28, 2023, 05:18 PM IST
ಕೊಯಮತ್ತೂರು ರ್‍ಯಾಲಿಯಲ್ಲಿ 50ಕ್ಕೂ ಹೆಚ್ಚು ಕನ್ನಡಿಗರು ಭಾಗಿ, ದಾಖಲೆ ಬರೆದ ರೇಸ್!

ಸಾರಾಂಶ

ಪ್ರತಿಷ್ಠಿತ ಕೊಯಮತ್ತೂರು ರ್‍ಯಾಲಿಗೆ ನಾಳೆ ಆರಂಭಗೊಳ್ಳುತ್ತಿದೆ. ಎರಡು ದಿನದ ರ್‍ಯಾಲಿಯಲ್ಲಿ 50ಕ್ಕೂ ಹೆಚ್ಚು ಕನ್ನಡಿಗರು ಪಾಲ್ಗೊಳ್ಳುತ್ತಿದ್ದಾರೆ. ಈ ಮೂಲಕ ಬರೋಬ್ಬರಿ 76 ಕಾರುಗಳು ಈ ರೇಸ್‌ನಲ್ಲಿ ಸ್ಪರ್ಧಿಸುತ್ತಿದೆ.

ಕೊಯಮತ್ತೂರು(ಜು. 28): ಎಫ್‌ಎಂಎಸ್‌ಸಿಐ ಭಾರತೀಯ ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್‌ (ಐಎನ್‌ಆರ್‌ಸಿ)ನ 3ನೇ ಸುತ್ತು ರ್‍ಯಾಲಿ ಆಫ್‌ ಕೊಯಮತ್ತೂರು ಜುಲೈ 29 ಮತ್ತು 30ರಂದು (ಶನಿವಾರ ಹಾಗೂ ಭಾನುವಾರ) ನಡೆಯಲಿದ್ದು, ಬರೋಬ್ಬರಿ 76 ಕಾರ್‌ಗಳು ಸ್ಪರ್ಧಿಸಲಿವೆ. ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಇದೊಂದು ದಾಖಲೆ ಎನಿಸಿದ್ದು, ಮೋಟಾರ್‌ ಸ್ಪೋರ್ಟ್ಸ್‌ ಅಭಿಮಾನಿಗಳ ಕುತೂಹಲ ಕೆರಳಿಸಿದೆ.

7 ಬಾರಿ ರಾಷ್ಟ್ರೀಯ ಚಾಂಪಿಯನ್‌ ದೆಹಲಿಯ ಗೌರವ್‌ ಗಿಲ್ ಜೊತೆ ಕರ್ನಾಟಕದ 50ಕ್ಕೂ ಹೆಚ್ಚು ಚಾಲಕರು ಹಾಗೂ ಸಹ-ಚಾಲಕರು (ನ್ಯಾವಿಗೇಟರ್‌) ಸ್ಪರ್ಧೆಯಲ್ಲಿದ್ದಾರೆ. ಹಿರಿಯ ಹಾಗೂ ಅನುಭವಿಗಳಾದ ಐಎನ್‌ಆರ್‌ಸಿ ಚಾಂಪಿಯನ್‌ ಕರ್ಣ ಕಡೂರ್‌, ಅಶ್ವಿನ್‌ ನಾಯ್ಕ್‌,  ನಿಕಿಲ್‌ ಪೈ, ಪಿ.ವಿ. ಶ್ರೀನಿವಾಸ್‌ ಮೂರ್ತಿ, ಡೀನ್‌ ಮ್ಯಾಸ್ಕಾರೇನಸ್‌, ಗಗನ್‌ ಕೆ. ಸೇರಿ ಇನ್ನೂ ಅನೇಕರು ಕಣದಲ್ಲಿದ್ದಾರೆ. 

 

ಬೆಂಗಳೂರಿನ ರಾಜೇಂದ್ರಗೆ ರಾಷ್ಟ್ರೀಯ ರ‍್ಯಾಲಿ ಸ್ಪ್ರಿಂಟ್ ಚಾಂಪಿಯನ್‌ಶಿಪ್ ಕಿರೀಟ!

2023ರ ಐಎನ್‌ಆರ್‌ಸಿ ಚಾಂಪಿಯನ್‌ಶಿಪ್‌ನ ಮೊದಲ ಸುತ್ತು ಚೆನ್ನೈನಲ್ಲಿ, 2ನೇ ಸುತ್ತು ಅರುಣಾಚಲ ಪ್ರದೇಶದಲ್ಲಿ ನಡೆದಿತ್ತು. ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಇನ್ನೂ 4 ಸುತ್ತು ಬಾಕಿ ಇದೆ. 4ನೇ ಸುತ್ತು ಹೈದರಾಬಾದ್‌, 5ನೇ ಸುತ್ತು ಬೆಂಗಳೂರಲ್ಲಿ ನಡೆಯಲಿದ್ದು, 6ನೇ ಸುತ್ತು ನಡೆಯುವ ಸ್ಥಳ ಇನ್ನೂ ನಿಗದಿಯಾಗಿಲ್ಲ. 

ವೇಮ್ಸಿ ಮೆರ್ಲಾ ಸ್ಪೋರ್ಟ್ಸ್‌ ಫೌಂಡೇಶನ್‌ ರ್‍ಯಾಲಿಯಲ್ಲಿ ಸ್ಪರ್ಧಿಸುತ್ತಿರುವ ತಂಡಗಳು, ಚಾಲಕರನ್ನು ಬೆಂಬಲಿಸಲು ಮುಂದೆ ಬಂದಿದ್ದು, ಭಾರತೀಯ ಮೋಟಾರ್‌ ಸ್ಪೋರ್ಟ್ಸ್‌ನ ದಿಕ್ಕನ್ನೇ ಬದಲಿಸುತ್ತಿದೆ. 

ವಿಎಂ ಫೌಂಡೇಶನ್‌ ಈ ಸುತ್ತಿನ ಗ್ರಿಡ್‌ನಲ್ಲಿರುವ ಶೇ.50ರಷ್ಟು ಅಂದರೆ 37 ತಂಡಗಳನ್ನು ಬೆಂಬಲಿಸುತ್ತಿದೆ. ಅಗ್ರ ತಂಡಗಳಾದ ಏಮಿಫೀಲ್ಡ್‌ ಱಲಿಯಿಂಗ್‌, ಆರ್ಕ್‌ ಮೋಟಾರ್‌ಸ್ಪೋರ್ಟ್ಸ್‌, ಚೆಟ್ಟಿನಾಡ್‌ ಸ್ಪೋರ್ಟಿಂಗ್‌ ಹಾಗೂ ಅಗ್ರ ಚಾಲಕರಾದ ಮಾಜಿ ಐಎನ್‌ಆರ್‌ಸಿ ಚಾಂಪಿಯನ್‌ ಚೇತನ್‌ ಶಿವರಾಮ್‌, ಪ್ರಿನ್ಸ್‌ (ಮಣೀಂದರ್‌ ಸಿಂಗ್‌) ಹಾಗೂ ಐಮನ್‌ ಅಹ್ಮದ್‌ ಱಲಿಯಲ್ಲಿ ಸ್ಪರ್ಧಿಸಲಿದ್ದಾರೆ. 

ಮೋಟಾರ್‌ ಸ್ಪೋರ್ಟ್ಸ್‌ ಅಂದರೆ ನನಗೆ ಬಹಳ ಅಚ್ಚುಮೆಚ್ಚು ಎಂದಿರುವ ವಿಎಂ ಸ್ಪೋರ್ಟ್ಸ್‌ ಫೌಂಡೇಶನ್‌ನ ಅಧ್ಯಕ್ಷರಾದ ವೇಮ್ಸಿ ಮೆರ್ಲಾ, 2019ರ ಭಾರತೀಯ ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್‌ ಸೇರಿ ಈ ಹಿಂದೆಯೂ ನಾನು ಹಲವು ಎಫ್‌ಎಂಎಸ್‌ಸಿಐ ಕಾರ್ಯಕ್ರಮಗಳಿಗೆ ಪ್ರಾಯೋಜಕನಾಗಿದ್ದೆ. ಭಾರತದ ಶ್ರೇಷ್ಠ ಱಲಿಯಿಸ್ಟ್‌ಗಳು ಹಣದ ಬಗ್ಗೆ ಚಿಂತಿಸದೆ ತಮ್ಮ ಕನಸನ್ನು ಈಡೇರಿಸಿಕೊಳ್ಳಬೇಕೆನ್ನುವ ಉದ್ದೇಶದಿಂದಲೇ ನಾನು ಈ ಫೌಂಡೇಶನ್‌ ಆರಂಭಿಸಿದ್ದೇನೆ ಎಂದು ಮೆರ್ಲಾ ಅವರು ತಮ್ಮ ಉದ್ದೇಶವನ್ನು ತಿಳಿಸಿದ್ದಾರೆ. 

ದೇಹಕ್ಕೆ ಬೆಂಕಿ ಹಚ್ಚಿ 100 ಮೀಟರ್ ಓಟ, 2 ವಿಶ್ವದಾಖಲೆ ನಿರ್ಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ!

ವೇಮ್ಸಿ ಮೆರ್ಲಾ ಸ್ವತಃ ರ್‍ಯಾಲಿಯಲ್ಲಿ ಸ್ಪರ್ಧಿಸುತ್ತಿದ್ದು, ಇದು ಅವರ ಮೊದಲ ಪ್ರಯತ್ನವಾಗಿದೆ. ಜಿಪ್ಸಿ ಕಪ್‌ನಲ್ಲಿ ಅವರು ಕಣಕ್ಕಿಳಿಯಲಿದ್ದು, ರಘುರಾಮ್‌ ಸಾಮಿನಾಥನ್‌ ನ್ಯಾವಿಗೇಟರ್‌ ಆಗಲಿದ್ದಾರೆ.

ವೇಮ್ಸಿ ಫೌಂಡೇಶನ್‌ನಿಂದ ಸಿಕ್ಕಿರುವ ಬೆಂಬಲದ ಬಗ್ಗೆ ಖುಷಿ ವ್ಯಕ್ತಪಡಿಸಿರುವ ಕೊಯಮತ್ತೂರು ಆಟೋ ಸ್ಪೋರ್ಟ್ಸ್‌ ಕ್ಲಬ್‌ನ ಕಾರ್ಯದರ್ಶಿ ಪೃಥ್ವಿರಾಜ್‌, ವಿಎಂ ಫೌಂಡೇಶನ್‌ನಿಂದಾಗಿ ಐಎನ್‌ಆರ್‌ಸಿಎಗೆ ದೊಡ್ಡ ನೆರವು ಸಿಕ್ಕಿದೆ. ಪ್ರತಿ ವರ್ಷ ಆರ್ಥಿಕ ಸಂಕಷ್ಟದಿಂದಾಗಿ ಸ್ಪರ್ಧೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಹಲವು ಚಾಲಕರು ಹಿಂದೆ ಸರಿಯುವುದನ್ನು ನೋಡಿದ್ದೇವೆ. ಆದರೆ ಈ ಬಾರಿ ಅವರೆಲ್ಲರೂ ಕಣಕ್ಕಿಳಿಯಲಿದ್ದಾರೆ. ಈ ಸಲ ಸ್ಪರ್ಧಾ ಕಣ ಬಹಳಷ್ಟು ಪೈಪೋಟಿಯಿಂದ ಕೂಡಿರಲಿದ್ದು, ಅತಿರೋಚಕ ಪೈಪೋಟಿಗೆ ಸಾಕ್ಷಿಯಾಗಲಿದ್ದೇವೆ ಎನ್ನುವ ವಿಶ್ವಾಸವಿದೆ ಎಂದಿದ್ದಾರೆ.
 

PREV
Read more Articles on
click me!

Recommended Stories

ಕಾಂತಾರ ನಟನಿಗೆ ದೈವದ ಅಭಯ, 1.5 ಕೋಟಿ ರೂ ವೆಲ್‌ಫೈರ್ ಕಾರಿನಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ
Tata Sierra vs Maruti Grand Vitara : ಯಾವ SUV ಉತ್ತಮ ಎಂಜಿನ್ ಹೊಂದಿದೆ? ಬೆಲೆ, ವೈಶಿಷ್ಟ್ಯ ತಿಳಿಯಿರಿ